Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎಫ್‌ಐಎಚ್ ಹಾಕಿ ಪ್ರೊ ಲೀಗ್: ಭಾರತ...

ಎಫ್‌ಐಎಚ್ ಹಾಕಿ ಪ್ರೊ ಲೀಗ್: ಭಾರತ ಪುರುಷರ ತಂಡ ಪ್ರಕಟ

ಚಿಂಗ್ಲೆನ್‌ಸನ ಸಿಂಗ್ ಹಾಗೂ ಸುಮಿತ್ ತಂಡಕ್ಕೆ ವಾಪಸ್

ವಾರ್ತಾಭಾರತಿವಾರ್ತಾಭಾರತಿ13 Jan 2020 10:56 PM IST
share
ಎಫ್‌ಐಎಚ್ ಹಾಕಿ ಪ್ರೊ ಲೀಗ್: ಭಾರತ ಪುರುಷರ ತಂಡ ಪ್ರಕಟ

ಹೊಸದಿಲ್ಲಿ, ಜ.13: ಭುವನೇಶ್ವರದಲ್ಲಿ ನೆದರ್ಲೆಂಡ್ ವಿರುದ್ಧ ನಡೆಯಲಿರುವ ಬಹುನಿರೀಕ್ಷಿತ ವರ್ಷದ ಮೊದಲ ಹಾಕಿ ಟೂರ್ನಿ ಎಫ್‌ಐಎಚ್ ಪ್ರೊ ಲೀಗ್‌ಗೆ ಭಾರತೀಯ ಪುರುಷರ ಹಾಕಿ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಫಿಟ್ನೆಸ್ ಸಮಸ್ಯೆಯಿಂದ ಹೊರಬಂದಿರುವ ಚಿಂಗ್ಲೆನ್‌ಸನ ಸಿಂಗ್ ಹಾಗೂ ಸುಮಿತ್ ತಂಡಕ್ಕೆ ವಾಪಸಾಗಿದ್ದಾರೆ. ಚಿಂಗ್ಲೆನ್‌ಸನ ಒಂದು ವರ್ಷದ ಬಳಿಕ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ವಾಪಸಾಗುತ್ತಿದ್ದಾರೆ. ಜೂನ್‌ನಲ್ಲಿ ಎಫ್‌ಐಎಚ್ ಪುರುಷರ ಸಿರೀಸ್ ಫೈನಲ್‌ನಲ್ಲಿ ಗಾಯಗೊಂಡಿದ್ದ ಸುಮಿತ್ ತಂಡಕ್ಕೆ ಮರಳಿದ್ದಾರೆ.

 20 ಸದಸ್ಯರುಗಳನ್ನು ಒಳಗೊಂಡ ತಂಡವನ್ನು ಹಾಕಿ ಇಂಡಿಯಾ ಸೋಮವಾರ ಪ್ರಕಟಿಸಿದೆ. ಎರಡು ಪಂದ್ಯಗಳ ಸರಣಿಯು ಭುವನೇಶ್ವರದ ಕಳಿಂಗ ಹಾಕಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡಕ್ಕೆ ಡ್ರ್ಯಾಗ್ ಫ್ಲಿಕರ್ ಹರ್ಮನ್‌ಪ್ರೀತ್ ಸಿಂಗ್ ಉಪ ನಾಯಕನಾಗಿರುತ್ತಾರೆ. ಮೊದಲ ಆವೃತ್ತಿಯ ಪ್ರೊ ಲೀಗ್‌ನಿಂದ ಹೊರಗುಳಿದಿದ್ದ ಭಾರತ ಈ ಬಾರಿ ಜ.18 ಹಾಗೂ 19ರಂದು ಆಡಲಿರುವ ತನ್ನ ಚೊಚ್ಚಲ ಪ್ರೊ ಲೀಗ್‌ನಲ್ಲಿ ವಿಶ್ವದ ನಂ.3ನೇ ತಂಡ ನೆದರ್ಲೆಂಡ್‌ನ್ನು ಎದುರಿಸಲಿದೆ.

  ಫೆಬ್ರವರಿಯಲ್ಲಿ ನಡೆದ 9ನೇ ಆವೃತ್ತಿಯ ಹಾಕಿ ಇಂಡಿಯಾ ಸೀನಿಯರ್ ಪುರುಷರ ರಾಷ್ಟ್ರೀಯ ಚಾಂಪಿಯನ್-2019ರ(‘ಎ ’ ವಿಭಾಗ)ಬಳಿಕ ಚಿಂಗ್ಲೆನ್‌ಸನ ಸಕ್ರಿಯ ಹಾಕಿಯಿಂದ ದೂರ ಉಳಿದಿದ್ದರು. ರೈಲ್ವೇಸ್ ವಿರುದ್ಧ ಗೆಲುವು ತಂದುಕೊಟ್ಟಿದ್ದ ಚಿಂಗ್ಲೆನ್‌ಸನ ಫೈನಲ್‌ನಲ್ಲಿ ಪಾದದ ನೋವಿನ ಸಮಸ್ಯೆಗೆ ಒಳಗಾಗಿದ್ದರು. 23ರ ಹರೆಯದ ಸುಮಿತ್‌ಗೆ ಜೂನ್‌ನಲ್ಲಿ ಎಫ್‌ಐಎಚ್ ಪುರುಷರ ಸಿರೀಸ್ ಫೈನಲ್‌ನಲ್ಲಿ ಮಣಿಕಟ್ಟಿಗೆ ಗಾಯವಾಗಿತ್ತು. ಸಿರೀಸ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿತ್ತು. ಭಾರತ ತಂಡದಲ್ಲಿ ಹಿರಿಯ ಆಟಗಾರರಾದ ಗೋಲ್‌ಕೀಪರ್ ಪಿ.ಆರ್.ಶ್ರೀಜೇಶ್, ಕೃಷ್ಣ ಬಿ.ಪಾಠಕ್, ಗುರಿಂದರ್ ಸಿಂಗ್, ಅಮಿತ್ ರೋಹಿದಾಸ್, ಸುರೇಂದರ್ ಕುಮಾರ್ ಹಾಗೂ ಬೀರೇಂದ್ರ ಲಾಕ್ರಾ ಅವರಿದ್ದಾರೆ. ಡ್ರಾಗ್ ಫ್ಲಿಕರ್ ರೂಪಿಂದರ್ ಪಾಲ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್, ನೀಲಕಂಠ ಶರ್ಮಾ ತಂಡಕ್ಕೆ ವಾಪಸಾಗಿದ್ದಾರೆ. ರಾಷ್ಟ್ರೀಯ ಕೋಚಿಂಗ್ ಶಿಬಿರದಲ್ಲಿ ತನ್ನ ಬದ್ಧತೆ ಹಾಗೂ ಕಠಿಣ ಶ್ರಮ ತೋರಿದ್ದ ಸ್ಟ್ರೈಕರ್ ಗುರ್ಜಂತ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ಪ್ರೊ ಲೀಗ್‌ನ ತನ್ನ ಮೊದಲ ಮೂರು ಮುಖಾಮುಖಿಯಲ್ಲಿ ನೆದರ್ಲೆಂಡ್(ಜನವರಿ 18-19), ಬೆಲ್ಜಿಯಂ(ಫೆಬ್ರವರಿ 8-9) ಹಾಗೂ ಆಸ್ಟ್ರೇಲಿಯ(ಫೆಬ್ರವರಿ 21-22)ತಂಡವನ್ನು ಎದುರಿಸಲಿದೆ.

<ಭಾರತೀಯ ಹಾಕಿ ತಂಡ: ಪಿ.ಆರ್.ಶ್ರೀಜೇಶ್, ಕೃಷ್ಣ ಬಹಾದೂರ್ ಪಾಠಕ್, ಹರ್ಮನ್‌ಪ್ರೀತ್ ಸಿಂಗ್(ಉಪ ನಾಯಕ), ಗುರಿಂದರ್ ಸಿಂಗ್, ಅಮಿತ್ ರೋಹಿದಾಸ್, ಸುರೇಂದರ್ ಕುಮಾರ್, ಬೀರೇಂದ್ರ ಲಾಕ್ರಾ, ರೂಪಿಂದರ್‌ಪಾಲ್ ಸಿಂಗ್, ಮನ್‌ಪ್ರೀತ್ ಸಿಂಗ್(ನಾಯಕ), ವಿವೇಕ್ ಸಾಗರ ಪ್ರಸಾದ್, ಚಿಂಗ್ಲೆನ್‌ಸನ ಸಿಂಗ್, ನೀಲಕಂಠ ಶರ್ಮಾ, ಸುಮಿತ್, ಗುರ್ಜಂತ್ ಸಿಂಗ್, ಎಸ್.ವಿ. ಸುನೀಲ್, ಲಲಿತ್ ಕುಮಾರ್ ಉಪಾಧ್ಯಾಯ, ಮನ್‌ದೀಪ್ ಸಿಂಗ್, ಆಕಾಶ್ ದೀಪ್ ಸಿಂಗ್, ಗುರುಸಾಹಿಬ್‌ಜಿತ್ ಸಿಂಗ್, ಕೊಥಜಿತ್ ಸಿಂಗ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X