Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಕ್ರೀಡಾ ಪ್ರಾಧಿಕಾರ...

ಭಾರತೀಯ ಕ್ರೀಡಾ ಪ್ರಾಧಿಕಾರ ಕೇಂದ್ರಗಳಲ್ಲಿ 45 ಲೈಂಗಿಕ ಕಿರುಕುಳದ ಪ್ರಕರಣಗಳು

ವಾರ್ತಾಭಾರತಿವಾರ್ತಾಭಾರತಿ16 Jan 2020 8:10 PM IST
share
ಭಾರತೀಯ ಕ್ರೀಡಾ ಪ್ರಾಧಿಕಾರ ಕೇಂದ್ರಗಳಲ್ಲಿ 45 ಲೈಂಗಿಕ ಕಿರುಕುಳದ ಪ್ರಕರಣಗಳು

ಹೊಸದಿಲ್ಲಿ,ಜ.17: ಕಳೆದ ಒಂದು ದಶಕದಲ್ಲಿ ದೇಶಾದ್ಯಂತ ವಿವಿಧೆಡೆ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ನಡೆಸುತ್ತಿರುವ ಕ್ರೀಡಾಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳ ನಡೆದಿರುವ ಕುರಿತು ಕನಿಷ್ಠ 45 ದೂರುಗಳು ವರದಿಯಾಗಿದ್ದು, ಅವುಗಳಲ್ಲಿ 29 ಪ್ರಕರಣಗಳು ತರಬೇತುದಾರ (ಕೋಚ್)ಗಳ ವಿರುದ್ಧವೇ ದಾಖಲಾಗಿವೆ ಎಂದು ರಾಷ್ಟ್ರೀಯ ಆಂಗ್ಲ ದಿನಪತ್ರಿಕೆಯೊಂದು ಗುರುವಾರ ವರದಿ ಮಾಡಿವೆ.

ಮಾಹಿತಿ ಹಕ್ಕು ಕಾಯ್ದೆಯಡಿ ಪತ್ರಿಕೆಯು ಈ ಮಾಹಿತಿಯನ್ನು ಪಡೆದುಕೊಂಡಿದೆ. ಬಹುತೇಕ ಪ್ರಕರಣಗಳು ಭಾರತೀಯ ಕ್ರೀಡಾ ಪ್ರಾಧಿಕಾರದ ಕೇಂದ್ರಗಳಲ್ಲಿ ವರದಿಯಾಗಿವೆ ಎಂದು ಅದು ಹೇಳಿದೆ. ಜಿಮ್ನಾಸ್ಟಿಕ್ಸ್, ಅಥ್ಲೆಟಿಕ್ಸ್, ವೇಟ್‌ಲಿಫ್ಟಿಂಗ್, ಬಾಕ್ಸಿಂಗ್ ಹಾಗೂ ಕುಸ್ತಿಯಂತಹ ಕ್ರೀಡೆಗಳಿಗೆ ತರಬೇತಿ ನೀಡಲಾಗುವ ಈ ಕೇಂದ್ರಗಳಲ್ಲಿ ಲೈಂಗಿಕ ದೌರ್ಜನ್ಯದಿಂದ ಹಿಡಿದು ದೈಹಿಕ ಕಿರುಕುಳದಂತಹ ಪ್ರಕರಣಗಳು ವರದಿಯಾಗಿವೆ.

 ಕ್ರೀಡಾತರಬೇತುದಾರರ ವಿರುದ್ಧದ ಅನೇಕ ಪ್ರಕರಣಗಳು ವರದಿಯಾಗದೆ ಇರುವುದರಿಂದ ಸರಕಾರಿ ಕ್ರೀಡಾಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆ ಇನ್ನೂ ಅಧಿಕವಾಗಿರುವ ಸಾಧ್ಯತೆಯಿದೆಯೆಂದು ಮಹಿಳಾ ಸಬಲೀಕರಣ ಕುರಿತ ಸಂಸದೀಯ ಸಮಿತಿ ವರದಿ ತಿಳಿಸಿದೆ.

ಸರಕಾರಿ ಕ್ರೀಡಾಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪದ ಕುರಿತ ತನಿಖೆ ದೀರ್ಘಕಾಲದವರೆಗೆ ಎಳೆಯಲ್ಪಡುತ್ತದೆ ಹಾಗೂ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದಾಗಲೂ ಅವರನ್ನು ಶಿಕ್ಷೆಗೊಳಪಡಿಸದೆ, ವರ್ಗಾವಣೆ, ವೇತನ ಅಥವಾ ಪಿಂಚಣಿಯಲ್ಲಿ ಕಡಿತದಂತಹ ಮೃದುವಾದ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗಿದೆಯೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ

 ಸರಕಾರಿ ಕ್ರೀಡಾಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದ ಹುಡುಗಿಯರಲ್ಲಿ ಹೆಚ್ಚಿನವರು ಬಡತನದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಮನವೊಲಿಕೆ ಅಥವಾ ಒತ್ತಡ ಹೇರುವ ಮೂಲಕ ಆರೋಪಿಗಳ ವಿರುದ್ಧದ ಹೇಳಿಕೆಗಳನ್ನು ಬದಲಾಯಿಸುವಂತೆ ಇಲ್ಲವೇ ದೂರುಗಳನ್ನು ಹಿಂತೆಗೆದುಕೊಳ್ಳುಂತೆ ಮಾಡಲಾಗಿದೆಯೆಂದು ಅವರು ಹೇಳಿದ್ದಾರೆ.

ಹಿಸಾರ್,ಗಾಂಧಿನಗರ, ತಿರುವನಂತಪುರಂ, ಹೊಸದಿಲ್ಲಿ, ಮುಂಬೈ, ಬೆಂಗಳೂರು, ಔರಂಗಾಬಾದ್ ಸೇರಿದಂತೆ ವಿವಿಧ ನಗರಗಳ ಕ್ರೀಡಾಕೇಂದ್ರಗಳಲ್ಲಿ ಲೈಂಗಿಕ ದೌರ್ಜನ್ಯದ ದೂರುಗಳು ದಾಖಲಾಗಿವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X