Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿವಳಿ ತಲಾಕ್ ಮಸೂದೆ ಮಂಡನೆಗೆ ಮುನ್ನ...

ತ್ರಿವಳಿ ತಲಾಕ್ ಮಸೂದೆ ಮಂಡನೆಗೆ ಮುನ್ನ ಸಚಿವಾಲಯಗಳನ್ನು ವಿಶ್ವಾಸಕ್ಕೆ ಪಡೆಯದ ಕಾನೂನು ಸಚಿವಾಲಯ!

ಆರ್ ಟಿಐಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ12 Jan 2020 6:51 PM IST
share
ತ್ರಿವಳಿ ತಲಾಕ್ ಮಸೂದೆ ಮಂಡನೆಗೆ ಮುನ್ನ ಸಚಿವಾಲಯಗಳನ್ನು ವಿಶ್ವಾಸಕ್ಕೆ ಪಡೆಯದ ಕಾನೂನು ಸಚಿವಾಲಯ!

ಹೊಸದಿಲ್ಲಿ : ಕಳೆದ ವರ್ಷ ತ್ರಿವಳಿ ತಲಾಕ್ ಮಸೂದೆಗೆ ಅಂಗೀಕಾರ ನೀಡಿದ್ದ ಕೇಂದ್ರ ಕಾನೂನು ಸಚಿವಾಲಯವು ಈ ನಿಟ್ಟಿನಲ್ಲಿ ಸಂಬಂಧಿತ ಸಚಿವಾಲಯಗಳು, ಇಲಾಖೆಗಳು ಅಥವಾ ಯಾವುದೇ ರಾಜ್ಯ ಸರಕಾರವನ್ನು ವಿಶ್ವಾಸಕ್ಕೆ ಪಡೆದುಕೊಂಡಿರಲಿಲ್ಲ ಮತ್ತು ಅವುಗಳಿಂದ ಸಲಹೆ ಸೂಚನೆ ಸ್ವೀಕರಿಸಿಲ್ಲ ಎಂಬುದು  thewire.in ಆರ್ ಟಿಐ ಮೂಲಕ ಪಡೆದುಕೊಂಡ ವಿವರಗಳಿಂದ ತಿಳಿದು ಬಂದಿದೆ.

ತ್ರಿವಳಿ ತಲಾಕ್ ಮಸೂದೆ ಎಂದೂ ಕರೆಯಲ್ಪಡುವ ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯಿದೆ, 2019 ಅನ್ನು  ಕಳೆದ ವರ್ಷದ ಜುಲೈ ತಿಂಗಳಲ್ಲಿ ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿ ನಂತರ ರಾಷ್ಟ್ರಪತಿಗಳ ಅಂಕಿತದೊಂದಿಗೆ ಈಗ ಕಾನೂನಾಗಿದೆ.

ಸಂಸತ್ತಿನಲ್ಲಿ ಮಸೂದೆ ಕುರಿತು ಚರ್ಚೆ ನಡೆದ ಸಂದರ್ಭ ಮಾತನಾಡಿದ್ದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಹಲವಾರು `ಸಂತ್ರಸ್ತರ' ಜತೆ  ಮಾತನಾಡಿದ ನಂತರವಷ್ಟೇ ಈ ಮಸೂದೆ ಮಂಡಿಸಲಾಗಿದೆ ಎಂದು ಹೇಳಿದ್ದರು.

ಆದರೆ ಕಾನೂನು ಸಚಿವಾಲಯ ಯಾವುದೇ ಇತರ ಸಚಿವಾಲಯ, ರಾಜ್ಯ ಸರಕಾರಗಳು ಯಾ ಇಲಾಖೆಗಳನ್ನು ವಿಶ್ವಾಸಕ್ಕೆ ಪಡೆದುಕೊಂಡಿರಲಿಲ್ಲ ಎಂದು ಈಗ ತಿಳಿದು ಬಂದಿದೆ. ಆದರೆ ಸಚಿವಾಲಯದ ಪ್ರಕಾರ ತ್ರಿವಳಿ ತಲಾಕ್ ಎಂಬ ನ್ಯಾಯೋಚಿತವಲ್ಲದ ಪದ್ಧತಿ ತುರ್ತಾಗಿ ಅಂತ್ಯ ಹಾಡಬೇಕಾಗಿದ್ದರಿಂದ ಯಾರನ್ನೂ ಸಂಪರ್ಕಿಸಲಾಗಿರಲಿಲ್ಲ ಎಂದು ಸಚಿವಾಲಯ ಸಬೂಬು ನೀಡಿದೆ ಎಂದು thewire.in ವರದಿ ತಿಳಿಸಿದೆ.

"ಮಸೂದೆಯ ಕರಡನ್ನು  ಎಲ್ಲಾ ಸಚಿವಾಲಯಗಳೂ, ಇಲಾಖೆಗಳೂ ರಾಜ್ಯ ಸರಕಾರಗಳಿಗೂ ಅದನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ಕಳುಹಿಸಲಾಗಿದೆ" ಎಂದು ಸಚಿವರ ಸಹಿಯಿರುವ ಟಿಪ್ಪಣಿ ಇದ್ದರೂ, "ಈ ಅಸಮರ್ಥನೀಯ ಪದ್ಧತಿಗೆ ಅಂತ್ಯ ಹಾಡಲು ತುರ್ತು ಅಗತ್ಯವಿರುವುದರಿಂದ ಅಂತರ-ಸಚಿವಾಲಯ ಚರ್ಚೆಗಳನ್ನು ನಡೆಸಲಾಗುವುದಿಲ್ಲ'' ಎಂದೂ ಅದರಲ್ಲಿ ಬರೆಯಲಾಗಿತ್ತು.

ಯಾವುದೇ ಮಸೂದೆಯನ್ನು ಮೊದಲು ಸಂಬಂಧಿತ ಸಚಿವಾಲಯ ಹಾಗೂ ಇಲಾಖೆಗೆ ಕಳುಹಿಸಿ ಅವರ ಸಲಹೆ ಸೂಚನೆ ಪಡೆಯಬೇಕೆಂಬ ಕಾನೂನು ಸಚಿವಾಲಯದ 2014ರ ಶಾಸಕಾಂಗ ಸಲಹಾ ನೀತಿಗೆ ಇದು ವಿರುದ್ಧವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X