Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಕದಿನ ಕ್ರಿಕೆಟ್‌ಗೆ ಧೋನಿ ಶೀಘ್ರವೇ...

ಏಕದಿನ ಕ್ರಿಕೆಟ್‌ಗೆ ಧೋನಿ ಶೀಘ್ರವೇ ವಿದಾಯ: ರವಿ ಶಾಸ್ತ್ರಿ

ವಾರ್ತಾಭಾರತಿವಾರ್ತಾಭಾರತಿ9 Jan 2020 11:39 PM IST
share
ಏಕದಿನ ಕ್ರಿಕೆಟ್‌ಗೆ ಧೋನಿ ಶೀಘ್ರವೇ ವಿದಾಯ: ರವಿ ಶಾಸ್ತ್ರಿ

ಮುಂಬೈ, ಜ.9: ಟ್ವೆಂಟಿ-20 ಕ್ರಿಕೆಟ್‌ನತ್ತ ಹೆಚ್ಚು ಗಮನ ನೀಡುವ ಉದ್ದೇಶಕ್ಕಾಗಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಏಕದಿನ ಕ್ರಿಕೆಟ್‌ನಿಂದ ಶೀಘ್ರವೇ ನಿವೃತ್ತರಾಗಲಿದ್ದಾರೆ ಎಂದು ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ತಿಳಿಸಿದ್ದಾರೆ. ‘‘ಐಸಿಸಿಯ ಎರಡು ವಿಶ್ವಕಪ್‌ಗಳನ್ನು ಜಯಿಸಿರುವ ತಂಡದ ನಾಯಕರಾಗಿದ್ದ ಧೋನಿ ಅವರೊಂದಿಗೆ ತಾನು ಮಾತುಕತೆ ನಡೆಸಿದ್ದೇನೆ. ಅವರು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅವರು ಏಕದಿನ ಕ್ರಿಕೆಟ್‌ನಿಂದ ಶೀಘ್ರವೇ ನಿವೃತ್ತರಾಗುವ ಎಲ್ಲ ಸಾಧ್ಯತೆ ಇದೆ’’ಎಂದರು. ಆಂಗ್ಲ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಶಾಸ್ತ್ರಿ ಅವರು‘‘ಧೋನಿ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲೂ ತಡೆರಹಿತವಾಗಿ ಆಡಿದ್ದಾರೆ. ಅವರನ್ನು ನಾವು ಗೌರವಿಸಬೇಕಾಗಿದೆ’’ಎಂದರು.

 ‘‘ಧೋನಿ ಈ ವಯಸ್ಸಿನಲ್ಲೂ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಆಡುವತ್ತ ಒಲವು ಹೊಂದಿದ್ದಾರೆ. ಅವರು ಶೀಘ್ರದಲ್ಲೇ ಟ್ವೆಂಟಿ-20 ಕ್ರಿಕೆಟ್‌ಗೆ ವಾಪಸಾಗಲಿದ್ದಾರೆ. ಐಪಿಎಲ್‌ನಲ್ಲಿ ಆಡುವ ಯೋಜನೆಯಲ್ಲಿದ್ದಾರೆ. ಅವರ ದೇಹ ಇದಕ್ಕೆ ಯಾವ ರೀತಿ ಹೊಂದಿಕೆಯಾಗುತ್ತದೆ ಎನ್ನುವುದು ಗೊತ್ತಿಲ್ಲ. 38ರ ಹರೆಯದ ಧೋನಿ ಐಪಿಎಲ್‌ನಲ್ಲಿ ಆಡುವುದು ಖಚಿತ. ಒಂದು ವೇಳೆ ಇದರಲ್ಲಿ ಯಶಸ್ವಿಯಾದರೆ ಮುಂಬರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಆಡಲು ಟೀಮ್ ಇಂಡಿಯಾದ ಸೇವೆಗೆ ಲಭ್ಯರಿರುತ್ತಾರೆ’’ ಎಂದರು.ಧೋನಿ ಕೊನೆಯ ಬಾರಿ ಕಳೆದ ಜುಲೈನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಆಡಿದ್ದರು. ಅರ್ಧಶತಕ ದಾಖಲಿಸಿ ರನೌಟಾಗಿ ಪೆವಿಲಿಯನ್ ಸೇರಿದ್ದರು. ‘‘ಟ್ವೆಂಟಿ-20 ವಿಶ್ವಕಪ್ ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡುವಾಗ ಅನುಭವ ಮತ್ತು ಹಿರಿತನವನ್ನು ಪರಿಗಣಿಸಲಾಗುವುದು. ಧೋನಿ ಆಡಲು ವಿಶ್ವಕಪ್‌ಗೆ ಲಭ್ಯರಾದರೆ 5-6ನೇ ಸರದಿಯಲ್ಲಿ ಆಡಲಿದ್ದಾರೆ’’ ಎಂದು ಶಾಸ್ತ್ರಿ ಮಾಹಿತಿ ನೀಡಿದರು. ಧೋನಿ 350 ಏಕದಿನ, 90 ಟೆಸ್ಟ್ ಮತ್ತು 98 ಟ್ವೆಂಟಿ-20 ಪಂದ್ಯಗಳನ್ನು ಆಡಿದ್ದಾರೆ. ವಿಕೆಟ್‌ನ ಹಿಂದುಗಡೆ 829 ಬಲಿ ಪಡೆದಿದ್ದಾರೆ.

 ವೃತ್ತಿ ಬದುಕಿನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಧೋನಿ ನಾಯಕರಾಗಿ 2007ರಲ್ಲಿ ಟ್ವೆಂಟಿ-20 ವಿಶ್ವಕಪ್, 2011ರಲ್ಲಿ ಏಕದಿನ ವಿಶ್ವಕಪ್ ಮತ್ತು 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿದ್ದರು. ಐಸಿಸಿಯ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವನೆಯ ಬಗ್ಗೆ ಮಾತನಾಡಿದ ಶಾಸ್ತ್ರಿ ‘‘ಇದು ಅಸಂಬದ್ಧ’’ಎಂದು ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X