Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 5 ವರ್ಷಗಳಲ್ಲಿ ರಾಜ್ಯದ ಬಹುತೇಕ...

5 ವರ್ಷಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಂದ ವಿಮಾನ ಹಾರಾಟ: ಪ್ರದೀಪ್‌ ಸಿಂಗ್ ಖರೋಲಾ

ವಾರ್ತಾಭಾರತಿವಾರ್ತಾಭಾರತಿ18 Jan 2020 10:34 PM IST
share
5 ವರ್ಷಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಂದ ವಿಮಾನ ಹಾರಾಟ: ಪ್ರದೀಪ್‌ ಸಿಂಗ್ ಖರೋಲಾ

ಬೆಂಗಳೂರು, ಜ.18: ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ ಬಹುತೇಕ ಜಿಲ್ಲಾ ಕೇಂದ್ರಗಳಿಂದಲೂ ವಿಮಾನಗಳು ಹಾರಾಟ ನಡೆಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ್‌ಸಿಂಗ್ ಖರೋಲಾ ತಿಳಿಸಿದರು.

ಶನಿವಾರ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ವಿಂಗ್ಸ್ ಇಂಡಿಯಾ-2020 ಹಿನ್ನೆಲೆಯಲ್ಲಿ ಉದ್ಯಮಿಗಳ ಜತೆ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭವಿಷ್ಯದಲ್ಲಿ ದೇಶ ವ್ಯಾಪ್ತಿ ವಿಮಾನ ನಿಲ್ದಾಣಗಳು ಮತ್ತು ಹೆಲಿಪೋರ್ಟ್‌ಗಳ ಸಂಖ್ಯೆ ದುಪ್ಪಟ್ಟಾಗಲಿದೆ. ಅಲ್ಲದೆ, ಕಳೆದ ಐದು ವರ್ಷಗಳಲ್ಲಿ 40ಕ್ಕೂ ಅಧಿಕ ವಿಮಾನ ನಿಲ್ದಾಣಗಳು, ಹೆಲಿಪೋರ್ಟ್‌ಗಳು (ಹೆಲಿಕಾಪ್ಟರ್ ನಿಲ್ದಾಣ) ತಲೆಯೆತ್ತಿವೆ ಎಂದರು.

ಇತ್ತೀಚೆಗೆ ಕಲಬುರ್ಗಿಯಿಂದ ವಿಮಾನ ಹಾರಾಟ ಆರಂಭಗೊಂಡಿದೆ. ಶೀಘ್ರದಲ್ಲೇ ಬೀದರ್ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಲಿದೆ. ಬರುವ ವರ್ಷದಲ್ಲಿ ಇನ್ನೂ ಎರಡು-ಮೂರು ವಿಮಾನ ನಿಲ್ದಾಣಗಳು ಸೇವೆಗೆ ಸಿದ್ಧಗೊಳ್ಳಲಿವೆ ಎಂದ ಅವರು, ಪ್ರತಿ ವರ್ಷ ನಮಗೆ 700ರಿಂದ 800 ಪೈಲಟ್‌ಗಳ ಅವಶ್ಯಕತೆ ಇದೆ. ಆದರೆ, ಸದ್ಯ 300 ಪೈಲಟ್‌ಗಳ ಪೂರೈಕೆ ಆಗುತ್ತಿದೆ. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಅವಶ್ಯಕತೆ ಇದೆ. ಜತೆಗೆ ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಮರುಪರಿಶೀಲನೆಗೊಳಪಡಿಸಿ, ಸಡಿಲಗೊಳಿಸುವ ಅಗತ್ಯವೂ ಇದೆ ಎಂದು ತಿಳಿಸಿದರು.

ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮಾತನಾಡಿ, ಕೆಲವೇ ವಾರಗಳಲ್ಲಿ ಬೀದರ್ ವಿಮಾನ ನಿಲ್ದಾಣವು ಸೇವೆಗೆ ಮುಕ್ತವಾಗಲಿದೆ. ಬರುವ ವರ್ಷ ಶಿವಮೊಗ್ಗ, ವಿಜಯಪುರ, ಕಾರವಾರ ಮತ್ತು ಹಾಸನದಿಂದ ವಿಮಾನಗಳು ಹಾರಾಟ ನಡೆಸಲಿದ್ದು, ಭವಿಷ್ಯದಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಿಂದ ವಿಮಾನ ನಿಲ್ದಾಣ ಸ್ಥಾಪನೆ ಗುರಿ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಧೀ, ಮಾನವ ಬಾಹ್ಯಾಕಾಶ ವೈಮಾನಿಕ ಕೇಂದ್ರ (ಎಚ್‌ಎಸ್‌ಎಫ್‌ಸಿ) ಸ್ಥಾಪಕ ಅಧ್ಯಕ್ಷ ಉನ್ನಿಕೃಷ್ಣನ್ ನಾಯರ್, ಬಿಐಎಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಮರಾರ್ ಮತ್ತಿತರರು ಪಾಲ್ಗೊಂಡಿದ್ದರು.

ಡ್ರೋನ್; ಮನವಿ

ಎಲ್ಲ ಪ್ರಕಾರದ ಡ್ರೋನ್‌ಗಳು ಮತ್ತು ಅವುಗಳನ್ನು ನಿರ್ವಹಣೆ ಮಾಡುವವರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಸುರಕ್ಷತೆ ದೃಷ್ಟಿಯಿಂದ ಇದು ಬಹುಮುಖ್ಯ. ಈ ದತ್ತಾಂಶಗಳ ಸಂಗ್ರಹ ಪ್ರಕ್ರಿಯೆ ಪೂರ್ಣಗೊಂಡ ನಂತರ ಡ್ರೋನ್ ಕಾರ್ಯಾಚರಣೆಗೆ ಪರವಾನಿಗೆಗಳನ್ನು ನೀಡಲಾಗುವುದು. ಈ ಸಂಬಂಧದ ನಿಯಮಗಳು ಉದ್ಯಮ ಸ್ನೇಹಿ ಆಗಿರಲಿವೆ. ಇದರಲ್ಲಿ ಯಾವುದೇ ಅನುಮಾನಗಳು ಬೇಡ ಎಂದು ಪ್ರದೀಪ್‌ಸಿಂಗ್ ಖರೋಲಾ ತಿಳಿಸಿದರು.

‘ವಿಂಗ್ಸ್ ಇಂಡಿಯಾ-2020’ ಮಾರ್ಚ್ 12ರಿಂದ 15ರವರೆಗೆ ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ನಡೆಯಲಿದೆ. ಮೂರು ದಿನಗಳ ಈ ಮೇಳದಲ್ಲಿ ವೈಮಾನಿಕ ಉದ್ಯಮದ ಬೆಳವಣಿಗೆ ಕುರಿತ ಗೋಷ್ಠಿಗಳು, ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X