Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕನಕಪುರ ಚಲೋ’ ಹೆಸರಿನಲ್ಲಿ ಕೋಮುಸಾಮರಸ್ಯ...

‘ಕನಕಪುರ ಚಲೋ’ ಹೆಸರಿನಲ್ಲಿ ಕೋಮುಸಾಮರಸ್ಯ ಹಾಳು ಮಾಡುವ ಹುನ್ನಾರ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Jan 2020 11:43 PM IST
share
‘ಕನಕಪುರ ಚಲೋ’ ಹೆಸರಿನಲ್ಲಿ ಕೋಮುಸಾಮರಸ್ಯ ಹಾಳು ಮಾಡುವ ಹುನ್ನಾರ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.11: ಕನಕಪುರದ ಮಹಾಜನರು ಶತ-ಶತಮಾನಗಳಿಂದಲೂ ಶಾಂತಿಪ್ರಿಯರು. ಮತೀಯ ಸಾಮರಸ್ಯಕ್ಕೆ ಹೆಸರಾದವರು. ಜಾತಿ, ಮತ, ಧರ್ಮದ ಭೇದವಿಲ್ಲದೆ ಸಹೋದರಭಾವದಿಂದ ಬದುಕಿದವರು, ಬದುಕುತ್ತಿರುವವರು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋಮುಸೌಹಾರ್ದದಲ್ಲಿ ಇಡೀ ನಾಡಿಗೇ ಮಾದರಿಯಾದವರು. ಅಂಥ ಶಾಂತಿ ಮತ್ತು ಸ್ನೇಹಪ್ರಿಯರನ್ನು ಕೆಣಕಲು ಕಪಾಲಬೆಟ್ಟದ ಏಸುಪ್ರತಿಮೆ ನಿರ್ಮಾಣ ವಿರೋಧಿಸುವ ನೆಪದಲ್ಲಿ ಕೆಲವು ಮತೀಯ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಕಿಡಿಗಾರಿದ್ದಾರೆ.

ಸುಳ್ಳು ಕಾರಣ, ಕಟ್ಟುಕತೆಗಳನ್ನು ಸೃಷ್ಟಿಸುತ್ತಿವೆ. ವದಂತಿಗಳನ್ನು ಹರಡುತ್ತಿವೆ. ಇದೇ ಜನವರಿ 13 ರಂದು ‘ಕನಕಪುರ ಚಲೋ’ ಹೆಸರಿನಲ್ಲಿ ಕೋಮುಸಾಮರಸ್ಯ ಹಾಳು ಮಾಡಿ, ಗಲಭೆ, ಹಿಂಸಾಚಾರಕ್ಕೆ ಪ್ರೇರಣೆ ನೀಡುವುದು ಈ ಮತೀಯ ಶಕ್ತಿಗಳ ಹುನ್ನಾರವಾಗಿದೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಕನಕಪುರದ ಮಹಾಜನತೆ ಅದೆಷ್ಟು ಪ್ರಬುದ್ಧರು, ಇಲ್ಲಿ ನೂರಾರು ವರ್ಷಗಳಿಂದ ಎಲ್ಲ ಕೋಮು ಮತ್ತು ಧರ್ಮದ ಜನರು ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದಾರೆ ಎಂಬುದು ಅವರಿಗೆ ಗೊತ್ತಿಲ್ಲ. ಹೀಗಾಗಿ ಕನಕಪುರ ಚಲೋ ಹೆಸರಿನಲ್ಲಿ ಮತೀಯ ಶಕ್ತಿಗಳು ನೀಡುವ ಯಾವುದೇ ಪ್ರಚೋದನೆಗೆ ಕನಕಪುರದ ಮಹಾಜನತೆ ಒಳಗಾಗಬೇಡಿ. ಅವರು ಎಷ್ಟೇ ಕೆರಳಿಸಿದರೂ ಸಹನೆ ಕಳೆದುಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ತಾಳ್ಮೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬೇಡಿ. ಶಾಂತಿಗೆ ಭಂಗ ತರಬೇಡಿ ಎಂದು ಕೈಮುಗಿದು ವಿನಂತಿಸಿಕೊಳ್ಳುತ್ತೇನೆ. ಕನಕಪುರದ ಜನತೆ ಮತೀಯ ಶಕ್ತಿಗಳ ವಿರುದ್ಧ ಒಗ್ಗಟ್ಟಿನಿಂದ ನಿಲ್ಲುತ್ತಾರೆ, ಕೋಮುಶಕ್ತಿಗಳ ಯಾವುದೇ ಪ್ರೇರಣೆ, ಹುನ್ನಾರಗಳಿಗೂ ಬಲಿಯಾಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭ್ರಾತೃತ್ವವನ್ನು ಎತ್ತಿ ಹಿಡಿಯುತ್ತಾರೆ, ಸಾಮರಸ್ಯ, ಸೌಹಾರ್ದತೆ ಕಾಪಾಡುತ್ತಾರೆಂಬ ಅದಮ್ಯ ವಿಶ್ವಾಸ, ನಂಬಿಕೆ ನನ್ನದು. ನಾವೆಲ್ಲರೂ ಶಾಂತಿಯಿಂದಲೇ ವಿಕೃತ ಮನಸ್ಸಿನ ಕೋಮುಶಕ್ತಿಗಳ ಸಂಚನ್ನು ಹಿಮ್ಮೆಟ್ಟಿಸೋಣ ಎಂದು ಶಿವಕುಮಾರ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X