Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ್...

ಮುಂಬೈ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ್ ’ಘೋಷಣಾ ಫಲಕ ಹಿಡಿದಿದ್ದ ಮಹಿಳೆಗೆ ಶಿವಸೇನೆ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ9 Jan 2020 6:21 PM IST
share
ಮುಂಬೈ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ್ ’ಘೋಷಣಾ ಫಲಕ ಹಿಡಿದಿದ್ದ ಮಹಿಳೆಗೆ ಶಿವಸೇನೆ ಬೆಂಬಲ

ಮುಂಬೈ,ಜ.9: ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಹಿಂಸಾತ್ಮಕ ದಾಳಿಯನ್ನು ವಿರೋಧಿಸಿ ಇಲ್ಲಿಯ ಗೇಟ್ ವೇ ಆಫ್ ಇಂಡಿಯಾ ಬಳಿ ನಡೆದಿದ್ದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ್ (ಕಾಶ್ಮೀರವನ್ನು ಮುಕ್ತಗೊಳಿಸಿ)’ ಎಂಬ ಘೋಷಣಾ ಫಲಕವನ್ನು ಪ್ರದರ್ಶಿಸಿದ್ದ ಮೆಹಕ್ ಮಿರ್ಝಾ ಪ್ರಭು ಅವರನ್ನು ಶಿವಸೇನೆಯು ಬೆಂಬಲಿಸಿದೆ.

‘ಮುಂಬೈನ ಮರಾಠಿ ಮಹಿಳೆಗೆ ಕಾಶ್ಮೀರಿಗಳ ನೋವು ಅರ್ಥವಾಗುತ್ತದೆ. ಇದು ದೇಶದ್ರೋಹ ಎಂದು ಪ್ರತಿಪಕ್ಷವು ಭಾವಿಸಿದೆ. ಬೇಜವಾಬ್ದಾರಿಗೆ ಇದಕ್ಕಿಂತ ಕೊಳಕು ಉದಾಹರಣೆ ಬೇರೊಂದಿರಲು ಸಾಧ್ಯವಿಲ್ಲ. ಜನರು ತಮ್ಮ ಭಾವನೆಗಳನ್ನು ನಿರ್ಭೀತಿಯಿಂದ ವ್ಯಕ್ತಪಡಿಸುವುದನ್ನು ದೇಶದ್ರೋಹ ಎಂದು ಪ್ರತಿಪಕ್ಷ ಮತ್ತು ಅದರ ಬೆಂಬಲಿಗರು ಭಾವಿಸುತ್ತಿದ್ದರೆ ಅದು ಅವರಿಗೆ(ಪ್ರತಿಪಕ್ಷ) ಮತ್ತು ದೇಶಕ್ಕೆ ಒಳ್ಳೆಯದಲ್ಲ. ಮಹಿಳೆಯ ಸ್ಪಷ್ಟೀಕರಣದ ಬಳಿಕ ಪ್ರತಿಪಕ್ಷಗಳಿಗೆ ಮುಖಭಂಗವಾಗಿದೆ ’ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿಯ ಸಂಪಾದಕೀಯ ಲೇಖನವು ಹೇಳಿದೆ.

‘ಆಕ್ಯುಪೈ ಗೇಟ್ ವೇ’ ಹೆಸರಿನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಪ್ರಭು ಸೇರಿದಂತೆ ನೂರಾರು ಮುಂಬೈ ನಿವಾಸಿಗಳು ಭಾಗವಹಿಸಿದ್ದರು. ಪ್ರಭು ಪ್ರದರ್ಶಿಸಿದ್ದ ಘೋಷಣಾ ಫಲಕ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರನ್ನು ಕೆರಳಿಸಿತ್ತು. ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರು ತನ್ನ ಮೂಗಿನಡಿಗೇ ನಡೆದಿದ್ದ ಇಂತಹ ಭಾರತ ವಿರೋಧಿ ಪ್ರಚಾರವನ್ನು ಸಹಿಸಿಕೊಂಡಿದ್ದು ಹೇಗೆ ಎಂದು ಪಡ್ನವೀಸ್ ಪ್ರಶ್ನಿಸಿದ್ದರು.

ಇದಕ್ಕೆ ಸಂಪಾದಕೀಯದಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆಯು,ಜುಜುಬಿ ಆರೋಪವನ್ನು ಮಾಡುವ ಮೂಲಕ ಪ್ರತಿಪಕ್ಷ ನಾಯಕರು ತಮ್ಮನ್ನು ತಾವೇ ಅಪಹಾಸ್ಯ ಮಾಡಿಕೊಂಡಿದ್ದಾರೆ ಎಂದಿದೆ.

ತಾನು ಪ್ರದರ್ಶಿಸಿದ್ದ ಘೋಷಣಾ ಫಲಕಕ್ಕೆ ವಿರೋಧ ವ್ಯಕ್ತವಾದ ಬಳಿಕ ಪ್ರಭು ಮಂಗಳವಾರ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದರು. ಜೆಎನ್‌ಯು ಹಿಂಸಾಚಾರವನ್ನು ವಿರೋಧಿಸಲು ಮಾತ್ರವಲ್ಲ,ಸಂವಿಧಾನವು ಖಾತರಿಪಡಿಸಿರುವ ಹಕ್ಕುಗಳ ರಕ್ಷಣೆ ಕುರಿತು ಮಾತನಾಡಲೂ ಪ್ರತಿಭಟನಾಕಾರರು ಗೇಟ್ ವೇ ಬಳಿ ಸಮಾವೇಶಗೊಂಡಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ ಪ್ರಭು,‘ಕಳೆದ ಐದು ತಿಂಗಳುಗಳಿಂದಲೂ ಕಾಶ್ಮೀರದಲ್ಲಿ ಅಂತರ್ಜಾಲ ಸ್ಥಗಿತಗೊಂಡಿರುವುದರಿಂದ ಸದ್ಯ ಕಾಶ್ಮೀರಿಗಳು ಹಕ್ಕುವಂಚಿತರಾಗಿದ್ದಾರೆ. ಕಾಶ್ಮೀರಿಗಳೂ ನಮ್ಮಂತೆ ಭಾರತೀಯರು ಎಂದು ನಾವು ಭಾವಿಸುತ್ತಿದ್ದರೆ ಅದಕ್ಕೆ ತಕ್ಕಂತೆ ಅವರನ್ನು ನಡೆಸಿಕೊಳ್ಳುವುದೂ ಅಗತ್ಯವಾಗಿದೆ. ನಮಗೆ ದೊರೆಯುತ್ತಿರುವ ಮೂಲಭೂತ ಹಕ್ಕುಗಳು ಅವರಿಗೂ ದೊರೆಯಬೇಕು. ಅವರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರವಿರಬೇಕು. ಇದಕ್ಕಾಗಿಯೇ ನಾನು ಘೋಷಣಾ ಫಲಕವನ್ನು ಪ್ರದರ್ಶಿಸಿದ್ದೆ ’ಎಂದು ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X