Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ಘರ್ಷಣೆ: ಐಶೆ ಘೋಷ್ ಸಹಿತ 9...

ಜೆಎನ್‌ಯು ಘರ್ಷಣೆ: ಐಶೆ ಘೋಷ್ ಸಹಿತ 9 ಮಂದಿ ವಿರುದ್ಧ ಆರೋಪ ದಾಖಲು

► ವಿದ್ಯಾರ್ಥಿಗಳ ಗುಂಪು ಘರ್ಷಣೆ ಪ್ರಕರಣದಲ್ಲಿ ಜೆಎನ್‌ಯು ಅಧ್ಯಕ್ಷೆ ವಿರುದ್ಧ ಕ್ರಿಮಿನಲ್ ಆರೋಪ ► ಮುಸುಕುಧಾರಿ ಗೂಂಡಾಗಳ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಹೆಸರಿಸದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ10 Jan 2020 9:06 PM IST
share
ಜೆಎನ್‌ಯು ಘರ್ಷಣೆ: ಐಶೆ ಘೋಷ್ ಸಹಿತ 9 ಮಂದಿ ವಿರುದ್ಧ ಆರೋಪ ದಾಖಲು

 ಹೊಸದಿಲ್ಲಿ,ಜ.10: ಜವಾಹರಲಾಲ್ ನೆಹರೂ ವಿವಿ ಆವರಣದಲ್ಲಿ ಕಳೆದ ವಾರ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು, ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ 9 ಮಂದಿಯನ್ನು ಶಂಕಿತ ಆರೋಪಿಗಳೆಂದು ಗುರುತಿಸಿದ್ದಾರೆ.

 ಪೊಲೀಸರು ಆರೋಪಿಗಳೆಂದು ಗುರುತಿಸಲ್ಪಟ್ಟವರಲ್ಲಿ ಬಹುತೇಕ ಮಂದಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗೆ ಸೇರಿದವರಾಗಿದ್ದಾರೆ. ಆದರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ರವಿವಾರ ಸಂಜೆ ದಾಳಿ ನಡೆಸಿದ ಮುಸುಕುಧಾರಿ ಗೂಂಡಾಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲವೆಂದು ತಿಳಿದುಬಂದಿದೆ.

   ರವಿವಾರದ ಮುಸುಕುಧಾರಿ ಗೂಂಡಾಗಳು ದಾಳಿ ನಡೆಸುವ ಮುನ್ನ ಹಾಸ್ಟೆಲ್ ಶುಲ್ಕ ಏರಿಕೆಗೆ ಕುರಿತಾಗಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿ ದಿಲ್ಲಿ ಪೊಲೀಸ್ ಅಧಿಕಾರಿಗಳು, ಚುಂಚುನ್ ಕುಮಾರ್, ಪಂಕಜ್ ಮಿಶ್ರಾ, ಐಶೆ ಘೋಷ್, ವಾಸ್ಕರ್ ವಿಜಯ್, ಸುಚೇತಾ ತಾಲೂಕ್‌ದಾರ್, ಪ್ರಿಯಾ ರಂಜನ್, ದೋಲನ್ ಸಾವಂತ್, ಯೋಗೇಂದ್ರ ಭಾರಧ್ವಾಜ್ ಹಾಗೂ ವಿಕಾಸ್ ಪಟೇಲ್‌ರನ್ನು ಆರೋಪಿಗಳನ್ನಾಗಿ ಪೊಲೀಸರು ಹೆಸರಿಸಿದ್ದಾರೆ.

ಐಶೆ ಘೋಷ್ ಎಡಪಂಥೀಯರ ನಿಯಂತ್ರಣದ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆಯಾಗಿದ್ದರೆ, ಯೋಗೇಂದ್ರ ಭಾರಧ್ವಾಜ್ ಹಾಗೂ ವಿಕಾಸ್ ಪಟೇಲ್ ಅವರು ಸಂಘಪರಿವಾರದ ಜೊತೆ ನಂಟು ಹೊಂದಿರುವ ಎಬಿವಿಪಿಯ ಸದಸ್ಯರೆಂದು ಗುರುತಿಸಲಾಗಿದೆ.

   

  ಹಾಸ್ಟೆಲ್ ಶುಲ್ಕ ಏರಿಕೆಗೆ ಸಂಬಂಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ರವಿವಾರ ಮಧ್ಯಾಹ್ನ ಜೆಎನ್‌ಯು ವಿವಿಯ ಸರ್ವರ್ ಕೊಠಡಿಗೆ ನುಗ್ಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಗೆ ತಡೆಯೊಡ್ಡಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಎಡಪಂಥೀಯ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ರವಿವಾರ ಸಂಜೆ ಜೆಎನ್‌ಯು ಆವರಣದಲ್ಲಿ ಮುಸುಕುಧಾರಿ ಗೂಂಡಾಗಳಿಂದ ಹಲ್ಲೆಗೊಳಗಾದ ಘೋಷ್ ಅವರು, ಅಂದು ಮಧ್ಯಾಹ್ನ ವಿದ್ಯಾರ್ಥಿಗಳ ಗುಂಪೊಂದರ ಮೇಲೆ ಹಲ್ಲೆ ನಡೆಸಿದ ತಂಡವೊಂದರ ಭಾಗವಾಗಿದ್ದರು ಎಂದು ಪೊಲೀಸರು ಆಪಾದಿಸಿದ್ದಾರೆ.

ಐಶೆ ಘೋಷ್ ಅವರು ಮುಸುಕುಧಾರಿ ಗೂಂಡಾಗಳಿಂದ ಹಲ್ಲೆಗೊಳಗಾಗಿ ತೀವ್ರ ರಕ್ತಸ್ರಾವದೊಂದಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಕೇವಲ ನಾಲ್ಕು ನಿಮಿಷಗಳ ಅವಧಿಯಲ್ಲಿ ಅವರ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಿದ್ದರು.

 ಮೂರನೆ ಎಫ್‌ಐಆರ್‌ನಲ್ಲಿ, ರವಿವಾರ ಸಂಜೆ ಬಡಿಗೆ ಹಾಗೂ ಕಬ್ಬಿಣದ ರಾಡ್‌ಗಳೊಂದಿಗೆ ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ದಾಳಿ ನಡೆಸಿದ ಮುಸುಕುಧಾರಿ ಗೂಂಡಾಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಅದರಲ್ಲಿ ಯಾವುದೇ ಆರೋಪಿಗಳ ಹೆಸರನ್ನು ನಮೂದಿಸಿಲ್ಲ.

 ಸಿಸಿಟಿವಿ ವಿಡಿಯೋ, ಅಸಲಿ ವಿಡಿಯೋ ರೆಕಾರ್ಡಿಂಗ್ ಗಳು ಹಾಗೂ ಸಾಕ್ಷಿಗಳ ಕೊರತೆಯಿಂದಾಗಿ ಆರೋಪಿಗಳನ್ನು ಗುರುತಿಸಲು ಕಷ್ಟಕರವಾಗುತ್ತಿದೆಯೆಂದು ಪೊಲೀಸರು ಸಮಜಾಯಿಷಿ ನೀಡಿದ್ದಾರೆ.

ಜೆಎನ್‌ಯು ಹಿಂಸಾಚಾರದ ಕುರಿತಾಗಿ ಪ್ರಸಾರವಾಗುತ್ತಿರುವ ವಿಡಿಯೋಗಳು ಹಾಗೂ ಛಾಯಾಚಿತ್ರಗಳ ಆಧಾರದಲ್ಲಿ ಆರೋಪಿಗಳೆಂದು ಗುರುತಿಸಲಾದ ವ್ಯಕ್ತಿಗಳಿಗೆ ತಾವು ನೋಟಿಸ್ ಜಾರಿಗೊಳಿಸಿರುವುದಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವೊಂದರ ನೇತೃತ್ವ ವಹಿಸಿರುವ ಪೊಲೀಸ್ ಉಪ ಆಯುಕ್ತ ಜಾಯ್ ತಿರ್ಕೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X