Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 92,000 ಕೋ.ರೂ. ಬಾಕಿ ಪಾವತಿಸಲು ...

92,000 ಕೋ.ರೂ. ಬಾಕಿ ಪಾವತಿಸಲು ದೂರಸಂಪರ್ಕ ಕಂಪೆನಿಗಳಿಗೆ ಸುಪ್ರೀಂ ಆದೇಶ

ಪುನರ್‌ಪರಿಶೀಲನೆ ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ16 Jan 2020 9:07 PM IST
share
92,000 ಕೋ.ರೂ. ಬಾಕಿ ಪಾವತಿಸಲು  ದೂರಸಂಪರ್ಕ ಕಂಪೆನಿಗಳಿಗೆ ಸುಪ್ರೀಂ ಆದೇಶ

ಹೊಸದಿಲ್ಲಿ,ಜ.16: ತಮ್ಮಿಂದ 92,000 ಕೋ.ರೂ.ಗಳ ಬಾಕಿಯನ್ನು ವಸೂಲು ಮಾಡಲು ಸರಕಾರಕ್ಕೆ ಅವಕಾಶವನ್ನು ನೀಡಿರುವ ಹಿಂದಿನ ಆದೇಶದ ಪುನರ್‌ಪರಿಶೀಲನೆಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದ್ದು, ಮೊಬೈಲ್ ಸೇವಾ ಸಂಸ್ಥೆಗಳಿಗೆ ಭಾರೀ ಹಿನ್ನಡೆಯುಂಟಾಗಿದೆ.

  ಟೆಲಿಕಾಮ್ ಕಂಪೆನಿಗಳಿಂದ ಬಾಕಿ ಮೊತ್ತವನ್ನು ವಸೂಲು ಮಾಡಲು ದೂರ ಸಂಪರ್ಕ ಇಲಾಖೆ (ಡಾಟ್)ಗೆ ಅವಕಾಶ ಕಲ್ಪಿಸಿ ಕಳೆದ ವರ್ಷ ಆದೇಶಿಸಿದ್ದ ಸರ್ವೋಚ್ಚ ನ್ಯಾಯಾಲಯವು,ತನ್ನ ಆದೇಶವನ್ನು ಪಾಲಿಸಲು ಈ ಕಂಪೆನಿಗಳಿಗೆ ಮೂರು ತಿಂಗಳ ಕಾಲಾವಕಾಶವನ್ನು ನೀಡಿತ್ತು. ಸದ್ರಿ ಆದೇಶದ ಪುನರ್‌ಪರಿಶೀಲನೆಯನ್ನು ಕೋರಿ ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಇಂಡಿಯಾ ಸೇರಿದಂತೆ ಕಂಪೆನಿಗಳು ಅರ್ಜಿಯನ್ನು ಸಲ್ಲಿಸಿದ್ದವು.

ಕೋಟ್ಯಂತರ ರೂ.ಗಳ ಸಾಲದ ಹೊರೆಯಿಂದ ತತ್ತರಿಸಿರುವ ದೂರಸಂಪರ್ಕ ಕಂಪೆನಿಗಳು ಬದುಕುಳಿಯಲು ತೀವ್ರ ಹೋರಾಟದಲ್ಲಿ ತೊಡಗಿರುವ ನಡುವೆಯೇ ಸರ್ವೋಚ್ಚ ನ್ಯಾಯಾಲಯವು ಗುರುವಾರ ಅವುಗಳಿಗೆ ಭಾರೀ ಆಘಾತವನ್ನುಂಟು ಮಾಡಿದೆ.

ಈ ಕಂಪೆನಿಗಳು ತನಗೆ ಬಾಕಿ ಮತ್ತು ಅದರ ಮೇಲಿನ ಬಡ್ಡಿ ಸೇರಿದಂತೆ 92,000 ಕೋ.ರೂ.ಗಳನ್ನು ಪಾವತಿಸಬೇಕಿದೆ ಎಂಬ ಡಾಟ್ ಬೇಡಿಕೆಯನ್ನು ಸರ್ವೋಚ್ಚ ನ್ಯಾಯಾಲಯವು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಎತ್ತಿ ಹಿಡಿದಿತ್ತು. ಬಾಕಿಯನ್ನು ಪಾವತಿಸಲು ಕಂಪೆನಿಗಳಿಗೆ ಮೂರು ತಿಂಗಳ ಕಾಲಾವಕಾಶವನ್ನು ಅದು ನೀಡಿತ್ತು.

ಭಾರ್ತಿ ಏರ್‌ಟೆಲ್, ವೊಡಾಫೋನ್ ಇಂಡಿಯಾ ಮತ್ತು ರಿಲಾಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್)ನಿಂದ ಪರವಾನಿಗೆ ಶುಲ್ಕವಾಗಿ 92,000 ಕೋ.ರೂ. ಮತ್ತು ಸ್ಪೆಕ್ಟ್ರಂ ಬಳಕೆ ಶುಲ್ಕವಾಗಿ 41,000 ಕೋ.ರೂ.ತನಗೆ ಬರಬೇಕಿದೆ ಎಂದು ಡಾಟ್ ಅರ್ಜಿಯಲ್ಲಿ ತಿಳಿಸಿತ್ತು. ಈ ಪೈಕಿ ಸುಮಾರು 23,000 ಕೋ.ರೂ.ಗಳನ್ನು ಭಾರ್ತಿ ಏರ್‌ಟೆಲ್,19,873.71 ಕೋ.ರೂ.ಗಳನ್ನು ವೊಡಾಫೋನ್ ಇಂಡಿಯಾ ಮತ್ತು 16,456.47 ಕೋ.ರೂ.ಗಳನ್ನು ಆರ್‌ಕಾಮ್ ಬಾಕಿ ಉಳಿಸಿಕೊಂಡಿದ್ದವು.

ಡಿಸೆಂಬರ್ 2017ರಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದ ಆರ್‌ಕಾಮ್ ಕಳೆದ ವರ್ಷ ದಿವಾಳಿ ಅರ್ಜಿಯನ್ನು ಸಲ್ಲಿಸಿದ್ದರೆ,ಸರಕಾರವು ಪರಿಹಾರದ ಕೊಡುಗೆಯನ್ನು ನೀಡದಿದ್ದರೆ ಅಥವಾ ಕಾನೂನು ಮೂಲಕ ಪರಿಹಾರ ದೊರೆಯದಿದ್ದರೆ ತಾನು ಭಾರತದಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ ಎಂದು ವೊಡಾಫೋನ್ ಇಂಡಿಯಾ ಈಗಾಗಲೇ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X