Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಸ್ಕೃತಿ-ವಿಜ್ಞಾನದ ಸಮಾಗಮದಿಂದ ಮಾನವ...

ಸಂಸ್ಕೃತಿ-ವಿಜ್ಞಾನದ ಸಮಾಗಮದಿಂದ ಮಾನವ ಅಭಿವೃದ್ಧಿ: ಡಾ.ಹುಲಿಕಲ್ ನಟರಾಜ್

ವಾರ್ತಾಭಾರತಿವಾರ್ತಾಭಾರತಿ11 Jan 2020 11:28 PM IST
share

ಬಳ್ಳಾರಿ,ಜ.11: ಕಾಣದ ದೆವ್ವಗಳು ಈ ಭೂಮಿಯ ಮೇಲೆ ಇಲ್ಲವೇ ಇಲ್ಲ, ಭಯ ಹುಟ್ಟಿಸಿ ದುರ್ಬಲ ಮನಸ್ಸುಗಳನ್ನು ಖಾಯಿಲೆಗೆ ದೂಡುವುದು ವಿಕ್ಷಿಪ್ತ ಮನಸ್ಸುಗಳ ತಂತ್ರಗಳಾಗಿವೆ ಎಂದು ಪವಾಡ ಬಯಲು ತಜ್ಞ ಡಾ.ಹುಲಿಕಲ್ ನಟರಾಜ್ ತಿಳಿಸಿದ್ದಾರೆ.

ನಗರದಲ್ಲಿ ಹಂಪಿ ಉತ್ಸವ-2020 ಅಂಗವಾಗಿ ಕಡಲೆಕಾಳು ಗಣಪ ವೇದಿಕೆಯಲ್ಲಿ ನಡೆದ ಪವಾಡ ಬಯಲು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಾರ್ಮೋನುಗಳ ವ್ಯತ್ಯಾಸಗಳಿಂದ ಮನುಷ್ಯ ವಿಚಿತ್ರವಾಗಿ ವರ್ತಿಸಬಲ್ಲ. ವಾಮಾಚಾರ, ಮಾಟ ಮಂತ್ರಗಳು ಮನುಷ್ಯನ ಮೇಲೆ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ಪ್ರತಿಪಾದಿಸಿದರು.

ಅಂತಹ ಹೀನ ಆಚರಣೆಗಳನ್ನು ಕೈಬಿಟ್ಟು ಮನಸ್ಸು, ಮನಸ್ಸುಗಳನ್ನು ಅರ್ಥೈಸುವ, ಪ್ರೀತಿ ಬೆಸೆಯುವ ಸಂಸ್ಕೃತಿ ಹರಡಬೇಕಾಗಿದೆ. ಸಂಸ್ಕೃತಿ ಮತ್ತು ವಿಜ್ಞಾನ ಸಮಾಗಮಗೊಂಡರೆ ಮಾನವ ಅಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು.

ಮಕ್ಕಳನ್ನು ಸೆಲ್ ಫೋನ್, ಚಾಟಿಂಗ್, ಕೇಬಲ್ ಟಿವಿ, ಸಿನೆಮಾ, ಕ್ರಿಕೆಟ್ ಈ ಐದು ‘ಸಿ’ ಗಳಿಂದ ದೂರವಿಟ್ಟು, ಕಬಡ್ಡಿ, ವಾಲಿಬಾಲ್, ಖೋ ಖೋದಂತಹ ಕ್ರೀಡೆಗಳಲ್ಲಿ ತೊಡಗಿಸಿ ಅದರಿಂದ ಅವರ ಸರ್ವತೋಮುಖ ವಿಕಾಸವಾಗುತ್ತದೆ. ವಿಚಾರಶಕ್ತಿ, ಭಾಗವಹಿಸುವಿಕೆ, ತನಿಖೆ, ಮಾಹಿತಿ ಸಂಗ್ರಹಣೆ ಹಾಗೂ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಬೇಕು ಎಂದು ಅವರು ಹೇಳಿದರು.

ನಿಂಬೆ ಹಣ್ಣು ಮಾಯ ಮಾಡುವುದು, ಜಾಲಿ ಮುಳ್ಳಿನ ಮೇಲೆ ಕುಳಿತುಕೊಳ್ಳುವುದು, ತಲೆ ಮೇಲೆ ಬೆಂಕಿ ಹಚ್ಚಿಕೊಂಡು ದೆವ್ವ ಎನ್ನುವುದು, ಮೊಳೆಯ ಮಿಡ್ ಬ್ರೇನ್ ಟ್ರೇನಿಂಗ್, ಸಮ್ಮೋಹಿನಿ ವಿದ್ಯೆ ಮತ್ತಿತರ ತಂತ್ರಗಳನ್ನು ಅನುಸರಿಸಿ ಮಹಿಳೆಯರು ಮತ್ತು ಮಕ್ಕಳನ್ನು ವಿಕೃತ ಕೃತ್ಯಗಳಿಗೆ ಬಳಸಿಕೊಳ್ಳುವ ರಹಸ್ಯಗಳನ್ನು ಅವರು ಅನಾವರಣಗೊಳಿಸಿದರು.

ರಾಸಾಯನಿಕಗಳನ್ನು ನಮಗರಿವಿಲ್ಲದಂತೆಯೇ ನಮ್ಮ ಮೇಲೆ ಪ್ರಯೋಗಿಸಿ, ದೇವರು ಮತ್ತು ಮನುಷ್ಯರ ನಡುವೆ ಇರುವ ಮಧ್ಯವರ್ತಿಗಳು ವ್ಯವಸ್ಥಿತವಾಗಿ ನಮ್ಮನ್ನು ಮಾನಸಿಕ ದುರ್ಬಲತೆಗೆ ತಳ್ಳುತ್ತಿದ್ದಾರೆ. ಭಯ ಹುಟ್ಟಿಸಿ, ಒತ್ತಡಕ್ಕೆ ಸಿಲುಕಿಸಿ ತಮ್ಮ ಧನದಾಹ ತೀರಿಸಿಕೊಳ್ಳುತ್ತಾರೆ ಎಂದು ಹುಲಿಕಲ್ ನಟರಾಜ್ ತಿಳಿಸಿದರು. ದೇವರು ಎಂದಿಗೂ ಮೋಸ ಮಾಡುವುದಿಲ್ಲ, ದೇವರ ಹೆಸರಿನಲ್ಲಿ ಇಂತಹ ಶಕ್ತಿಗಳು ತಮ್ಮ ಬದುಕು ಸಾಗಿಸಲು ಜನ್ಮಾಂತರ ರಹಸ್ಯ, ಪುನರ್ಜನ್ಮ, ಭಾನಾಮತಿ ಮೊದಲಾದ ಮೌಢ್ಯಗಳನ್ನು ಸಮಾಜದಲ್ಲಿ ಬಿತ್ತಿ, ನಿರಂತರವಾಗಿ ವಂಚಿಸುವ ಚಟುವಟಿಕೆಗಳು ನಡೆಯುತ್ತಿವೆ. ಇಂತಹ ಕೃತ್ಯಗಳು ಎಲ್ಲಿಯೇ ಕಂಡು ಬಂದರೂ ನಮ್ಮ ತಂಡಕ್ಕೆ ಮಾಹಿತಿ ನೀಡಿ ಎಂದು ಅವರು ಮನವಿ ಮಾಡಿದರು.

ಹುಲಿಕಲ್ ನಟರಾಜ ಹೆಸರಿನಲ್ಲಿ ಯುಟ್ಯೂಬ್ ಚಾನೆಲ್ ಪ್ರಾರಂಭಿಸಲಾಗಿದ್ದು, ದಿನನಿತ್ಯ ಒಂದು ವೈಜ್ಞಾನಿಕ ಕಾರ್ಯಕ್ರಮ ನೀಡಲಾಗುತ್ತಿದೆ. ಆ ಮೂಲಕ ಇಲ್ಲವೇ ನೇರವಾಗಿ 9916100511 ಮೊಬೈಲ್ ಮೂಲಕವೂ ನಮ್ಮನ್ನು ಸಂಪರ್ಕಿಸಿದರೆ ಅದರ ಹಿಂದಿನ ರಹಸ್ಯ ಬಯಲು ಮಾಡುತ್ತೇನೆ ಎಂದು ಹುಲಿಕಲ್ ನಟರಾಜ್ ಹೇಳಿದರು.

ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೀರಣ್ಣ ಬಿರಾದಾರ, ಸಿರಗುಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ ಭಜಂತ್ರಿ, ಸಿರಗುಪ್ಪ ತಹಶೀಲ್ದಾರ್ ಎಸ್.ಬಿ.ಕೂಡ್ಲಗಿ, ತಾಪಂ ಇಓ ಶಿವಪ್ಪಸುಬೇದಾರ, ವಿವಿಧ ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X