Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ12 Jan 2020 11:41 PM IST
share
ಓ ಮೆಣಸೇ...

ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಈಗ ಏನನ್ನೂ ಕೇಳುವ ಪ್ರಶ್ನೆಯೇ ಇಲ್ಲ - ಡಿ.ಕೆ. ಶಿವಕುಮಾರ್, ಮಾಜಿ ಸಚಿವ
ಕಾಂಗ್ರೆಸ್‌ಗೆ ನೀವೇನು ಕೊಟ್ಟಿದ್ದೀರಿ ಎಂದು ಕೇಳಬೇಡವೇ?

---------------------

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಯಾವುದೇ ಧರ್ಮೀಯರಿಗೂ ತೊಂದರೆಯಾಗದು - ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ.
ಸಂವಿಧಾನಕ್ಕಷ್ಟೇ ತೊಂದರೆ ಅಂತೀರಾ?

---------------------

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ - ಸತೀಶ್ ಜಾರಕಿಹೊಳಿ, ಶಾಸಕ.  
ಕೊಡದಿದ್ದರೆ ಏನು ಮಾಡುತ್ತೀರಿ, ಅದನ್ನೂ ಹೇಳಿ.

---------------------

ಒಳ್ಳೆಯ ಕೆಲಸ ಮಾಡುವಾಗ ನೂರು ಬೆದರಿಕೆ ಕರೆ ಬಂದರೂ ಹೆದರುವುದಿಲ್ಲ - ಈಶ್ವರಪ್ಪ, ಸಚಿವ.
ಮೊದಲು ನೀವು ಮಾಡಿದ ಒಳ್ಳೆಯ ಒಂದು ಕೆಲಸವನ್ನಾದರೂ ಹೇಳಿ?

---------------------

ಎಲ್ಲರಿಗೂ ಪೌರತ್ವ ಕೊಡಲು ಭಾರತ ತೋಟದಪ್ಪನ ಛತ್ರವಲ್ಲ - ಆರ್. ಅಶೋಕ್, ಸಚಿವ.
 ಇಡೀ ದೇಶವನ್ನು ಸಂಘಪರಿವಾರದ ಛತ್ರಿಗಳ ಕೈಗೆ ಕೊಡುವ ಯೋಜನೆ ಇದೆಯೇ?

---------------------

ನಾವು ಎರಡು ಕೈಗಳನ್ನು ಮುಗಿಯುವುದರಿಂದ ನಮ್ಮ ದೇಹದಲ್ಲಿರುವ ಶಕ್ತಿ ನಮ್ಮಲ್ಲೇ ಇರುತ್ತದೆ. ನಾವು ಶೇಕ್ ಹ್ಯಾಂಡ್ ಮಾಡುವುದರಿಂದ ಅವರ ದರಿದ್ರಗಳು ನಮಗೆ ಬರುತ್ತವೆ - ಜಗ್ಗೇಶ್, ನಟ.
ಯಾರಿಗೋ ಶೇಕ್ ಹ್ಯಾಂಡ್ ಮಾಡಿದ್ದೀರಿ...ಅದಕ್ಕೆ ಇಂತಹ ದರಿದ್ರ ಮಾತುಗಳನ್ನಾಡುತ್ತಿರುವುದು.

---------------------

ಶಿವಸೇನೆ, ಕಾಂಗ್ರೆಸ್ ಹಾಗೂ ಎನ್‌ಸಿಪಿ ನಡುವೆ ಯಾವುದೇ ರೀತಿಯ ಸೈದ್ಧಾಂತಿಕ ಸಾಮ್ಯತೆಗಳಿಲ್ಲ - ನಿತಿನ್ ಗಡ್ಕರಿ, ಕೇಂದ್ರ ಸಚಿವ.
ವಿವಿಧತೆಯಲ್ಲಿ ಏಕತೆ ಅವರ ಧೋರಣೆ ಇರಬೇಕು.

---------------------

ನಾನು ಮುಸ್ಲಿಮ್ ವಿರೋಧಿ ಅಲ್ಲ - ಸೋಮಶೇಖರ ರೆಡ್ಡಿ, ಶಾಸಕ.
ಬಹುಶಃ ಸಂವಿಧಾನದ ವಿರೋಧಿ ಇರಬೇಕು.

---------------------

ನನಗೆ ರಾಜಕೀಯ ನಿವೃತ್ತಿ ಪಡೆಯುವ ವಯಸ್ಸಾಗಿಲ್ಲ, ವೈರಾಗ್ಯವೂ ಬಂದಿಲ್ಲ - ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ.
ದೇವೇಗೌಡರೂ ಇದನ್ನೇ ಹೇಳುತ್ತಿದ್ದಾರೆ.

---------------------

ಸಿಎಂ ಕುರ್ಚಿ ಹೋದ ಬಳಿಕ ಎಚ್.ಡಿ. ಕುಮಾರಸ್ವಾಮಿ ನೀರಿನಿಂದ ಹೊರತೆಗೆದ ಮೀನಿನಂತಾಗಿದ್ದಾರೆ - ರೇಣುಕಾಚಾರ್ಯ, ಮಾಜಿ ಸಚಿವ.
ಯಡಿಯೂರಪ್ಪರ ಸ್ಥಿತಿ ಅತೃಪ್ತರ ಗಾಳಕ್ಕೆ ಸಿಕ್ಕಿ ಒದ್ದಾಡುತ್ತಿರುವ ಮೀನು.

---------------------

ನಾಯಿ ಬೊಗಳಿದರೆ ನಾವು ಅದಕ್ಕೆ ಕಚ್ಚಲಿಕ್ಕೆ ಹೋಗುವುದಿಲ್ಲ - ಲಕ್ಷ್ಮಣ ಸವದಿ, ಉಪಮುಖ್ಯಮಂತ್ರಿ.
ಬರೇ ತಿರುಗಿ ಬೊಗಳಿ ಸುಮ್ಮಾನಾಗುತ್ತೀರಿ ಎಂದು ಕಾಣುತ್ತದೆ.

---------------------

ದೇಶ ವಿಭಜನೆಯ ಸಂದರ್ಭದಲ್ಲಿ ದೇಶ ಮುನ್ನಡೆಸಿದವರು ಹೇಡಿಗಳಾಗಿದ್ದರು - ಕಲ್ಲಡ್ಕ ಪ್ರಭಾಕರ ಭಟ್, ಆರೆಸ್ಸೆಸ್ ಮುಖಂಡ.
ಬ್ರಿಟಿಷರಿಗೆ ಕ್ಷಮೆಯಾಚನೆ ಪತ್ರ ಬರೆದವರು ನಿಮ್ಮ ದೃಷ್ಟಿಯಲ್ಲಿ ವೀರರಿರಬೇಕು.

---------------------

ಭಾರತದಲ್ಲಿ ಅಪಘಾತಗಳು ಹೆಚ್ಚುತ್ತಿವೆ - ನಿತಿನ್ ಗಡ್ಕರಿ, ಕೇಂದ್ರ ಸಚಿವ
ಡ್ರೈವಿಂಗ್ ದಾಖಲೆಗಳಿಲ್ಲದ ವ್ಯಕ್ತಿಯನ್ನು ಮತದಾರರು ಕ್ಯಾಬ್‌ನ ಚಾಲಕ ಮಾಡಿರುವುದೇ ಅದಕ್ಕೆ ಕಾರಣವಂತೆ.

---------------------

ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತಂತೆ ಕಾಂಗ್ರೆಸ್ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ - ನಳಿನ್ ಕುಮಾರ್ ಕಟೀಲು, ಸಂಸದ.
ಕಾಯ್ದೆ ಜಾರಿಗೆ ತಂದಿರುವುದೇ ದೇಶಕ್ಕೆ ಬೆಂಕಿ ಹಚ್ಚುವುದಕ್ಕಂತೆ.

---------------------

ಉಪ ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಗಿರಿ ಕೊಡಬಾರದು ಎಂದು ಸುಪ್ರೀಂಕೋರ್ಟು ಹೇಳಿಲ್ಲ - ಎಚ್.ವಿಶ್ವನಾಥ್, ಮಾಜಿ ಶಾಸಕ.
ಸೋತವರಿಗಲ್ಲ, ಅನರ್ಹರಿಗೆ ಕೊಡಬಾರದು ಎಂದಿರುವುದು.

---------------------

ನಾನು ಏನೇ ಹೇಳಿದರೂ ಅದನ್ನು ವಿವಾದ ಮಾಡಿ ನನಗೆ ಪ್ರಸಿದ್ಧಿ ತಂದು ಕೊಟ್ಟವರು ಮಾಧ್ಯಮದವರು - ಅನಂತ ಕುಮಾರ್ ಹೆಗಡೆ, ಕೇಂದ್ರ ಸಚಿವ.
ಬೀದಿಯಲ್ಲಿ ಬೆತ್ತಲೆ ತಿರುಗುತ್ತಿದ್ದರೆ ಸುದ್ದಿಯಾಗದೇ ಇರುವುದು ಹೇಗೆ.

---------------------

ಪ್ರಧಾನಿ ಮೋದಿ ನನಗಿಂತ ಹೆಚ್ಚು ಬುದ್ಧಿವಂತರು - ಎಸ್.ಎಲ್. ಭೈರಪ್ಪ, ಸಾಹಿತಿ.
ನೀವು ಲದ್ದಿವಂತರಾಗಿರುವ ಕಾರಣದಿಂದಲೇ ಮೋದಿಯ ಕುರಿತು ಆತಂಕ.

---------------------

ಪಾಕಿಸ್ತಾನವು ವಿಶ್ವದ ಅತ್ಯಂತ ಸುರಕ್ಷಿತ ಸ್ಥಳಗಳಲ್ಲೊಂದಾಗಿದೆ - ಕ್ರಿಸ್ ಗೇಲ್, ವೆಸ್ಟ್ ಇಂಡಿಸ್ ಕ್ರಿಕೆಟಿಗ.
ಚಿಂತೆ ಬೇಡ. ಭಾರತ ಶೀಘ್ರದಲ್ಲೇ ಅದರ ಮಟ್ಟಕ್ಕೆ ತಲುಪಲು ಪ್ರಧಾನಿ ಶತ ಪ್ರಯತ್ನ ಮಾಡುತ್ತಿದ್ದಾರೆ.

---------------------

ಪ್ರಧಾನಿ ಮೋದಿಗೆ ಅರ್ಥಶಾಸ್ತ್ರ ಗೊತ್ತಿಲ್ಲ - ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಮುಖಂಡ.
ಅವರಿಗೆ ಶಸ್ತ್ರ ಗೊತ್ತಿದೆ. ಶಾಸ್ತ್ರ ಗೊತ್ತಿಲ್ಲ.

---------------------

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯದ್ದು ಕಟ್ ಆ್ಯಂಡ್ ಪೇಸ್ಟ್ ಸಿಡಿ - ಶೋಭಾ ಕರಂದ್ಲಾಜೆ, ಸಂಸದೆ.
ಥೇಟ್ ನಿಮ್ಮ ಸರಕಾರದ ಹಾಗೆ.

---------------------

ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಭಾರತದ ಎರಡು ಕಣ್ಣುಗಳಿದ್ದಂತೆ - ಕೆ.ಎಸ್. ಈಶ್ವರಪ್ಪ, ಸಚಿವ.
ಅದೀಗ ಎರಡು ಹುಣ್ಣಾಗಿ ಬದಲಾಗಿದೆ.

share
ಪಿ.ಎ.ರೈ
ಪಿ.ಎ.ರೈ
Next Story
X