Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇರಾನ್‍ ನಲ್ಲಿ ವ್ಯಾಪಕಗೊಂಡ ಸರಕಾರ...

ಇರಾನ್‍ ನಲ್ಲಿ ವ್ಯಾಪಕಗೊಂಡ ಸರಕಾರ ವಿರೋಧಿ ಪ್ರತಿಭಟನೆ: ಬೀದಿಗಿಳಿದ ಜನರು

ವಾರ್ತಾಭಾರತಿವಾರ್ತಾಭಾರತಿ13 Jan 2020 3:14 PM IST
share
ಇರಾನ್‍ ನಲ್ಲಿ ವ್ಯಾಪಕಗೊಂಡ ಸರಕಾರ ವಿರೋಧಿ ಪ್ರತಿಭಟನೆ: ಬೀದಿಗಿಳಿದ ಜನರು

ಟೆಹರಾನ್, ಜ. 13: ಯುಕ್ರೇನ್ ಏರ್‌ಲೈನ್ಸ್‌ಗೆ ಸೇರಿದ ನಾಗರಿಕ ವಿಮಾನವೊಂದನ್ನು ಇರಾನ್ ಸೇನೆಯು ಹೊಡೆದುರುಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಜನರ ಮೇಲೆ ಪೊಲೀಸರು ಗುಂಡು ಹಾರಿಸಿಲ್ಲ ಎಂದು ಇರಾನ್ ಪೊಲೀಸರು ಸೋಮವಾರ ಹೇಳಿದ್ದಾರೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವೀಡಿಯೊವೊಂದು ಗುಂಡು ಹಾರಾಟದ ಸದ್ದು ಮತ್ತು ರಕ್ತದ ಮಡುಗಳನ್ನು ದಾಖಲಿಸಿದೆ.

 ಇತ್ತೀಚಿನ ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವಂತೆಯೇ, ತಪ್ಪು ಗ್ರಹಿಕೆಯಿಂದ ನಾಗರಿಕ ವಿಮಾನವನ್ನು ಇರಾನ್ ಸೈನಿಕರು ಉರುಳಿಸಿರುವುದನ್ನು ವಿರೋಧಿಸಿ ಇರಾನ್‌ನಲ್ಲಿ ಪ್ರತಿಭಟನೆಯೂ ನಡೆಯುತ್ತಿದೆ. 1979ರ ಇರಾನ್ ಕ್ರಾಂತಿಯ ಬಳಿಕ, ಮೊದಲ ಬಾರಿಗೆ ಇರಾನ್ ಮತ್ತು ಅಮೆರಿಕಗಳ ನಡುವೆ ಅತ್ಯಂತ ಅಸ್ಥಿರ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.

  ಯುಕ್ರೇನ್‌ನ ನಾಗರಿಕ ವಿಮಾನವನ್ನು ಬುಧವಾರ ತಪ್ಪು ಗ್ರಹಿಕೆಯಿಂದ ಉರುಳಿಸಿರುವುದನ್ನು ಇರಾನ್ ಒಪ್ಪಿಕೊಂಡಿದೆ. ವಿಮಾನದಲ್ಲಿದ್ದ ಎಲ್ಲ 176 ಮಂದಿ ಮೃತಪಟ್ಟಿದ್ದಾರೆ. ಆರಂಭದ ಕೆಲವು ದಿನಗಳಲ್ಲಿ ಇದನ್ನು ಮುಚ್ಚಿಡಲು ಯತ್ನಿಸಿದ ಇರಾನ್, ಹೊಡೆದುರುಳಿಸಿರುವುದಕ್ಕೆ ಪುರಾವೆಗಳು ಹೊರಬರುತ್ತಿದ್ದಂತೆಯೇ ಇನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಅರಿತು ಶನಿವಾರ ತನ್ನ ತಪ್ಪನ್ನು ಒಪ್ಪಿಕೊಂಡಿತು.

ಸ್ಫೋಟಗೊಂಡ ಜನರ ಆಕ್ರೋಶ

ಪ್ರಯಾಣಿಕ ವಿಮಾನವನ್ನು ಹೊಡೆದುರುಳಿಸಿರುವ ವಿಷಯಕ್ಕೆ ಸಂಬಂಧಿಸಿ, ಇರಾನ್ ಕೃತ್ಯದ ಬಗ್ಗೆ ಆರಂಭದಲ್ಲಿ ಒಳಗೊಳಗೇ ಕುದಿಯುತ್ತಿದ್ದ ಇರಾನ್ ಜನರ ಆಕ್ರೋಶ, ಅದು ಕೃತ್ಯವನ್ನು ಒಪ್ಪಿಕೊಂಡ ಬಳಿಕ ಸ್ಫೋಟಗೊಂಡಿತು ಹಾಗೂ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಜನರು ರವಿವಾರವೂ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗಳು ನಡೆದ ಟೆಹರಾನ್‌ನ ಆಝಾದಿ ಚೌಕದ ಆಸುಪಾಸಿನಲ್ಲಿ ನಡೆಯಿತೆನ್ನಲಾದ ಗುಂಡು ಹಾರಾಟದ ಶಬ್ದವನ್ನು ಒಳಗೊಂಡ ವೀಡಿಯೊಗಳು ರವಿವಾರ ರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡವು. ನೆಲದಲ್ಲಿ ನೆತ್ತರು ಹರಿದಿರುವುದು, ಗಾಯಾಳುಗಳನ್ನು ಎತ್ತಿಕೊಂಡು ಹೋಗುವುದು ಹಾಗೂ ಭದ್ರತಾ ಸಿಬ್ಬಂದಿಯಂತೆ ಕಾಣುವ ಜನರು ರೈಫಲ್‌ಗಳೊಂದಿಗೆ ಓಡುವುದು ವೀಡಿಯೊದಲ್ಲಿ ದಾಖಲಾಗಿದೆ. ಪೊಲೀಸರು ಪ್ರತಿಭಟನಕಾರರನ್ನು ಲಾಠಿಯಿಂದ ಹೊಡೆಯುವುದು ಹಾಗೂ ಇತರರು ‘ಅವರನ್ನು ಹೊಡೆಯಬೇಡಿ’ ಎಂದು ಹೇಳುವುದು ಇತರ ವೀಡಿಯೊಗಳಲ್ಲಿ ಕಾಣುತ್ತದೆ.

 ನವೆಂಬರ್ ತಿಂಗಳಲ್ಲಿ ಬೆಲೆಯೇರಿಕೆ ವಿರುದ್ಧ ಇರಾನ್‌ನಾದ್ಯಂತ ಜನರು ನಡೆಸಿದ ಪ್ರತಿಭಟನೆಗಳ ವೇಳೆ, ಪೊಲೀಸರು ನೂರಾರು ಪ್ರತಿಭಟನಕಾರರನ್ನು ಕೊಂದಿದ್ದರು ಎನ್ನಲಾಗಿದೆ.

ಪೊಲೀಸರ ನಿರಾಕರಣೆ

‘‘ಪ್ರತಿಭಟನೆಗಳ ವೇಳೆ ಪೊಲೀಸರು ಖಂಡಿತವಾಗಿಯೂ ಗುಂಡು ಹಾರಿಸಿಲ್ಲ. ಯಾಕೆಂದರೆ, ಸಂಯಮವನ್ನು ಪ್ರದರ್ಶಿಸುವಂತೆ ಟೆಹರಾನ್ ಪೊಲೀಸರಿಗೆ ಆದೇಶ ನೀಡಲಾಗಿತ್ತು’’ ಎಂದು ಟೆಹರಾನ್ ಪೊಲೀಸ್ ಮುಖ್ಯಸ್ಥ ಹುಸೈನ್ ರಹೀಮಿ ಸರಕಾರಿ ಟಿವಿಯ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಹೇಳಿಕೆಯೊಂದರಲ್ಲಿ ತಿಳಿಸಿದರು.

ಪ್ರತಿಭಟನಕಾರರನ್ನು ಕೊಲ್ಲಬೇಡಿ, ಜಗತ್ತು ಗಮನಿಸುತ್ತಿದೆ: ಟ್ರಂಪ್

 ನಾಗರಿಕ ವಿಮಾನವನ್ನು ಹೊಡೆದುರುಳಿಸಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಾಗವಹಿಸುವವರನ್ನು ಕೊಲ್ಲಬೇಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಸರಕಾರಕ್ಕೆ ರವಿವಾರ ಎಚ್ಚರಿಕೆ ನೀಡಿದ್ದಾರೆ.

‘‘ಇರಾನ್‌ನ ನಾಯಕರಿಗೆ ನಾನು ಹೇಳುತ್ತಿರುವುದೇನೆಂದರೆ, ನಿಮ್ಮ ಪ್ರತಿಭಟನಕಾರರನ್ನು ಕೊಲ್ಲಬೇಡಿ’’ ಎಂಬುದಾಗಿ ಟ್ರಂಪ್ ಟ್ವೀಟ್ ಮಾಡಿದ್ದಾರೆ. ‘‘ಜಗತ್ತು ಹಾಗೂ ಮುಖ್ಯವಾಗಿ ಅಮೆರಿಕ ಇದನ್ನು ಗಮನಿಸುತ್ತಿದೆ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X