Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರಲ್ಲಿ ಭಾರತದಲ್ಲಿ ಪ್ರತಿದಿನ 109...

2018ರಲ್ಲಿ ಭಾರತದಲ್ಲಿ ಪ್ರತಿದಿನ 109 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಎನ್‌ಸಿಆರ್‌ಬಿ ವರದಿ

ವಾರ್ತಾಭಾರತಿವಾರ್ತಾಭಾರತಿ12 Jan 2020 9:41 PM IST
share
2018ರಲ್ಲಿ ಭಾರತದಲ್ಲಿ ಪ್ರತಿದಿನ 109 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಎನ್‌ಸಿಆರ್‌ಬಿ ವರದಿ

ಹೊಸದಿಲ್ಲಿ,ಜ.12: ಭಾರತದಲ್ಲಿ 2018ರಲ್ಲಿ ಪ್ರತಿದಿನ ಸರಾಸರಿ 109 ಮಕ್ಕಳು ಲೈಂಗಿಕ ದೌರ್ಜನ್ಯಗಳಿಗೆ ಗುರಿಯಾಗಿದ್ದು, 2017ರಲ್ಲಿ ವರದಿಯಾಗಿದ್ದ ಇಂತಹ ಪ್ರಕರಣಗಳಿಗೆ ಹೋಲಿಸಿದರೆ ಶೇ.22ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಘಟಕ (ಎನ್‌ಸಿಆರ್‌ಬಿ)ವು ಇತ್ತೀಚಿಗೆ ಬಿಡುಗಡೆಗೊಳಿಸಿರುವ ಅಂಕಿಅಂಶಗಳು ತೋರಿಸಿವೆ.

ಪೊಕ್ಸೊ ಕಾಯ್ದೆಯಡಿ 2017ರಲ್ಲಿ 32,608 ಪ್ರಕರಣಗಳು ವರದಿಯಾಗಿದ್ದರೆ,2018ರಲ್ಲಿ ಇವುಗಳ ಸಂಖ್ಯೆ 39,827ಕ್ಕೇರಿದೆ. 2028ರಲ್ಲಿ ಮಕ್ಕಳ ಮೇಲಿನ ಅತ್ಯಾಚಾರದ 21,605 ಪ್ರಕರಣಗಳು ದಾಖಲಾಗಿದ್ದು, ಬಲಿಪಶುಗಳಲ್ಲಿ 21,401 ಬಾಲಕಿಯರು ಮತ್ತು 204 ಬಾಲಕರು ಸೇರಿದ್ದಾರೆ. ಅತ್ಯಧಿಕ ಅತ್ಯಾಚಾರದ ಪ್ರಕರಣಗಳು ಮಹಾರಾಷ್ಟ್ರ(2,832)ದಲ್ಲಿ ದಾಖಲಾಗಿದ್ದರೆ,ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ (2,023) ಮತ್ತು ತಮಿಳುನಾಡು (1,457) ಇವೆ ಎಂದು ಎನ್‌ಸಿಆರ್‌ಬಿ ತನ್ನ ವರದಿಯಲ್ಲಿ ತಿಳಿಸಿದೆ.

ಮಕ್ಕಳ ಮೇಲಿನ ಒಟ್ಟಾರೆ ಅಪರಾಧ ಪ್ರಕರಣಗಳ ಸಂಖ್ಯೆ 2008ರಿಂದ 2018ವರೆಗಿನ ದಶಕದಲ್ಲಿ ಆರು ಪಟ್ಟು ಏರಿಕೆಯಾಗಿದೆ. 2008ರಲ್ಲಿ 22,500ರಷ್ಟಿದ್ದ ಇಂತಹ ಪ್ರಕರಣಗಳ ಸಂಖ್ಯೆ 2018ರಲ್ಲಿ 1,41,764ಕ್ಕೇರಿದೆ. 2017ರಲ್ಲಿ ಇಂತಹ 1,29,032 ಪ್ರಕರಣಗಳು ದಾಖಲಾಗಿದ್ದವು.

2018ರಲ್ಲಿ ಮಕ್ಕಳ ವಿರುದ್ಧದ ಪ್ರಮುಖ ಅಪರಾಧಗಳಲ್ಲಿ ಶೇ.44.2ರಷ್ಟು ಅಪಹರಣ ಪ್ರಕರಣಗಳಾಗಿದ್ದರೆ, ಶೇ.34.7 ಪ್ರಕರಣಗಳು ಪೊಕ್ಸೊ ಕಾಯ್ದೆಗೆ ಸಂಬಂಧಿಸಿದ್ದವು.

2018ರಲ್ಲಿ 67,134 ಮಕ್ಕಳು ನಾಪತ್ತೆಯಾಗಿದ್ದರೆ, ಆ ವರ್ಷ ಒಟ್ಟು 71,176 (ಹಿಂದಿನ ವರ್ಷಗಳ ಪ್ರಕರಣಗಳು ಸೇರಿದಂತೆ) ಮಕ್ಕಳನ್ನು ಪತ್ತೆ ಹಚ್ಚಲಾಗಿತ್ತು. ಪೊರ್ನೊಗ್ರಫಿಗಾಗಿ ಮಕ್ಕಳನ್ನು ಬಳಸಿಕೊಂಡ 781 ಪ್ರಕರಣಗಳು 2018ರಲ್ಲಿ ದಾಖಲಾಗಿದ್ದರೆ,2017ರಲ್ಲಿ ಇಂತಹ 331 ಪ್ರಕರಣಗಳು ವರದಿಯಾಗಿದ್ದವು.

 ದೇಶದಲ್ಲಿ ಮಕ್ಕಳ ವಿರುದ್ಧದ ಅಪರಾಧಗಳ ಒಟ್ಟು ಪ್ರಕರಣಗಳ ಪೈಕಿ ಶೇ.51ರಷ್ಟು ಉತ್ತರ ಪ್ರದೇಶ, ಮಧ್ಯಪ್ರದೇಶ,ಮಹಾರಾಷ್ಟ್ರ,ದಿಲ್ಲಿ ಮತ್ತು ಬಿಹಾರ ಈ ಐದು ರಾಜ್ಯಗಳಲ್ಲಿ ನಡೆದಿವೆ ಎಂದು ಎನ್‌ಸಿಆರ್‌ಬಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X