Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎಎ ಮೂಲಕ ಮುಸ್ಲಿಮರನ್ನು ದೇಶದಿಂದ ಹೊರ...

ಸಿಎಎ ಮೂಲಕ ಮುಸ್ಲಿಮರನ್ನು ದೇಶದಿಂದ ಹೊರ ಹಾಕುವ ಹುನ್ನಾರ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ12 Jan 2020 8:22 PM IST
share
ಸಿಎಎ ಮೂಲಕ ಮುಸ್ಲಿಮರನ್ನು ದೇಶದಿಂದ ಹೊರ ಹಾಕುವ ಹುನ್ನಾರ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಜ.12: ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ(ತಿದ್ದುಪಡಿ) ಕಾಯ್ದೆಯ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರನ್ನು ದೇಶದಿಂದ ಹೊರಹಾಕುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದ್ದಾರೆ. 

ನಗರದ ಮಹದೇವಪುರದ ಹೂಡಿ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ಹಾಗೂ ಬಿಎಸ್‌ಎಸ್ ಎಲ್ಲ ಧರ್ಮಗಳ ಸೇವಾ ಟ್ರಸ್ಟ್‌ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರಕಾರವು ಮುಸ್ಲಿಮರ ವಿರುದ್ಧ ದ್ವೇಷ ಸಾಧನೆಗೆ ಮುಂದಾಗಿದೆ ಎಂದ ಅವರು, ಬಿಜೆಪಿಗೆ ಮತ ಹಾಕದವರನ್ನು ದೇಶದಿಂದಲೇ ತೊಲಗಿಸಬೇಕು ಎಂಬ ಹುನ್ನಾರ ಮಾಡಿದೆ. ಅದಕ್ಕಾಗಿ, ಸಿಎಎ ಮತ್ತು ಎನ್‌ಆರ್‌ಸಿ ಜಾರಿ ಮಾಡುವ ಮೂಲಕ ಮುಸ್ಲಿಮರನ್ನು ಜೈಲಿಗೆ ಹಾಕಲು ಮುಂದಾಗಿದ್ದಾರೆ ಎಂದು ಅಪಾದಿಸಿದರು.

ಜನರನ್ನು ದಿಕ್ಕು ತಪ್ಪಿಸುವುದು ಪ್ರಧಾನಿ ಮೋದಿಗೆ ಬೇಕಾಗಿದೆ. ಹೀಗಾಗಿ, ಜನರು ಎಚ್ಚೆತ್ತಿಕೊಳ್ಳಬೇಕು. ಮುಂದೊಂದು ದಿನ ಭಾರತ ಮತ್ತೊಂದು ಪಾಕಿಸ್ತಾನವಾಗದಂತೆ ತಡೆಯಬೇಕಿದೆ. ಇಲ್ಲಿ ಎಲ್ಲರೂ ಇದ್ದಾರೆ, ಹಿಂದೂಗಳಿಗೆ ಅಷ್ಟೇ ಸೀಮಿತವಾದ ದೇಶ ನಮ್ಮದಲ್ಲ ಎಂದು ಅವರು ಪ್ರತಿಪಾದಿಸಿದರು.

ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ ಹೆಗ್ಡೆ ಮಾತನಾಡಿ, ಸಮಾಜದಲ್ಲಿ ನಡೆಯುವ ಅನ್ಯಾಯಗಳನ್ನು ನಾನು ಲೋಕಾಯುಕ್ತರಾಗಿ ಅಧಿಕಾರಕ್ಕೆ ಬಂದ ಬಳಿಕ ಕಂಡುಕೊಂಡೆ. ಅಲ್ಲದೆ, ಅದರ ವಿರುದ್ಧ ಸಾಕಷ್ಟು ಕೆಲಸ ಮಾಡಿದ್ದೇನೆ. ಇಂದಿನ ಸಮಾಜದಲ್ಲಿ ಜೈಲಿಗೆ ಹೋಗಿ ಬಂದವರನ್ನು ಸನ್ಮಾನ ಮಾಡುವ ಪ್ರವೃತ್ತಿ ಬೆಳೆದಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ಸಂಖ್ಯೆ ಅಧಿಕವಾಗಬೇಕಿದೆ ಎಂದರು.

ಮನುಷ್ಯರು ಮಾನವೀಯತೆ ಬೆಳೆಸಿಕೊಳ್ಳಬೇಕು. ಒಳ್ಳೆಯದು ಮಾಡುವುದು ರೂಢಿಸಿಕೊಳ್ಳಬೇಕು ಎಂದ ಅವರು, ಶ್ರೀಮಂತರಾಗಬೇಕು ಎಂಬ ಆಸೆ ಇರುತ್ತದೆ. ಆದರೆ, ಕಾನೂನಿನ ಚೌಕಟ್ಟಿನಲ್ಲಿ ಹಣ ಸಂಪಾದನೆ ಮಾಡುವುದು ಕಂಡುಕೊಳ್ಳಬೇಕು. ತಪ್ಪುಗಳನ್ನು ಪ್ರಶ್ನಿಸುವುದು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಎಸ್‌ಎಸ್ ಸರ್ವಧರ್ಮಗಳ ಟ್ರಸ್ಟ್‌ನ ಅಧ್ಯಕ್ಷ ಡಾ.ಎಚ್.ಎಂ.ರಾಮಚಂದ್ರ, ಕಸಾಪ ಮಹದೇವಪುರ ಅಧ್ಯಕ್ಷ ಡಾ.ಅಜಿತ್, ಶಿವರಾಮ್, ಕಿರಣ್, ಸೈಯದ್ ಅಬ್ದುಲ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X