Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೈನಾ ನೆಹ್ವಾಲ್, ಸಿಂಧು ಶುಭಾರಂಭ

ಸೈನಾ ನೆಹ್ವಾಲ್, ಸಿಂಧು ಶುಭಾರಂಭ

ಸಾಯಿಪ್ರಣೀತ್, ಕೆ.ಶ್ರೀಕಾಂತ್‌ಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ8 Jan 2020 11:01 PM IST
share
ಸೈನಾ ನೆಹ್ವಾಲ್, ಸಿಂಧು ಶುಭಾರಂಭ

 ಕೌಲಾಲಂಪುರ, ಜ.8: ಮಲೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಬುಧವಾರ ಸ್ಟಾರ್ ಶಟ್ಲರ್ ಸೈನಾ ನೆಹ್ವಾಲ್ ಹಾಗೂ ಪಿ.ವಿ. ಸಿಂಧು ಎರಡನೇ ಸುತ್ತಿಗೆ ಪ್ರವೇಶಿಸುವ ಮೂಲಕ ಶುಭಾರಂಭ ಮಾಡಿದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತ ಬಿ.ಸಾಯಿ ಪ್ರಣೀತ್ ಹಾಗೂ ಹಿರಿಯ ಆಟಗಾರ ಕಿಡಂಬಿ ಶ್ರೀಕಾಂತ್ ಪುರುಷರ ಸಿಂಗಲ್ಸ್‌ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ನಿರ್ಗಮಿಸಿದರು.

ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಸೈನಾ ಬೆಲ್ಜಿಯಂನ ಲಿಯಾನ್ ಟಾನ್‌ರನ್ನು ಕೇವಲ 36 ನಿಮಿಷಗಳ ಮೊದಲ ಸುತ್ತಿನ ಪಂದ್ಯದಲ್ಲಿ 21-15, 21-17 ಗೇಮ್‌ಗಳ ಅಂತರದಿಂದ ಮಣಿಸಿದರು. ಈ ಇಬ್ಬರು ಆಟಗಾರ್ತಿಯರು ಮೊದಲ ಬಾರಿ ಮುಖಾಮುಖಿಯಾಗಿದ್ದಾರೆ.

 ಹಾಲಿ ವಿಶ್ವ ಚಾಂಪಿಯನ್ ಸಿಂಧು ಕೇವಲ 35 ನಿಮಿಷಗಳಲ್ಲಿ ಕೊನೆಗೊಂಡ ಮಹಿಳೆಯರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ರಶ್ಯದ ಎವ್‌ಜೆನಿಯಾ ಕೊಸೆಟ್‌ಸ್ಕಾಯಾರನ್ನು 21-15, 21-13 ಗೇಮ್‌ಗಳ ಅಂತರದಿಂದ ಮಣಿಸಿದರು. ವಿಶ್ವದ ನಂ.6ನೇ ಆಟಗಾರ್ತಿ ಸಿಂಧು ಗುರುವಾರ ನಡೆಯಲಿರುವ ಎರಡನೇ ಸುತ್ತಿನಲ್ಲಿ ಜಪಾನ್‌ನ ಅಯಾ ಒಹೊರಿ ಅವರ ಸವಾಲನ್ನು ಎದುರಿಸಲಿದ್ದಾರೆ.

ಕಳೆದ ವರ್ಷ ಇಂಡೋನೇಶ್ಯ ಮಾಸ್ಟರ್ಸ್ ಪ್ರಶಸ್ತಿ ಜಯಿಸಿದ್ದ ಸೈನಾ ಹಾಗೂ ಕಳೆದ ತಿಂಗಳು ವಿಶ್ವ ಟೂರ್ ಫೈನಲ್ಸ್ ಪ್ರಶಸ್ತಿ ಉಳಿಸಿಕೊಳ್ಳಲು ವಿಫಲವಾಗಿದ್ದ ಸಿಂಧು ಆ ಬಳಿಕ ಸತತ ಸರಣಿಗಳಲ್ಲಿ ಬೇಗನೆ ಸೋಲನುಭವಿಸಿ ಹೊರ ನಡೆದಿದ್ದರು.

►ಕಶ್ಯಪ್, ಸಾಯಿ ಪ್ರಣೀತ್, ಶ್ರೀಕಾಂತ್‌ಗೆ ಸೋಲು

 ಇದಕ್ಕೂ ಮೊದಲು ನಡೆದ ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಪ್ರಣೀತ್ ಡೆನ್ಮಾರ್ಕ್‌ನ ರಸ್ಮಸ್ ಗಿಮ್ಕೆ ವಿರುದ್ಧ 11-21, 15-21 ಗೇಮ್‌ಗಳ ಅಂತರದಿಂದ ಸೋತಿದ್ದಾರೆ. ಕೇವಲ 30 ನಿಮಿಷಗಳಲ್ಲಿ ಕೊನೆಗೊಂಡ ಮತ್ತೊಂದು ಪಂದ್ಯದಲ್ಲಿ ದ್ವಿತೀಯ ಶ್ರೇಯಾಂಕದ ಚೈನೀಸ್ ತೈಪೆಯ ಚೌ ಟಿಯೆನ್ ಚೆನ್ ವಿರುದ್ಧ ಶ್ರೀಕಾಂತ್ 17-21, 5-21 ಗೇಮ್‌ಗಳ ಅಂತರದಿಂದ ಸೋತಿದ್ದಾರೆ. ಭಾರತದ ಇನ್ನೋರ್ವ ಹಿರಿಯ ಆಟಗಾರ ಪಿ.ಕಶ್ಯಪ್ 43 ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಜಪಾನ್‌ನ ಸ್ಟಾರ್ ಆಟಗಾರ ಕೆಂಟೊ ಮೊಮೊಟಾ ವಿರುದ್ಧ 17-21, 16-21 ಗೇಮ್‌ಗಳ ಅಂತರದಿಂದ ಸೋತಿದ್ದಾರೆ.

► ಸುನೆಯಮಗೆ ಶಾಕ್ ನೀಡಿದ ಪ್ರಣಯ್

ವಿಶ್ವದ 26ನೇ ರ್ಯಾಂಕಿನ ಆಟಗಾರ ಎಚ್.ಎಸ್.ಪ್ರಣಯ್ ಕೇವಲ 34 ನಿಮಿಷಗಳಲ್ಲಿ ಕೊನೆಗೊಂಡ ಪುರುಷರ ಸಿಂಗಲ್ಸ್ ಪಂದ್ಯದಲ್ಲ್ಲಿ ವಿಶ್ವದ ನಂ.10ನೇ ಆಟಗಾರ ಕಾಂಟಾ ಸುನೆಯಮರನ್ನು 21-9, 21-17 ಗೇಮ್‌ಗಳ ಅಂತರದಿಂದ ಮಣಿಸಿದರು.

ಪ್ರಣಯ್ ಎರಡನೇ ಸುತ್ತಿನಲ್ಲಿ ವಿಶ್ವದ ನಂ.1 ಹಾಗೂ ಅಗ್ರ ಶ್ರೇಯಾಂಕದ ಜಪಾನ್ ಆಟಗಾರ ಕೆಂಟೊ ಮೊಮೊಟಾರನ್ನು ಎದುರಿಸಲಿದ್ದಾರೆ. ಮೊಮೊಟಾ ಪ್ರಸ್ತುತ ಭರ್ಜರಿ ಫಾರ್ಮ್ ನಲ್ಲಿದ್ದಾರೆ.

 ಸಮೀರ್ ವರ್ಮಾ ವಿಶ್ವದ ನಂ.13ನೇ ಆಟಗಾರ ಕಾಂಟಾಫೊನ್ ವಾಂಗ್‌ಚರೊನ್‌ರನ್ನು ನೇರ ಗೇಮ್‌ಗಳ ಅಂತರದಿಂದ ಮಣಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X