Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ದಿನಕ್ಕೆ ಒಂದು ನೆಲ್ಲಿಕಾಯಿ...

ದಿನಕ್ಕೆ ಒಂದು ನೆಲ್ಲಿಕಾಯಿ ತಿನ್ನಿ,ಅದ್ಭುತ ಆರೋಗ್ಯಲಾಭಗಳನ್ನು ಪಡೆಯಿರಿ

ವಾರ್ತಾಭಾರತಿವಾರ್ತಾಭಾರತಿ10 Jan 2020 11:26 PM IST
share
ದಿನಕ್ಕೆ ಒಂದು ನೆಲ್ಲಿಕಾಯಿ ತಿನ್ನಿ,ಅದ್ಭುತ ಆರೋಗ್ಯಲಾಭಗಳನ್ನು ಪಡೆಯಿರಿ

ವಿಟಾಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳ ಆಗರವಾಗಿರುವ ನೆಲ್ಲಿಕಾಯಿ ಕಡಿಮೆ ಕ್ಯಾಲರಿಗಳನ್ನು ಹೊಂದಿದ್ದು,ನಿಮ್ಮ ಆಹಾರದ ಭಾಗವಾಗಿರಲು ಅತ್ಯಂತ ಸೂಕ್ತವಾಗಿದೆ. ಚಿಕಿತ್ಸಕ ಮತ್ತು ವೈದ್ಯಕೀಯ ಕಾರಣಗಳಿಂದಾಗಿ ವಿಶೇಷವಾಗಿ ಚಳಿಗಾಲದಲ್ಲಿ ನೆಲ್ಲಿಕಾಯಿ ಸೇವನೆ ನಮ್ಮನ್ನು ಸದೃಢರನ್ನಾಗಿ ಮತ್ತು ಆರೋಗ್ಯಯುತರನ್ನಾಗಿ ಇರಿಸುತ್ತದೆ. ದಿನಕ್ಕೊಂದು ನೆಲ್ಲಿಕಾಯಿ ತಿಂದರೆ ಶೀತ,ಕೆಮ್ಮು ಮತ್ತು ಫ್ಲೂ ಅನ್ನು ಮಾರು ದೂರವಿಡಬಹುದು ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞರು. ನೆಲ್ಲಿಕಾಯಿ ಸೇವನೆಯ ಇತರ ಆರೋಗ್ಯಲಾಭಗಳಿಲ್ಲಿವೆ....

►ನೀವು ಶರೀರದ ತೂಕವನ್ನು ಇಳಿಸಿಕೊಳ್ಳಲು ಬಯಸಿದ್ದರೆ ಕೊಬ್ಬನ್ನು ಕರಗಿಸಲು ಮತ್ತು ಸೊಂಟದ ಸುತ್ತಳತೆಯನ್ನು ಕಡಿಮೆ ಮಾಡಿಕೊಳ್ಳಲು ನೆಲ್ಲಿಕಾಯಿ ನೆರವಾಗುತ್ತದೆ. ನೀವು ನಿಯಮಿತವಾಗಿ ವ್ಯಾಯಾಮ ಮಾಡುವುದನ್ನು ತಪ್ಪಿಸಿಕೊಳ್ಳಲು ಕಾರಣವಾಗುವ ಜಡತೆಯನ್ನೂ ನೆಲ್ಲಿಕಾಯಿ ಸೇವನೆಯು ನಿವಾರಿಸುತ್ತದೆ.

► ಮಧುಮೇಹದಿಂದ ಬಳಲುತ್ತಿರುವವರು ನೆಲ್ಲಿಕಾಯಿಯನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದಾಗಿದೆ. ಅದು ಇನ್ಸುಲಿನ್ ಸಂವೇದನಶೀಲತೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

► ಹೃದ್ರೋಗಿಗಳು ನೆಲ್ಲಿಕಾಯಿಯನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಉತ್ಪಾದನೆಯನ್ನು ನಿಯಂತ್ರಿಸುವಲ್ಲಿ ನೆರವಾಗುತ್ತದೆ ಮತ್ತು ಇದರಿಂದ ಹೃದಯಕ್ಕೆ ರಕ್ಷಣೆ ದೊರೆಯುತ್ತದೆ.

► ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚಿನ ವಿಟಾಮಿನ್ ಸಿ ಅನ್ನು ನೆಲ್ಲಿಕಾಯಿ ನಮ್ಮ ಶರೀರಕ್ಕೆ ಒದಗಿಸುತ್ತದೆ. ದಣಿವು,ಜಡತೆ ಮತ್ತು ಕೆರಳುವಿಕೆಯನ್ನು ನಿವಾರಿಸುವ ಮೂಲಕ ಶರೀರಕ್ಕೆ ಚೇತರಿಕೆಯನ್ನು ನೀಡುತ್ತದೆ.

► ತನ್ನಲ್ಲಿರುವ ಸಮೃದ್ಧ ಸಿ ವಿಟಾಮಿನ್‌ನಿಂದಾಗಿ ನೆಲ್ಲಿಕಾಯಿ ಶರೀರದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಗಾಯಗಳು ಬೇಗನೆ ಗುಣವಾಗಲು ನೆರವಾಗುತ್ತದೆ.

► ನೆಲ್ಲಿಕಾಯಿ ಅನಿಮಿಯಾ ಅಥವಾ ರಕ್ತಹೀನತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಅದು ಶರೀರದಲ್ಲಿ ಕಬ್ಬಿಣಾಂಶದ ಸಂಯೋಜನೆಗೆ ನೆರವಾಗುತ್ತದೆ ಮತ್ತು ಹಿಮೊಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ.

 *ಶರೀರದಲ್ಲಿ ಕಬ್ಬಿಣಾಂಶದ ಸಂಯೋಜನೆಗೆ ನೆರವಾಗುವ ನೆಲ್ಲಿಕಾಯಿಯ ಗುಣವು ಮುಟ್ಟಿನ ದಿನಗಳಲ್ಲಿ ತೊಂದರೆಯನ್ನು ಅನುಭವಿಸುವ ಮಹಿಳೆಯರಿಗೆ ಲಾಭದಾಯಕವಾಗಿದೆ. ನಿಯಮಿತವಾಗಿ,ನಿರ್ದಿಷ್ಟವಾಗಿ ಬೆಳಗಿನ ಸಮಯದಲ್ಲಿ ನೆಲ್ಲಿಕಾಯಿ ಸೇವನೆಯು ಮಹಿಳೆಯರಲ್ಲಿ ಮುಟ್ಟಿನ ದಿನಗಳ ಹೊಟ್ಟೆನೋವನ್ನು ಕಡಿಮೆ ಮಾಡುತ್ತದೆ. ರಜಸ್ವಲೆಯಾದ ಎರಡನೇ ದಿನ ವಿಪರೀತ ರಕ್ತಸ್ರಾವವಾಗುತ್ತಿದ್ದರೆ ನೆಲ್ಲಿಕಾಯಿಯಲ್ಲಿರುವ ಬಿ1 ಮತ್ತು ಬಿ2 ವಿಟಾಮಿನ್‌ಗಳು ಅದನ್ನು ತಡೆಯಲು ನೆರವಾಗುತ್ತವೆ.

► ನಿಮ್ಮ ಚರ್ಮದ ತಾರುಣ್ಯವನ್ನು ಕಾಪಾಡಿಕೊಳ್ಳಲು ಬಯಸಿದ್ದರೆ ಮತ್ತು ತಲೆಯಲ್ಲಿ ಬೆಳ್ಳಿಗೂದಲು ಕಾಣಿಸಿಕೊಳ್ಳಬಾರದು ಎಂದಿದ್ದರೆ ನೆಲ್ಲಿಕಾಯಿ ಸೇವನೆ ಅತ್ಯುತ್ತಮ ಪರಿಹಾರವಾಗಿದೆ.

►ಕಣ್ಣಿನ ಆರೋಗ್ಯವನ್ನು ಹೆಚಿಸುವ ನೆಲ್ಲಿಕಾಯಿ ಬಾಯಿಯ ಆರೋಗ್ಯವನ್ನೂ ಕಾಯ್ದುಕೊಳ್ಳುತ್ತದೆ.

ನೆಲ್ಲಿಕಾಯಿಯನ್ನು ಹಾಗೆಯೇ ತಿನ್ನಬಹುದು,ಬೇಕಿದ್ದರೆ ಕೊಂಚ ಉಪ್ಪನ್ನು ಸೇರಿಸಿಕೊಳ್ಳಬಹುದು. ಅದರ ಶರಬತ್ ಮಾಡಿ ಕುಡಿಯಬಹುದು. ನೆಲ್ಲಿಕಾಯಿಯ ಮುರಬ್ಬಾ ಮತ್ತು ಜಾಮ್ ಮಾಡಿಟ್ಟುಕೊಂಡರೆ ತುಂಬ ದಿನಗಳವರೆಗೆ ಸೇವಿಸಬಹುದಾಗಿದೆ. ಉಪ್ಪಿನಕಾಯಿ ರೂಪದಲ್ಲಿ ಸೇವಿಸಲೂ ನೆಲ್ಲಿಕಾಯಿ ಸೂಕ್ತವಾಗಿದೆ. ನಿಮ್ಮ ಆಹಾರಕ್ರಮದಲ್ಲಿ ಚ್ಯವನಪ್ರಾಶ ಅನ್ನು ಸೇರಿಸಿಕೊಳ್ಳಬಹುದು. ಸಮೃದ್ಧ ನೆಲ್ಲಿಕಾಯಿ ಅಂಶವನ್ನು ಹೊಂದಿರುವ ಅದನ್ನು ಹಾಲು ಅಥವಾ ನೀರಿನೊಂದಿಗೆ ಬೆರೆಸಿಕೊಂಡು ಇಲ್ಲವೇ ಹಾಗೆಯೇ ಸೇವಿಸಬಹುದು. ನೆಲ್ಲಿಕಾಯಿ ಸುಪಾರಿ ಮತ್ತು ಉಪ್ಪು ಬೆರೆಸಿದ ಒಣಗಿಸಿದ ನೆಲ್ಲಿಕಾಯಿ ಅತ್ಯುತ್ತಮ ಮೌತ್ ಫ್ರೆಶ್ನರ್ ಆಗಿದೆ,ಜೊತೆಗೆ ಆ್ಯಸಿಡಿಟಿಯನ್ನು ತಡೆಯುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X