Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಅಂತಾರಾಷ್ಟ್ರೀಯ ಗಾಳಿಪಟ...

ಮಂಗಳೂರು: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Jan 2020 10:48 PM IST
share
ಮಂಗಳೂರು: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ

ಮಂಗಳೂರು, ಜ.17: ಕರಾವಳಿ ಉತ್ಸವದ ಪ್ರಯುಕ್ತ ಮೂರು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಪಣಂಬೂರು ಕಡಲತೀರದಲ್ಲಿ ಶಾಸಕ ಭರತ್ ಶೆಟ್ಟಿ ಶುಕ್ರವಾರ ಸಂಜೆ ಚಾಲನೆ ನೀಡಿದರು.

ಚಿಕ್ಕ ಗಾಳಿಪಟಗಳಿಂದ ಹಿಡಿದು ಕೆಲವು ಮೀಟರ್‌ಗಳಷ್ಟು ಉದ್ದದ ಗಾಳಿಪಟಗಳು ಇನ್ನೂ ಮೂರು ದಿನಗಳ ಕಾಲ ಪಣಂಬೂರಿನಲ್ಲಿ ನೋಡುಗರ ಕಣ್ಮನ ಸೆಳೆಯಲಿವೆ. ಅಮೆರಿಕ, ಥೈಲ್ಯಾಂಡ್, ನೆದರ್‌ಲ್ಯಾಂಡ್ ಚೀನಾ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳಿಂದ ಗಾಳಿಪಟ ಹಾರಿಸುವವರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದ ಹಲವು ಗಾಳಿಪಟ ಹಾರಿಸುವವರು ಉತ್ಸವದಲ್ಲಿ ಪಾಲ್ಗೊಂಡು ತಾವು ತಂದ ಗಾಳಿಪಟಗಳ ಹಾರಾಟ ನಡೆಸಿದರು.

ಕುದುರೆ, ಮೊಸಳೆ, ವಿವಿಧ ಬಗೆಯ ಸಮುದ್ರ ಜೀವಿಗಳು, ಕೆಲವು ಹಣ್ಣು-ಹಂಪಲು ಮಾದರಿಗಳು ಸಮುದ್ರ ತೀರದ ನೀಲಿಯ ಆಗಸದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತ ಹಕ್ಕಿಗಳಾದವು. ಹಾವಿನಾಕಾರದಲ್ಲಿ ಸುಯ್ಯನೆ ಗಾಳಿಯಲ್ಲಿ ಚುರುಕಾಗಿ ಓಡಾಡುವ ಭಾರೀ ಉದ್ದದ ಹಾವಿನಾಕಾರದ ಗಾಳಿಪಟವಂತೂ ನೋಡುಗರನ್ನು ಮೈನವಿರೇಳಿಸುತ್ತಾ ಸೆಳೆಯುತ್ತಿತ್ತು. ಚಿತ್ರ ವಿಚಿತ್ರ ಬಗೆಯ ಗಾಳಿಪಟಗಳನ್ನು ಹಾರಿಸಿ ಕರಾವಳಿಯ ಜನರನ್ನು ಸೆಳೆದರು.

ಥೈಲ್ಯಾಂಡ್ ಗಣಪತಿ ಗಾಳಿಪಟವೂ ವಿಶೇಷ ಆಕರ್ಷಣೆಗೆ ಪಾತ್ರವಾಯಿತು. ದೇಶ ವಿದೇಶಗಳ ಒಟ್ಟು 20 ತಂಡಗಳು ಭಾಗವಹಿ ಸಿವೆ. ಪ್ರತಿ ತಂಡಗಳೂ 10-15 ಗಾಳಿಪಟಗಳನ್ನು ತಂದಿದ್ದು, ಇನ್ನೆರಡು ದಿನಗಳ ಕಾಲ ಪಣಂಬಯುರು ಕಡಲತೀರದಲ್ಲಿ ನೂರಾರು ಗಾಳಿಪಟಗಳು ಜನರ ಮನಸ್ಸನ್ನು ಸೂರೆಗೊಳಿಸಲಿವೆ.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡುದ ಚೀನಾದ ಗಾಳಿಪಟ ಹಾರಾಟಗಾರ ತೇನ್ ಜಿಂಬೊ, ‘ಈ ಉತ್ಸವ ಆಯೋಜಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಗಾಳಿಪಟ ಉತ್ಸವಗಳಿಂದ ವಿವಿಧ ದೇಶಗಳ ಜನರ ನಡುವೆ ಬಾಂಧವ್ಯ ವೃದ್ಧಿಸುತ್ತದೆ. ಇಂಥ ಉತ್ಸವಗಳನ್ನು ಇನ್ನೂ ಹೆಚ್ಚುನ ಸಂಖ್ಯೆಯಲ್ಲಿ ನೆರವೇರಿಸಬೇಕು’ ಎಂದು ಅಭಿಪ್ರಾಯ ಹಂಚಿಕೊಂಡರು.

ಕೈಟ್ ಕಪಲ್: ಪತಿ ಅಮೆರಿಕದವರಾದರೆ ಪತ್ನಿ ಥೈಲ್ಯಾಂಡ್‌ನವರು. ಗಾಳಿಪಟ ಹಾರಾಟದಿಂದಲೇ ಗೆಳೆತನವಾಗಿ ವಿವಾಹವಾದವರು. ರೋನ್ ಸ್ಪೌಲ್ಡಿಂಗ್, ಬೇವ್ ಸ್ಪೌಲ್ಡಿಂಗ್. ಭಾರತಕ್ಕೆ 10 ಸಲ ಬಂದಿದ್ದಾರೆ. ಮಂಳೂರಿಗೆ ಮೊದಲ ಬಾರಿ ಬಂದಿದ್ದ ಅವರು, ಮಂಗಳೂರಿನ ವಾತಾವರಣ ಸಂಸ್ಕೃತಿಯ ಬಗ್ಗೆಯೂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭ ಮೂಡಾ ಆಯುಕ್ತ ಶ್ರೀಕಾಂತ್, ಕಂದಾಯ ಉಪ ಆಯುಕ್ತೆ ಗಾಯತ್ರಿ ನಾಯಕ್, ಆರ್‌ಎಫ್‌ಒ ಶ್ರೀಧರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X