Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ಯವ್ಯಸನದ ಬಗ್ಗೆ ಸಮಾಜದಲ್ಲಿ ಜಾಗೃತಿ...

ಮದ್ಯವ್ಯಸನದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಿ: ಡಾ.ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ10 Jan 2020 10:38 PM IST
share
ಮದ್ಯವ್ಯಸನದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಿ: ಡಾ.ಭಂಡಾರಿ

ಉಡುಪಿ, ಜ.10: ಮದ್ಯವ್ಯಸನದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸ ಬೇಕಾಗಿದೆ. ಈ ದಿಶೆಯಲ್ಲಿ ಮದ್ಯವ್ಯಸನ ವಿಮುಕ್ತಿ ಶಿಬಿರವು ಮದ್ಯವ್ಯಸನಿಗಳಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಒಂದು ಅವಕಾಶ ನೀಡುತ್ತದೆ. ಕೇವಲ ಕುಡಿತ ಬಿಟ್ಟರೆ ಮಾತ್ರ ಸಾಲದು. ಅದರೊಂದಿಗೆ ಗುಟ್ಕಾ ಸೇವನೆಯಂತಹ ಇತರೆ ದುಶ್ಚಟಗಳನ್ನು ತ್ಯಜಿಸಬೇಕು. ಆಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಉಡುಪಿಯ ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ, ನಾಡಿನ ಖ್ಯಾತ ಮನೋರೋಗ ತಜ್ಞರಲ್ಲಿ ಒಬ್ಬರಾದ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ.

ಮುಂಬೈಯ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ಉಡುಪಿ-ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಡಾ. ಕಮಲ ಎ. ಬಾಳಿಗಾ ಸ್ಮಾರಕ ಸಭಾಂಗಣದಲ್ಲಿ ಹತ್ತು ದಿನಗಳ ಕಾಲ ನಡೆದ 27ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡುತಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್ ಮಾತನಾಡಿ, ಸಮಾಜದಲ್ಲಿ ನಡೆಯುವ ಕೆಲವೊಂದು ಘಟನೆಗಳಿಗೆ ಪರೋಕ್ಷವಾಗಿ ಮದ್ಯವ್ಯಸನ ಕಾರಣವಾಗಿರುತ್ತದೆ. ಶೇ.70ರಷ್ಟು ರಸ್ತೆ ಅಪಘಾತ ಗಳಿಗೆ ಮದ್ಯವ್ಯಸನ ಕಾರಣವಾಗಿದೆ. ಒಬ್ಬ ಮದ್ಯವ್ಯಸನಿ ತಂದೆಯಿಂದ ಆತನ ಮಕ್ಕಳು ಹಾಗೂ ಕುಟುಂಬ ಹಾಳಾಗುತ್ತದೆ. ಆರೋಗ್ಯ, ಶಿಕ್ಷಣ, ಕುಟುಂಬದ ಮೇಲೂ ಇದು ದುಷ್ಪರಿಣಾಮ ಬೀರುತ್ತದೆ ಎಂದರು.

ಮತ್ತೊಬ್ಬ ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತದ ಉಡುಪಿ ಎಎಸ್ಪಿಭಾಸ್ಕರ ವಿ.ಬಿ. ಮಾತನಾಡಿ, ಮದ್ಯವ್ಯಸನ ಬೆಳೆಸಿ ಕೊಂಡಿರುವ ವ್ಯಕ್ತಿ ಗಳಿಗೆ ಸಮಾಜ ಎಂದಿಗೂ ಗೌರವ ನೀಡುವುದಿಲ್ಲ. ಹೀಗಾಗಿ ದುಶ್ಚಟಗಳಿಂದ ಮುಕ್ತರಾಗಿ ಕುಟುಂಬದವರ ಜತೆಗೆ ಬೆರೆತು, ಅವರ ವಿಶ್ವಾಸ ಗಳಿಸುವ ಮೂಲಕ ಸಮಾಜದಲ್ಲಿ ಸಭ್ಯ ವ್ಯಕ್ತಿಗಳಾಗಿ ಬಾಳಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಉಡುಪಿ- ಕರಾವಳಿಯ ಕಾರ್ಯದರ್ಶಿ ಡಾ.ಪ್ರಕಾಶ್ ಭಟ್ ಮಾತನಾಡಿ, ಮದ್ಯವ್ಯಸನ ಎನ್ನುವುದು ಆರ್ಥಿಕ, ಕೌಟುಂಬಿಕ ಹಾಗೂ ಸಾಂಸ್ಕೃತಿಕ ದಿವಾಳಿತನವನ್ನು ಸೃಷ್ಟಿಸುತ್ತದೆ ಎಂದರು. ಉದ್ಯಮಿ ರವೀಂದ್ರ ಹೆಗ್ಡೆ, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್ ನ  ಟ್ರಸ್ಟಿ ಸಿರಾಜ್ ಅಹಮ್ಮದ್, ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್ ಶೇಟ್ ಹಾಗೂ ಜನಾದನರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಆಪ್ತ ಸಮಾಲೋಚಕರಾದ ಮುಜಾಮಿಲ್ ಅಹ್ಮದ್ ಶಿಬಿರದ ವರದಿ ಮಂಡಿಸಿದರು. ಕೆ. ಲೋಹಿತ್ ಅತಿಥಿಗಳನ್ನು ಪರಿಚಯಿಸಿದರೆ, ಪದ್ಮಾ ವಂದಿಸಿದರು. ಪಾವನ ಮತ್ತು ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X