Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕಾಡಮಿ ಆಯ್ಕೆ ಮಾಡಿದ ಎಲ್ಲರಿಗೂ...

ಅಕಾಡಮಿ ಆಯ್ಕೆ ಮಾಡಿದ ಎಲ್ಲರಿಗೂ ಪ್ರಶಸ್ತಿ ಪ್ರದಾನ ಮಾಡಿ: ಸಚಿವ ಸಿ.ಟಿ.ರವಿಗೆ ಮನವಿ

ನಾಟಕ ಅಕಾಡಮಿ ಪ್ರಶಸ್ತಿ ರದ್ದು ವಿಚಾರ

ವಾರ್ತಾಭಾರತಿವಾರ್ತಾಭಾರತಿ8 Jan 2020 10:38 PM IST
share

ಬೆಂಗಳೂರು, ಜ.8: ಪ್ರಸ್ತುತ ಸಾಲಿನ ಕರ್ನಾಟಕ ನಾಟಕ ಅಕಾಡಮಿಯು ಪ್ರಕಟಿತ ಪ್ರಶಸ್ತಿಗಳನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ಜೆ.ಲೊಕೇಶ್ ಅವರು ಸಚಿವ ಸಿ.ಟಿ.ರವಿ ಅವರನ್ನು ಭೇಟಿ ಮಾಡಿ, ಎಲ್ಲವೂ ಬೈಲಾ ನಿಯಮಾವಳಿಗಳ ಪ್ರಕಾರವೇ ನಡೆದಿದೆ. ಹೀಗಾಗಿ, ಹಿಂದೆ ಪ್ರಕಟಿತವಾದ ಪ್ರಶಸ್ತಿ ಪುರಸ್ಕೃತರ ಜತೆಗೆ ಈಗಿನ ಅಕಾಡಮಿ ಆಯ್ಕೆ ಮಾಡಿದ ಪ್ರಶಸ್ತಿ ಪುರಸ್ಕೃತರನ್ನೂ ಸೇರಿಸಿ ಒಟ್ಟಿಗೆ ಪ್ರಶಸ್ತಿ ಪ್ರದಾನ ಮಾಡುವಂತೆ ಮನವಿ ಮಾಡಿದ್ದಾರೆ. 

ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದಿಂದ ನಾಟಕ ಅಕಾಡಮಿಯ ನಿಕಟ ಪೂರ್ವ ಅಧ್ಯಕ್ಷ ಜೆ.ಲೋಕೇಶ್ ಅವರಿಗೆ ಕರೆ ಬಂದ ಹಿನ್ನೆಲೆಯಲ್ಲಿ ನಾಟಕ ಅಕಾಡಮಿಯ ಮಾಜಿ ಸದಸ್ಯರಾದ ಶಶಿಕಾಂತ ಯಡಹಳ್ಳಿ, ಬಿ.ಎಸ್.ವಿದ್ಯಾರಣ್ಯ ಮತ್ತು ಬರಹಗಾರ ಸಿರಿಗೆರೆ ಯರ್ರಿಸ್ವಾಮಿ ಹಾಗೂ ಜೆ.ಲೊಕೇಶ್ ಅವರು ಸಚಿವ ಸಿ.ಟಿ.ರವಿ ಅವರನ್ನು ಭೇಟಿಯಾಗಿ 'ನಾಟಕ ಅಕಾಡಮಿಯ ಹಾಲಿ ಅಧ್ಯಕ್ಷ ಭೀಮಸೇನ್‌ರವರು ನಿಮಗೆ ತಪ್ಪು ಮಾಹಿತಿ ನೀಡಿದ್ದಾರೆ. ಅಲ್ಲದೆ, ಎಲ್ಲವೂ ಬೈಲಾ ನಿಯಮಾವಳಿಗಳ ಪ್ರಕಾರವೇ ನಡೆದಿದ್ದು, ಸರ್ವ ಸದಸ್ಯರು ಹಾಗೂ ರಿಜಿಸ್ಟ್ರಾರ್ ಅವರ ಒಪ್ಪಿಗೆಯ ಮೇರೆಗೆ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ' ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವ ಸಿ.ಟಿ.ರವಿ ಅವರು, ಎಲ್ಲವನ್ನೂ ಇನ್ನೊಮ್ಮೆ ಪರಿಶೀಲಿಸಿ ಒಂದೆರಡು ದಿನಗಳಲ್ಲಿ ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ರಂಗಭೂಮಿ ಪ್ರಾಧಿಕಾರ ಒಂದನ್ನು ಆರಂಭಿಸಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ರಂಗಮಂದಿರಗಳನ್ನು ನಿರ್ಮಿಸಿ ನಿರ್ವಹಣೆ ಮಾಡಬೇಕು ಎಂಬ ಮಹತ್ವಾಂಕಾಂಕ್ಷಿ ಯೋಜನೆಯ ಕುರಿತು ಪ್ರಾತ್ಯಕ್ಷಿಕ ಮಾಹಿತಿಗಳನ್ನು ಸಚಿವರಿಗೆ ಲೋಕೇಶರವರು ಇದೇ ವೇಳೆ ನೀಡಿದ್ದಾರೆ. ಈ ಯೋಜನೆಗೆ ಪೂರಕವಾದ ನೀಲನಕ್ಷೆ, 3ಡಿ ಪ್ರಸೆಂಟೇಶನ್ ಮತ್ತು ಖರ್ಚು ವೆಚ್ಚಗಳ ವಿವರಗಳನ್ನೂ ಒದಗಿಸಿದ್ದಾರೆ. ಸಚಿವರು ಈ ಬಜೆಟ್‌ನಲ್ಲಿ ಇದನ್ನು ಅಳವಡಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದ್ದಾರೆ. ಈ ಹಿಂದೆ ಪ್ರಕಟಿತ ಪ್ರಶಸ್ತಿಗಳನ್ನು ರಂಗಸಾಧಕರಿಗೆ ಪ್ರದಾನ ಮಾಡುವುದು ಹಾಗೂ ರಂಗ ಮಂದಿರ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತರುವುದು. ಈ ಎರಡು ವಿಷಯಗಳ ಕುರಿತು ಸಕಾರಾತ್ಮಕ ಸ್ಪಂದನೆ ಸಚಿವರಿಂದ ದೊರಕಿದೆ ಎಂದು ನಾಟಕ ಅಕಾಡಮಿಯ ನಿಕಟ ಪೂರ್ವ ಅಧ್ಯಕ್ಷ ಜೆ.ಲೋಕೇಶ್ ತಿಳಿಸಿದ್ದಾರೆ

ಪ್ರಸ್ತುತ ಸಾಲಿನ ವಾರ್ಷಿಕ ಪ್ರಶಸ್ತಿಗೆ ರಂಗಭೂಮಿ ಸಾಧಕರ ಪಟ್ಟಿ ಅಂತಿಮಗೊಳಿಸಿದ್ದು, ಹಿರಿಯ ರಂಗಕರ್ಮಿ ಉಮಾಶ್ರೀ ಅವರು ಜೀವಮಾನ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಕಲಾವಿದ ಅರುಣ್ ಸಾಗರ್, ಸಾಹಿತಿ ಲಕ್ಷ್ಮೀಪತಿ ಕೋಲಾರ ಸೇರಿ 25 ಮಂದಿ ವಾರ್ಷಿಕ ರಂಗ ಪ್ರಶಸ್ತಿಗೆ ಹಾಗೂ ಲಿಂಗರಾಜು ದಂಡಿನ ಕಲ್ಲೂರ ಸೇರಿ ನಾಲ್ಕು ಮಂದಿ 4 ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ, ಕರ್ನಾಟಕ ನಾಟಕ ಅಕಾಡಮಿ ಹಾಲಿ ಅಧ್ಯಕ್ಷ ಪ್ರೊ.ಆರ್.ಭೀಮಸೇನ್ ಅವರು ಪ್ರಸ್ತುತ ಸಾಲಿನ ವಾರ್ಷಿಕ ಪ್ರಶಸ್ತಿ ಅಸಿಂಧುಗೊಳಿಸಿ, ಹೊಸ ಪ್ರಶಸ್ತಿ ಪಟ್ಟಿ ಪ್ರಕಟಿಸಿ ಸಾಂಸ್ಕೃತಿಕ ಲೋಕದಲ್ಲಿ ಗೊಂದಲ ಉಂಟು ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X