Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಲು ನಿಯಮಗಳನ್ನು 23 ಬಾರಿ ಉಲ್ಲಂಘಿಸಿದ...

ಜೈಲು ನಿಯಮಗಳನ್ನು 23 ಬಾರಿ ಉಲ್ಲಂಘಿಸಿದ ನಿರ್ಭಯಾ ಪ್ರಕರಣದ ಅಪರಾಧಿಗಳು

ವಾರ್ತಾಭಾರತಿವಾರ್ತಾಭಾರತಿ15 Jan 2020 3:05 PM IST
share
ಜೈಲು ನಿಯಮಗಳನ್ನು 23 ಬಾರಿ ಉಲ್ಲಂಘಿಸಿದ ನಿರ್ಭಯಾ ಪ್ರಕರಣದ ಅಪರಾಧಿಗಳು

ಹೊಸದಿಲ್ಲಿ. ಜ.15: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳು ಗಲ್ಲು ಶಿಕ್ಷೆಗೆ ದಿನ ಎಣಿಸುತ್ತಿರುವ ಕಳೆದ ಏಳು ವರ್ಷಗಳಲ್ಲಿ ದಿಲ್ಲಿಯ ತಿಹಾರ್ ಜೈಲಿನಲ್ಲಿ ಉಳಿದುಕೊಂಡಿದ್ದಾಗ ಜೈಲು ವೇತನವಾಗಿ ಸುಮಾರು 1,37,000 ರೂ. ಗಳಿಸಿದ್ದಾರೆ ಮತ್ತು  ಜೈಲು ನಿಯಮಗಳನ್ನು 23 ಬಾರಿ ಉಲ್ಲಂಘಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಿಲ್ಲಿಯಲ್ಲಿ 2012 ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಚಿತ್ರಹಿಂಸೆ ಮತ್ತು ಯುವ ವೈದ್ಯಕೀಯ ವಿದ್ಯಾರ್ಥಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಗಳಾದ ಅಕ್ಷಯ್ ಠಾಕೂರ್ ಸಿಂಗ್, ಮುಖೇಶ್, ಪವನ್ ಗುಪ್ತಾ ಮತ್ತು ವಿನಯ್ ಶರ್ಮಾ ತಪ್ಪಿತಸ್ಥರೆಂದು ಸಾಬೀತಾಗಿದೆ. ಜನವರಿ 22 ರಂದು ಬೆಳಿಗ್ಗೆ 7 ಗಂಟೆಗೆ ಅವರನ್ನು ಗಲ್ಲಿಗೇರಿಸಲಾಗುವುದು ಎಂದು ದಿಲ್ಲಿ ನ್ಯಾಯಾಲಯವು ಈ ತಿಂಗಳ ಆರಂಭದಲ್ಲಿ ಡೆತ್ ವಾರಂಟ್‌ಗೆ ಸಹಿ ಹಾಕಿತ್ತು.

ಜೈಲಿನಲ್ಲಿದ್ದಾಗ ಜೈಲು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಿನಯ್‌ಗೆ 11 ಬಾರಿ ಶಿಕ್ಷೆ ವಿಧಿಸಿದರೆ, ಅಕ್ಷಯ್‌ಗೆ ಒಮ್ಮೆ ಶಿಕ್ಷೆ ವಿಧಿಸಲಾಗಿದೆ.   ಮುಖೇಶ್ ಮೂರು ಬಾರಿ ಮತ್ತು ಪವನ್ ಎಂಟು ಬಾರಿ ನಿಯಮಗಳನ್ನು ಉಲ್ಲಂಘಿಸಿದ್ದಾನೆ.

ಕಳೆದ ಏಳು ವರ್ಷಗಳಲ್ಲಿ, ಮುಖೇಶ್ ಯಾವುದೇ ಕಾರ್ಮಿಕ ಕೆಲಸಗಳನ್ನು ಮಾಡದಿರಲು ನಿರ್ಧರಿಸಿದ್ದನು. ಅಕ್ಷಯ್ ಜೈಲು ವೇತನವಾಗಿ 69,000 ರೂ, ಪವನ್ 29,000 ರೂ. ಮತ್ತು ವಿನಯ್ 39,000 ರೂ. ಗಳಿಸಿದರು ಎಂದು ಮೂಲಗಳು ತಿಳಿಸಿವೆ.

2016 ರಲ್ಲಿ ಮುಖೇಶ್, ಪವನ್ ಮತ್ತು ಅಕ್ಷಯ್  10 ನೇ ತರಗತಿಗೆ ಪ್ರವೇಶ ಪಡೆದು ಪರೀಕ್ಷೆಗಳಿಗೆ ಹಾಜರಾದರೂ ಉತ್ತೀರ್ಣರಾಗಲು ಸಾಧ್ಯವಾಗಲಿಲ್ಲ. ವಿನಯ್, 2015 ರಲ್ಲಿ, ಪದವಿ ತರಗತಿಗೆ ಪ್ರವೇಶ ಪಡೆದರೂ ಅದನ್ನು ಪೂರ್ಣಗೊಳಿಸಲು ಅವನಿಗೆ ಸಾಧ್ಯವಾಗಲಿಲ್ಲ.

ಎಲ್ಲಾ ಅಪರಾಧಿಗಳಿಗೂ ಗಲ್ಲಿಗೇರುವ ಮೊದಲು ಎರಡು ಬಾರಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಅನುಮತಿ ನೀಡಲಾಗಿದೆ. ಗರಿಷ್ಠ ಶಿಕ್ಷೆಯನ್ನು ಪಡೆದ ಅಪರಾಧಿ ವಿನಯ್, ಅತ್ಯಂತ ಆತಂಕಕಾರಿ ಎಂದು ನಂಬಲಾಗಿದೆ.  

ದಿಲ್ಲಿಯಲ್ಲಿ 2012ರಲ್ಲಿ ಯುವ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಚಿತ್ರಹಿಂಸೆ ಮತ್ತು ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರನ್ನು ಗಲ್ಲಿಗೇರಿಸುವ ವ್ಯವಸ್ಥೆ ಕಳೆದ ತಿಂಗಳು ಪ್ರಾರಂಭವಾಯಿತು. ಮರಣದಂಡನೆಗೆ ಸಿದ್ಧತೆಗಾಗಿ ರವಿವಾರ ತಿಹಾರ್ ಜೈಲಿನಲ್ಲಿ "ಡಮ್ಮಿ ಮರಣದಂಡನೆ" ನಡೆಸಲಾಯಿತು.

ನಾಲ್ವರು ಅಪರಾಧಿಗಳ  ಮರಣದಂಡನೆ ಶಿಕ್ಷೆಯ ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಈಗಾಗಲೇ ತಿರಸ್ಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X