Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ವಿವಿಯಲ್ಲಿ ಪ್ರತಿಭಟನೆ ವೇಳೆ...

ಮೈಸೂರು ವಿವಿಯಲ್ಲಿ ಪ್ರತಿಭಟನೆ ವೇಳೆ 'ಫ್ರೀ ಕಾಶ್ಮೀರ್' ಭಿತ್ತಿ ಪತ್ರ: ವರದಿ ಕೇಳಿದ ರಾಜ್ಯಪಾಲರು

ವಿದ್ಯಾರ್ಥಿನಿ ವಿರುದ್ಧ ಕುಲಸಚಿವರಿಂದ ಪೊಲೀಸರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ9 Jan 2020 10:06 PM IST
share
ಮೈಸೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಭಿತ್ತಿ ಪತ್ರ: ವರದಿ ಕೇಳಿದ ರಾಜ್ಯಪಾಲರು

ಮೈಸೂರು,ಜ.9: ಜೆಎನ್‍ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಬುಧವಾರ ಮೈಸೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿನಿಯೋರ್ವಳು 'ಫ್ರೀ ಕಾಶ್ಮೀರ್' ಭಿತ್ತಿ ಪತ್ರ ಹಿಡಿದುಕೊಂಡಿದ್ದು, ಘಟನೆ ಸಂಬಂಧ ರಾಜ್ಯಪಾಲರು ವರದಿ ಕೇಳಿದ್ದಾರೆ.

ಮಾನಸ ಗಂಗೋತ್ರಿಯ ಕ್ಯಾಂಪಸ್‍ನಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟ ಮತ್ತು ಮೈಸೂರು ವಿವಿ ಸಂಶೋಧಕರ ಸಂಘದ ವತಿಯಿಂದ ಜ.8 ರಂದು ಜೆಎನ್‍ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪಂಜಿನ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ವಿದ್ಯಾರ್ಥಿಯೋರ್ವಳು 'ಪ್ರೀ ಕಾಶ್ಮೀರ್' ಭಿತ್ತಿ ಪತ್ರ ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿದ್ದ ಪತ್ರಿಕಾ ವರದಿ ಆಧರಿಸಿ ಸಿಂಡಿಕೇಟ್ ಸದಸ್ಯರೊಬ್ಬರು ಕುಲಪತಿಗಳಿಗೆ ದೂರು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮೈಸೂರು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.

ಈ ಸಂಬಂಧ “ವಾರ್ತಾಭಾರತಿ”ಯೊಂದಿಗೆ ಗುರುವಾರ ಕುಲಸಚಿವ ಪ್ರೊ.ಶಿವಪ್ಪ ಮಾತನಾಡಿ, ವಿವಿ ಕ್ಯಾಂಪಸ್ ಆವರಣದಲ್ಲಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ವಿದ್ಯಾರ್ಥಿನಿಯೋರ್ವಳು ರಾಷ್ಟ್ರದ ಐಕ್ಯತೆಗೆ ಧಕ್ಕೆ ತರುವಂತಹ 'ಫ್ರೀ ಕಾಶ್ಮೀರ್' ಎಂಬ ಬರಹದ ಭಿತ್ತಿ ಪತ್ರ ಪ್ರದರ್ಶನ ಮಾಡಿದ್ದು ನಮ್ಮ ಗಮನಕ್ಕೆ ಬಂದಿದೆ. ಈ ಸಂಬಂಧ ಪ್ರತಿಭಟನೆ ನಡೆಸಿದ ದಲಿತ ವಿದ್ಯಾರ್ಥಿ ಒಕ್ಕೂಟ ಮತ್ತು ವಿವಿ ಸಂಶೋಧಕರ ಸಂಘದವರಿಗೆ ನೋಟಿಸ್ ನೀಡಲಾಗಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೂ ದೂರು ನೀಡಲಾಗಿದೆ ಎಂದು ಹೇಳಿದರು. ಈ ಘಟನೆ ಸಂಬಂಧ ರಾಜ್ಯಪಾಲರು ವರದಿ ಕೇಳಿದ್ದಾರೆ. ಇಂದು ಎಷ್ಟೇ ಸಮಯ ಅದರೂ ವರದಿ ನೀಡಲಾಗುವುದು ಎಂದು ಹೇಳಿದರು.

ಮೈಸೂರು ವಿವಿ ಕ್ಯಾಂಪಸ್ ಒಳಗೆ ಮಾಡುವ ಪ್ರತಿಭಟನಗೆ ಇದುವರೆಗೂ ಅನುಮತಿ ಪಡೆಯುತ್ತಿರಲಿಲ್ಲ, ಅದೇ ರೀತಿ ನಿನ್ನೆ ಜೆಎನ್‍ಯು ನಲ್ಲಿ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಕ್ಯಾಂಪಸ್‍ನಿಂದ ಹೊರಗೆ ಬಂದಾಗ ಯಾರೋ ಇಂತಹ ಭಿತ್ತಿ ಪತ್ರವನ್ನು ಪ್ರದರ್ಶನ ಮಾಡಿದ್ದಾರೆ. ಅವರು ಯಾರು ಎಂಬುದು ನಮಗೆ ಗೊತ್ತಿಲ್ಲ.
-ಮರಿದೇವಯ್ಯ, ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ

ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಯಾರೋ ಉದ್ದೇಶಪೂರ್ವಕವಾಗಿ ಇಂತಹ ಭಿತ್ತಿ ಪತ್ರ ಪ್ರದರ್ಶನ ಮಾಡಿದ್ದಾರೆ. ಭಿತ್ತಿ ಪತ್ರ ಪ್ರದರ್ಶನ ಮಾಡಿರುವವರಿಗೆ ಪ್ರತಿಭಟನೆ ನಡೆಸಿರುವ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೂ ಸಂಬಂಧವಿಲ್ಲ, ನಮ್ಮ ಹೋರಾಟ ಮತ್ತು ಒಗ್ಗಟ್ಟನ್ನು ಮುರಿಯಬೇಕು ಎಂಬ ಸಂಚು ನಡೆಯುತ್ತಿದೆ.
-ಮಹೇಶ್ ಸೋಸ್ಲೆ, ಮೈಸೂರು ವಿವಿ ಸಂಶೋಧಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X