Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಳೆಯ ವಿಡಿಯೋ ತೋರಿಸಿ 'ಮಂಗಳೂರಿಗೆ ಬಂದ...

ಹಳೆಯ ವಿಡಿಯೋ ತೋರಿಸಿ 'ಮಂಗಳೂರಿಗೆ ಬಂದ ಕೇರಳದ ಪ್ರತಿಭಟನಾಕಾರರು' ಎಂದ ಖಾಸಗಿ ಚಾನಲ್

ವಾರ್ತಾಭಾರತಿವಾರ್ತಾಭಾರತಿ15 Jan 2020 11:53 PM IST
share
ಹಳೆಯ ವಿಡಿಯೋ ತೋರಿಸಿ ಮಂಗಳೂರಿಗೆ ಬಂದ ಕೇರಳದ ಪ್ರತಿಭಟನಾಕಾರರು ಎಂದ ಖಾಸಗಿ ಚಾನಲ್

ಮಂಗಳೂರು, ಜ.15: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ವಿರೋಧಿಸಿ ನಗರ ಹೊರವಲಯದ ಅಡ್ಯಾರ್-ಕಣ್ಣೂರು ಮೈದಾನದಲ್ಲಿ ಬೃಹತ್ ಜನಜಾಗೃತಿ ಸಮಾವೇಶ ನಡೆದಿದ್ದು, ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು. ಆದರೆ ಸಮಾವೇಶಕ್ಕೆ ಆಗಮಿಸಿದ ಪ್ರತಿಭಟನಾಕಾರರ ಬಗ್ಗೆ ಕನ್ನಡ ಖಾಸಗಿ ಸುದ್ದಿ ವಾಹಿನಿಯೊಂದು ತಪ್ಪು ಸುದ್ದಿ ಹಬ್ಬಿಸಿದ್ದು, ಬೋಟ್ ಮೂಲಕ ಕೇರಳದಿಂದ ಮಂಗಳೂರಿಗೆ ಪ್ರತಿಭಟನಾಕಾರರು ಆಗಮಿಸಿದ್ದಾರೆ ಎಂದು ವರದಿ ಮಾಡಿದೆ.

ಇಂದಿನ ಅಡ್ಯಾರ್-ಕಣ್ಣೂರು ಪ್ರತಿಭಟನೆಗೆ ನೂರಾರು ಬೈಕ್, ಕಾರು, ಬಸ್‌ಗಳ ಮೂಲಕ ಪ್ರತಿಭಟನಕಾರರು ಆಗಮಿಸಿದ್ದರು. ಬಿ.ಸಿ.ರೋಡ್, ಪಂಪ್‌ವೆಲ್, ನಂತೂರು, ಉಳ್ಳಾಲ ಕಡೆಯಿಂದ ಅಡ್ಯಾರ್‌ನತ್ತ ವಾಹನಗಳಲ್ಲಿ ಜನಸಾಗರವೇ ಹರಿದು ಬಂದಿತ್ತು. ಜೊತೆಗೆ ಬೋಟ್ ಗಳ ಮೂಲಕವೂ ಪ್ರತಿಭಟನಾಕಾರರು ಬಂದಿದ್ದು, ನೇತ್ರಾವತಿ ನದಿಯಲ್ಲಿ ಆಝಾದಿ ಘೋಷಣೆ ಕೂಗುತ್ತಾ ಸಮಾವೇಶಕ್ಕೆ ಬರುತ್ತಿದ್ದರು. 

ಮಂಗಳೂರು ನಗರದ ಪಕ್ಕದಲ್ಲಿರುವ ಪಾವೂರು, ಹರೇಕಳ ಕಡವಿನ ಬಳಿಯಿಂದ ಮತ್ತು ಬೆಂಗ್ರೆಯಿಂದ ಅಳಿವೆ ಬಾಗಿಲು ಮಾರ್ಗವಾಗಿ ಹಾಗೂ ಉಳ್ಳಾಲ ಕೋಟೆಪುರದಿಂದ ನೇತ್ರಾವತಿ ನದಿಯ ಮೂಲಕ ಸುಮಾರು 200ಕ್ಕೂ ಹೆಚ್ಚು ದೋಣಿಗಳಲ್ಲಿ ಸಾವಿರಾರು ಪ್ರತಿಭಟನಕಾರರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಆಝಾದಿ ಘೋಷಣೆ ಕೂಗುತ್ತಿದ್ದರು. ಆದರೆ ಕೇರಳದ ಹಳೆಯ ವಿಡಿಯೋ ತೋರಿಸಿದ 'ಸುವರ್ಣ ನ್ಯೂಸ್' ಸುದ್ದಿ ವಾಹಿನಿ ಪ್ರತಿಭಟನಾಕಾರರು ಕೇರಳದಿಂದ ಬೋಟ್ ಮೂಲಕ ಬರುತ್ತಿದ್ದಾರೆ ಎಂದು ವರದಿ ಮಾಡಿದೆ.

ಈಗಾಗಲೇ ಮಂಗಳೂರಿನಲ್ಲಿ ಡಿ.19 ರಂದು ನಡೆದ ಘಟನೆಗೆ ಕೇರಳದಿಂದ ಬಂದಿದ್ದ ದುಷ್ಕರ್ಮಿಗಳು ಕಾರಣ ಎಂದು ಕೆಲವು ರಾಜಕಾರಣಿಗಳು ಹೇಳಿಕೆ ನೀಡಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಆದರೆ ಪೊಲೀಸರು ದಾಖಲಿಸಿದ ಯಾವುದೇ ವರದಿಯಲ್ಲಿ ಕೇರಳದಿಂದ ಬಂದವರ ಉಲ್ಲೇಖವಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುವರ್ಣ ನ್ಯೂಸ್ ನ ಬುಧವಾರದ 'ಕೇರಳದ ಬೋಟ್' ಸುದ್ದಿ ಗೊಂದಲಕ್ಕೆ ಹಾಗೂ ಜನರ ಅಸಮಾಧಾನಕ್ಕೆ ಕಾರಣವಾಯಿತು. 

ಇದೇ ವಿಡಿಯೋವನ್ನು Ndtv ಕೂಡಾ ವರದಿ ಮಾಡಿದ್ದು, ಆದರೆ ಪ್ರತಿಭಟನಾಕಾರರು ಕೇರಳದಿಂದ ಬರುತ್ತಿದ್ದರು ಎಂದು ವರದಿಯಲ್ಲಿ ತಿಳಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X