Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲ್ಯಾಪ್‌ಟಾಪ್ ನೀಡಲು ಒತ್ತಾಯ:...

ಲ್ಯಾಪ್‌ಟಾಪ್ ನೀಡಲು ಒತ್ತಾಯ: ಉಪಮುಖ್ಯಮಂತ್ರಿ ಕಾರಜೋಳಗೆ ವಿದ್ಯಾರ್ಥಿಗಳಿಂದ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ12 Jan 2020 6:52 PM IST
share
ಲ್ಯಾಪ್‌ಟಾಪ್ ನೀಡಲು ಒತ್ತಾಯ: ಉಪಮುಖ್ಯಮಂತ್ರಿ ಕಾರಜೋಳಗೆ ವಿದ್ಯಾರ್ಥಿಗಳಿಂದ ಮುತ್ತಿಗೆ

ಬಾಗಲಕೋಟೆ, ಜ. 12: ಪದವಿ ಅಭ್ಯಾಸ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಬೇಕೆಂದು ಆಗ್ರಹಿಸಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ರವಿವಾರ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಪ್ತಾಹದಲ್ಲಿ ಡಿಸಿಎಂ ಕಾರಜೋಳಗೆ ಮುತ್ತಿಗೆ ಹಾಕಿದ ದಸಂಸ(ಅಂಬೇಡ್ಕರ್ ವಾದ) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು, ರಾಜ್ಯ ಸರಕಾರ ಪ್ರಥಮ ವರ್ಷ ಪದವಿ ವಿದ್ಯಾರ್ಥಿಗಳಿಗಷ್ಟೇ ಲಾಪ್‌ಟಾಪ್ ವಿತರಣೆ ಯೋಜನೆ ಹಮ್ಮಿಕೊಂಡಿರುವುದು ಸಲ್ಲ ಎಂದು ಆಕ್ಷೇಪಿಸಿದರು.

ಸರಕಾರಿ ಕಾಲೇಜುಗಳಿಗೆ ಬರುವುದೇ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು. ಹೀಗಾಗಿ ಪದವಿ ಕಲಿಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಬೇಕು ಎಂದು ಆಗ್ರಹಿಸಿದರಲ್ಲದೆ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಿಡಿಮಿಡಿ: ವಿದ್ಯಾರ್ಥಿಗಳ ಏಕಾಏಕಿ ಮುತ್ತಿಗೆಯಿಂದ ವಿಚಲಿತರಾದ ಡಿಸಿಎಂ ಗೋವಿಂದ ಕಾರಜೋಳ, ‘ಏನ್ ನೀವಷ್ಟೇ ಬುದ್ಧಿವಂತರಲ್ಲ. ಮನವಿ ಕೊಡಲಿಕ್ಕೆ ಬಂದಿದ್ದೀರಿ, ಮನವಿ ಕೊಡಿ’ ಎಂದು ಸಿಡಿಮಿಡಿಗೊಂಡರು. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಯೋಜನೆ ಘೋಷಣೆ ಮಾಡಿದ್ದರು. ಆದರೆ, ನಮ್ಮ ವಿರುದ್ಧ ಈಗ ಪ್ರತಿಭಟನೆ ಮಾಡುವುದು ಸಲ್ಲ ಎಂದು ಗೋವಿಂದ ಕಾರಜೋಳ ವಿದ್ಯಾರ್ಥಿಗಳ ವಿರುದ್ಧ ಕಿಡಿಕಾರಿದರು.

‘ಸಿದ್ದರಾಮಯ್ಯ ಲ್ಯಾಪ್‌ಟಾಪ್ ಕೊಡಲಿಕ್ಕೆ ಆಗಲಿಲ್ಲ. ನೀವು ಅಧಿಕಾರದಲ್ಲಿದ್ದೀರಿ, ಕೊಡಿ. ಪ್ರಥಮ, ದ್ವೀತಿಯ ಸೇರಿ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಯೋಜನೆ ರೂಪಿಸಿದ್ದು, ಅದನ್ನು ಬಿಜೆಪಿ ಸರಕಾರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಿರುವುದು ಏಕೆ?’ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು. ಇದರಿಂದ ಸಭಾಂಗಣದಲ್ಲಿ ಗೊಂದಲ ನಿರ್ಮಾಣವಾಯಿತು. ಮಧ್ಯಪ್ರವೇಶಿಸಿದ ಪೊಲೀಸರು ದಲಿತ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದರು.

ಸಮಾರಂಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ , ಎಸ್.ಪಿ.ಲೋಕೇಶ್, ಸಿಇಓ ಗಂಗೂಬಾಯಿ ಮಾನಕರ್ ಉಪಸ್ಥಿತರಿದ್ದರು.

‘ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ಈ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಆದರೆ, ಅಧಿಕಾರಿಗಳು ಜನರ ತೆರಿಗೆ ಹಣದಲ್ಲಿ ತಮ್ಮ ಬಂಗಲೆಗಳನ್ನು ನವೀಕರಣ ಮಾಡಿಕೊಳ್ಳಬಹುದೇ?’ ಎಂದು ದಸಂಸ ಮುಖಂಡ ಯುವರಾಜ್, ಡಿಸಿಎಂ ಕಾರಜೋಳರನ್ನು ಪ್ರಶ್ನಿಸಿದರು.

‘ಸ್ವಮತ ದುರಾಭಿಮಾನ ಮತ್ತು ಅನ್ಯಮತದ್ವೇಷದಿಂದ ಹುಟ್ಟಿಕೊಂಡ ಧಾರ್ಮಿಕ ಸಂಘರ್ಷ ಈ ಸುಂದರ ಜಗತ್ತನ್ನು ಕುರೂಪಗೊಳಿಸಿದೆ. ಮನುಕುಲದ ಮುನ್ನಡೆಗೆ ಅಡ್ಡಿಯಾಗಿರುವ ಉಗ್ರ ಧರ್ಮಾಂಧತೆಯನ್ನು ತಿರಸ್ಕರಿಸೋಣ ಎಂಬ ವಿವೇಕಾನಂದರ ಚಿಂತನೆಯನ್ನು ಅವರ ಹುಟ್ಟುಹಬ್ಬದ ದಿನ ಮನನ ಮಾಡಿಕೊಳ್ಳೋಣ’

-ಸಿದ್ದರಾಮಯ್ಯ, ವಿಪಕ್ಷ ನಾಯಕ(ಟ್ವೀಟ್)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X