Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇರಳ ಸರಕಾರದ 'ಬೀಫ್' ಟ್ವೀಟ್ ರಿಟ್ವೀಟ್...

ಕೇರಳ ಸರಕಾರದ 'ಬೀಫ್' ಟ್ವೀಟ್ ರಿಟ್ವೀಟ್ ಮಾಡಿ ಪೇಚಿಗೆ ಸಿಲುಕಿದ ಸಿ.ಟಿ.ರವಿ!

ಟ್ವಿಟರಿಗರ ಆಕ್ರೋಶಕ್ಕೆ ತುತ್ತಾದ ಬಿಜೆಪಿ ನಾಯಕ

ವಾರ್ತಾಭಾರತಿವಾರ್ತಾಭಾರತಿ16 Jan 2020 9:15 PM IST
share
ಕೇರಳ ಸರಕಾರದ ಬೀಫ್ ಟ್ವೀಟ್ ರಿಟ್ವೀಟ್ ಮಾಡಿ ಪೇಚಿಗೆ ಸಿಲುಕಿದ ಸಿ.ಟಿ.ರವಿ!

ಬೆಂಗಳೂರು: ಕೇರಳದ ಪ್ರವಾಸೋದ್ಯಮದ ಟ್ವಿಟರ್ ಹ್ಯಾಂಡಲ್ ಇಂದು ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟನ್ನು ರಿಟ್ವೀಟ್ ಮಾಡುವ ಮೂಲಕ ಬಿಜೆಪಿ ನಾಯಕ ಸಿ.ಟಿ. ರವಿ ಪೇಚಿಗೆ ಸಿಲುಕಿದ್ದಾರೆ.

ಇಂದು @KeralaTourism ರಾಜ್ಯದ ಜನಪ್ರಿಯ ಬೀಫ್ ಫ್ರೈ ಖಾದ್ಯದ ಒಂದು ಫೋಟೋ ಪೋಸ್ಟ್ ಮಾಡಿ ಅದರ ರೆಸಿಪಿ ಲಿಂಕ್ ಕೂಡ ನೀಡಿತ್ತು.

"ಪರಿಮಳಯುಕ್ತ ಸಾಂಬಾರ ಪದಾರ್ಥಗಳು, ತೆಂಗಿನಕಾಯಿ ತುಂಡುಗಳು ಹಾಗೂ ಕರಿಬೇವಿನ ಸೊಪ್ಪಿನ ಜತೆ ಸಣ್ಣ ಉರಿಯಲ್ಲಿ ರೋಸ್ಟ್ ಮಾಡಲ್ಪಟ್ಟ ಬೀಫ್‍ ನ ಸಣ್ಣ  ಮೆದುವಾದ ತುಂಡುಗಳು. ಬೀಫ್ ಉಲತಿಯತ್, ಅತ್ಯಂತ ಕ್ಲಾಸಿಕ್ ಖಾದ್ಯದ ರೆಸಿಪಿ''  ಎಂದು ಕೇರಳಟೂರಿಸಂ ಟ್ವೀಟ್‍ ನಲ್ಲಿ ಬರೆಯಲಾಗಿತ್ತು ಹಾಗೂ ಕೊನೆಗೆ ಆ ರೆಸಿಪಿಯಿರುವ ವೆಬ್‍ ಸೈಟ್ ಲಿಂಕ್ ನೀಡಲಾಗಿತ್ತು.

ಈ ಟ್ವೀಟನ್ನು ಸಿ.ಟಿ. ರವಿಯವರು ರಿಟ್ವೀಟ್ ಮಾಡಿ, 'ಕರ್ನಾಟಕಕ್ಕೆ ಸುಸ್ವಾಗತ' ಎಂದು ಬರೆದಿದ್ದರು.

ಈ ಟ್ವೀಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಟ್ವಿಟರಿಗರು, "ನಮ್ ಹಿಂದೂ ಧರ್ಮ ಗೋ ಮಾತೆ ಬಗ್ಗೆ ಪುಂಕಾನು ಪುಂಕ ಪುಂಗಿ ಈರೀತಿ ಟ್ವೀಟ್ ಮಾಡಿದಿರಲ್ಲ ಸ್ವಾಮಿ. ಅಮಾಯಕರನ್ನು ಧರ್ಮದ ಬಗ್ಗೆ ತಲೆಗೆ ತುಂಬಿ ನೀವು ಈತರ ಮಾಡೊದು ಸರಿಯೇ...", " ಸಂಘಿಗಳು  ಅತೀ ಪ್ರಾಣಿಪ್ರಿಯರು... ಪಾಪ ಮಾಂಸವೆಂದರೆ ದೂರ ನಿಲ್ಲುವ ಮನೋಜೀವಿಗಳು, ಇಂಥ ಅಜ್ಞಾನಿ ಕೋಮುಗಳ ಕೈಲಿ ನಮ್ ದೇಶದ ಧಿಕ್ಕುಗಳು ಬದಲಾದವು", "ದೊಡ್ಡದಾಗಿ ಬಿಲ್ಡಪ್ ಕೊಡೋ ಬಿಜೆಪಿ ಲಜ್ಜೆಗೆಟ್ಟವರು 'ಗೋ ಹತ್ಯೆ ನಿಷೇಧ' ಮಾಡ್ಬೇಕು ಅನ್ನೋ ಕಳ್ಳರ ಪಾರ್ಟಿಯೊಂದು ಗೋಮಾಂಸದ ವಿಷಯ ಪ್ರಸ್ತಾಪಿಸಿರುವುದು ವಿಷಾಧಕರ. ಧರ್ಮ, ಜಾತಿ, ದೇವರು, ದೇಶ ಅಂತ ವಿಷಬೀಜ ಬಿತ್ತಿ ದೇಶ ಒಡೆದು ನಾಚಿಕೆಯಿಲ್ಲದೆ ಸಂಘದ ಪರವಾಗಿ ನೀವು ಮಾಡೋ ಕೆಟ್ಟ ಕೆಲಸಗಳು ಜನರಿಗೆ ಈಗಲಾದರೂ ಅರಿವಾಗಲಿ", "ಏನ್ಸಾರ್​ ಇದು, ಬೀಪ್​ ವೆಲ್​ಕಮ್​ ಮಾಡ್ತೀದಿರಾ..? ಅವ್ರೇನೋ ಸೆಕ್ಯೂಲರ್​ ಹೆಸರಲ್ಲಿ, ಸಂಸ್ಕ್ರತಿಯನ್ನೆಲ್ಲಾ ಬಿಟ್ಟಾಕಿ ಮಾಡಬಾರದ್ದನ್ನೆಲ್ಲಾ ಮಾಡ್ತೀದಾರೆ. ನೀವು ಅದನ್ನ ವೆಲ್​ಕಮ್​ ಅಂತೀದಿರಾ...! ನಾವು ಇದನ್ನ ಬಿಜೆಪಿ ನಾಯಕರಿಂದ ನಿರೀಕ್ಷಿಸಿರಲಿಲ್ಲ", "ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತು ಅನ್ನೋ ಗಾದೆ ನಿಮಗೆ ಸರಿಯಾಗಿ ಅನ್ವಯಿಸುತ್ತೆ, ನೀವು ಯಾವುದನ್ನ ಸ್ವಾಗತಿಸುತ್ತಿದ್ದೀರಿ ಗೋಮಾಂಸ ಭಕ್ಷನೆಯನ್ನೋ !? ಕೇರಳ ಪ್ರವಾಸೋದ್ಯಮವನ್ನೋ!?" ಎಂದು ಸಿಟಿ ರವಿ ವಿರುದ್ಧ ಹರಿಹಾಯ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ  ಆಕ್ರೋಶ ಹೆಚ್ಚುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿದ ಸಿಟಿ ರವಿಯವರು, "ಗೆಳೆಯರೆ ನಾನು ಬೀಫನ್ನು ಬೆಂಬಲಿಸುತ್ತೇನೆ ಎಂದು ನೀವು ಆಲೋಚನೆ ಮಾಡಲು ಹೇಗೆ ಸಾಧ್ಯ. ಅದು ನನ್ನ ನಂಬಿಕೆಗೆ ವಿರುದ್ಧವಾದುದು. ನಿಮ್ಮಲ್ಲಿ ಹಲವರಿಗೆ ಕೇರಳ ಪ್ರವಾಸೋದ್ಯಮದ ಟ್ವೀಟ್ ನಿಂದ ನೋವಾಗಿದೆ ಎಂದು ನನಗೆ ತಿಳಿದಿದೆ. ನನ್ನ ಟ್ವೀಟ್ ವ್ಯಂಗ್ಯದಿಂದ ಕೂಡಿತ್ತು ಮತ್ತು ಅದರ ವಿರುದ್ಧ ಮೌನ ಪ್ರತಿಭಟನೆಯಾಗಿತ್ತು" ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X