Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಇದು ಜೀವನ್ಮರಣದ ಹೋರಾಟ

ಇದು ಜೀವನ್ಮರಣದ ಹೋರಾಟ

ಸನತ್ ಕುಮಾರ್ ಬೆಳಗಲಿಸನತ್ ಕುಮಾರ್ ಬೆಳಗಲಿ19 Jan 2020 11:55 PM IST
share
ಇದು ಜೀವನ್ಮರಣದ ಹೋರಾಟ

ಕಳೆದ ಒಂದೂವರೆ ತಿಂಗಳಿಂದ ಪ್ರತಿನಿತ್ಯವೂ ದಿಲ್ಲಿ, ಮುಂಬೈ, ಬೆಂಗಳೂರು, ಕಲಬುರಗಿ, ಹೈದರಾಬಾದ್ ಮುಂತಾದ ಕಡೆ ಸಭೆ, ಪ್ರತಿಭಟನೆಗಳು ನಡೆಯುತ್ತಲೇ ಇವೆ. ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಲೇ ಇದ್ದಾರೆ. ಸಾಂಸ್ಕೃತಿಕ ಜಗತ್ತು ದೊಡ್ಡ ಪ್ರಮಾಣದಲ್ಲಿ ಈ ಹೋರಾಟಕ್ಕೆ ಸ್ಪಂದಿಸುತ್ತಿದೆ. ಈ ಹೋರಾಟದಲ್ಲಿ ಮುಸ್ಲಿಮರನ್ನು ಒಂಟಿಯಾಗಿರಲು ಬಿಡುವುದಿಲ್ಲ ಎಂದು ಎಲ್ಲ ಸಮುದಾಯಗಳ ಮನುಷ್ಯ ಪ್ರೀತಿಯ ಮನಸ್ಸುಗಳು ಒಂದಾಗಿ ನಿಂತಿವೆ.


ಜನಾಂಗ ದ್ವೇಷದ ವಿಷ ತುಂಬಿದ ಕರಾಳ ಪೌರತ್ವ ಕಾಯ್ದೆಯ ವಿರುದ್ಧ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಹೋರಾಟ ಈ ದೇಶದ ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿದು ಭವಿಷ್ಯದ ಭಾರತಕ್ಕೆ ಹೊಸ ದಿಕ್ಕು ತೋರಿಸುವ ಹೋರಾಟವಾಗಿದೆ.ದೇಶದ ರಾಜಧಾನಿ ದಿಲ್ಲಿ, ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಷ್ಟ್ರವ್ಯಾಪಿ ಈ ಹೋರಾಟ ಪ್ರತಿ ನಿತ್ಯವೂ ನಡೆಯುತ್ತಲೆ ಇದೆ, ಇದು ಅಂತಿಂಥ ಹೋರಾಟವಲ್ಲ ಅಳಿವು ಉಳಿವಿನ ಮಹಾಸಮರ.

ದೇಶದ ಸ್ವಾತಂತ್ರ ಹೋರಾಟದ ನಂತರ ಭಾರತ ಕಂಡ ಎರಡನೇ ಮಹಾ ಜನ ಚಳವಳಿ ಇದು. 1974-75 ರಲ್ಲಿ ನಡೆದ ಜಯಪ್ರಕಾಶ್ ನಾರಾಯಣ (ಜೆ.ಪಿ) ಚಳವಳಿಯನ್ನು ಮತ್ತು 2013 ರಲ್ಲಿ ನಡೆದ ಅಣ್ಣಾ ಹಝಾರೆ ನಾಯಕತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಗಳನ್ನು ಕೂಡ ಎರಡನೇ ಸ್ವಾತಂತ್ರ ಸಂಗ್ರಾಮ ಎಂದು ವರ್ಣಿಸಲಾಗುತ್ತದೆ. ಆದರೆ ಈ ಎರಡೂ ಚಳವಳಿಗಳಿಗೆ ಜೆಪಿ ಮತ್ತು ಅಣ್ಣಾ ಹಝಾರೆ ಅಂಥವರ ನಾಯಕತ್ವವೇನೋ ಸಿಕ್ಕಿತ್ತು. ಆದರೆ ನಿರ್ದಿಷ್ಟ ಗೊತ್ತು ಗುರಿಗಳಿಲ್ಲದ ಅವುಗಳನ್ನು ತೆರೆ ಮರೆಯಲ್ಲಿ ಕುಳಿತು ನಾಗಪುರದ ಸಂವಿಧಾನೇತರ ಅಧಿಕಾರ ಕೇಂದ್ರ ನಿಯಂತ್ರಿಸುತ್ತಿತ್ತು.ಅಣ್ಣಾ ಹಝಾರೆ ಚಳವಳಿಯಲ್ಲಂತೂ ಸಂಘಪರಿವಾರ ಸ್ವಯಂ ಸೇವಕ ಪಡೆ ಮತ್ತು ಕಾರ್ಪೊರೇಟ್ ಹಣ, ಬಾಬಾ ರಾಮ್‌ದೇವರಂತಹ ವ್ಯಾಪಾರಿ ಧಾರ್ಮಿಕ ದಂಧೆ ಕೋರರ ಪ್ರಹಸನಗಳು ಪ್ರಮುಖ ಪಾತ್ರ ವಹಿಸಿದ್ದವು. ಇವೆರಡೂ ಚಳವಳಿಗೆ ಪರ್ಯಾಯದ ಸ್ಪಷ್ಟ ಪರಿಕಲ್ಪನೆ ಇರಲಿಲ್ಲ. ಇದರ ಸಂಪೂರ್ಣ ಲಾಭ ಪಡೆದ ಕೋಮುವಾದಿ ಶಕ್ತಿಗಳು ಅಧಿಕಾರ ಸ್ವಾಧೀನಪಡಿಸಿಕೊಂಡು, ಸಂವಿಧಾನದ ಸಮಾಧಿಯ ಮೇಲೆ ಮನುವಾದಿ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಹೊರಟಿವೆ.

ಈ ಬಾರಿ ಕರಾಳ ಪೌರತ್ವ ಕಾಯ್ದೆಯ ವಿರುದ್ಧ ಭುಗಿಲೆದ್ದ ಆಕ್ರೋಶ ಚಳವಳಿಯ ರೂಪತಾಳಿದೆ. ಇದಕ್ಕೆ ಯಾವುದೇ ಒಬ್ಬ ವ್ಯಕ್ತಿಯ ನಾಯಕತ್ವವಿಲ್ಲ. ವಿದ್ಯಾರ್ಥಿ ಯುವಜನರ ಸಾಮೂಹಿಕ ನೇತೃತ್ವ ಇದಕ್ಕಿದೆ. ಫ್ಯಾಶಿಸ್ಟ್ ಪರಿವಾರದ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಹಸ್ತಕ್ಷೇಪವಿಲ್ಲದೆ ನಡೆದ ಮೊದಲ ರಾಷ್ಟ್ರವ್ಯಾಪಿ ಆಂದೋಲನವಿದು. ಪ್ರತಿಪಕ್ಷಗಳು ಕೈ ಚೆಲ್ಲಿ ಕುಳಿತಾಗ ದೇಶಪ್ರೇಮಿ, ಸಂವಿಧಾನ ಪ್ರೇಮಿ ತರುಣ ತರುಣಿಯರು ಸೋತ ಭಾರತದ ಪರವಾಗಿ ಸಿಡಿದೆದ್ದ ಸಾತ್ವಿಕ ಶಕ್ತಿಯಿದು.

ಈ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಜನ ಭಾಗವಹಿಸಿದ್ದಾರೆಂಬುದೇನೋ ನಿಜ, ಆದರೆ ವಾಸ್ತವವಾಗಿ ಇದರಲ್ಲಿ ಅವರಷ್ಟೇ ಇಲ್ಲ. ಮನುಷ್ಯ ಪ್ರೀತಿಯ ಭಾರತೀಯರೆಲ್ಲರೂ ಇದ್ದಾರೆ. ರಾಷ್ಟ್ರಧ್ವಜವೇ ಇವರ ಹೋರಾಟದ ಸಂಕೇತ.ಗಾಂಧಿ, ಅಂಬೇಡ್ಕರ್ ಫೋಟೊಗಳು ಮಾತ್ರವಲ್ಲ ಅವರ ಆಶಯಗಳೇ ಮುನ್ನಡೆಸುವ ದಾರಿದೀಪಗಳಾಗಿವೆ. ಅಂತಲೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕೊಂಚ ಗಾಬರಿಯಾದಂತೆ ಕಾಣುತ್ತದೆ. ಆರೆಸ್ಸೆಸ್ ಸರಸಂಘಚಾಲಕ ಮೋಹನ ಭಾಗವತ್ ರಾಜಕೀಯಕ್ಕೂ ತಮಗೂ ಸಂಬಂಧವಿಲ್ಲ ಎಂಬ ಅವಕಾಶವಾದಿ ವೈರಾಗ್ಯ ಪ್ರದರ್ಶಿಸುತ್ತಿದ್ದಾರೆ.

ಕಳೆದ ಒಂದೂವರೆ ತಿಂಗಳಿಂದ ಪ್ರತಿನಿತ್ಯವೂ ದಿಲ್ಲಿ, ಮುಂಬೈ, ಬೆಂಗಳೂರು, ಕಲಬುರಗಿ, ಹೈದರಾಬಾದ್ ಮುಂತಾದ ಕಡೆ ಸಭೆ, ಪ್ರತಿಭಟನೆಗಳು ನಡೆಯುತ್ತಲೇ ಇವೆ. ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಲೇ ಇದ್ದಾರೆ. ಸಾಂಸ್ಕೃತಿಕ ಜಗತ್ತು ದೊಡ್ಡ ಪ್ರಮಾಣದಲ್ಲಿ ಈ ಹೋರಾಟಕ್ಕೆ ಸ್ಪಂದಿಸುತ್ತಿದೆ. ಈ ಹೋರಾಟದಲ್ಲಿ ಮುಸ್ಲಿಮರನ್ನು ಒಂಟಿಯಾಗಿರಲು ಬಿಡುವುದಿಲ್ಲ ಎಂದು ಎಲ್ಲ ಸಮುದಾಯಗಳ ಮನುಷ್ಯ ಪ್ರೀತಿಯ ಮನಸ್ಸುಗಳು ಒಂದಾಗಿ ನಿಂತಿವೆ. ಬಸವಣ್ಣ, ವಿವೇಕಾನಂದ, ಜ್ಯೋತಿಬಾ, ಗಾಂಧಿ, ಅಂಬೇಡ್ಕರ್, ಸುಭಾಶ್ಚಂದ್ರ ಭೋಸ್, ಭಗತ್‌ಸಿಂಗ್, ಕುವೆಂಪು ನಡೆದಾಡಿದ ನೆಲವಿದು.

ಸರ್ವ ಜನಾಂಗದ ಶಾಂತಿಯ ತೋಟವಾದ ಈ ಭಾರತದಲ್ಲಿ ಪೌರತ್ವ ಕಾಯ್ದೆ ಹೆಸರಿನಲ್ಲಿ ದೇಶದ ಮೂಲ ನಿವಾಸಿಗಳನ್ನೇ ಅತಂತ್ರ ಮಾಡುವ, ದೇಶದಿಂದ ಹೊರದಬ್ಬುವ ಈ ಕುತಂತ್ರದ ವಿರುದ್ಧ ಆರಂಭವಾದ ಈ ಹೋರಾಟ ಭಾರತದ ರಾಜಕೀಯಕ್ಕೆ ಹೊಸ ತಿರುವನ್ನು ಕೊಡಲಿದೆ.ಇದೊಂದು ಸೈದ್ಧಾಂತಿಕ ಸಂಘರ್ಷ. ಮನುವಾದಿ, ಮನಿವಾದಿ, ಪುರೋಹಿತಶಾಹಿ ತ್ರಿವಳಿ ಶಕ್ತಿಗಳ ವಿರುದ್ಧ ತಳ ಸಮುದಾಯಗಳ ಜನ ಮತ್ತು ಎಲ್ಲ ಜನಸಮುದಾಯಗಳ ಪ್ರಜ್ಞಾವಂತ ಜನ ಒಂದಾಗಿ ಈ ಭಾರತವನ್ನು ಉಳಿಸಿಕೊಳ್ಳಬೇಕಾಗಿದೆ.

ಈಗ ಪೌರತ್ವ ಕಾನೂನಿನ ಹೆಸರಿನಲ್ಲಿ ಮುಸ್ಲಿಮರನ್ನು ಡಿಟೆನ್ಷನ್ ಸೆಲ್‌ಗೆ ಹಾಕಿ ನಂತರ ದಲಿತರು ಮತ್ತು ಮಹಿಳೆಯರ ಮೀಸಲು ವ್ಯವಸ್ಥೆಯನ್ನು ರದ್ದುಗೊಳಿಸಿ ಅಂತಿಮವಾಗಿ ಸಂವಿಧಾನವನ್ನೇ ಬುಡಮೇಲು ಮಾಡಿ ಶ್ರೇಣೀಕೃತ ಜಾತಿ ವ್ಯವಸ್ಥೆಯನ್ನು ದೇಶದ ಮೇಲೆ ಬಲವಂತವಾಗಿ ಹೇರುವುದು ಇವರ ಒಳಸಂಚಾಗಿದೆ. ಸಂವಿಧಾನದ ವಿರುದ್ಧ ನಡೆದ ಈ ಸಂಚನ್ನು ವಿಫಲಗೊಳಿಸುವುದೇ ದೇಶದ ಮುಂದಿನ ಇಂದಿನ ಮುಖ್ಯ ಸವಾಲಾಗಿದೆ. ಅತ್ಯಂತ ಸಂತಸದ ಸಂಗತಿ ಅಂದರೆ ಈ ಬಾರಿ ಬಿಸಿರಕ್ತದ ತರುಣ, ತರುಣಿಯರು ಈ ಹೋರಾಟದ ಮುಂಚೂಣಿಯಲ್ಲಿದ್ದಾರೆ. ಇವರೇ ಭಾರತದ ಭರವಸೆಯ ಬೆಳಕಾಗಿದ್ದಾರೆ.

ಈ ಭರವಸೆಯ ಬೆಳಕನ್ನು ಜೋಪಾನವಾಗಿ ಕಾಪಾಡಿಕೊಂಡು ಹೋಗಬೇಕಾಗಿದೆ. ಈ ಚಳವಳಿಗೆ ಹಿನ್ನಡೆಯಾದರೆ ದಮನಿತ ಸಮುದಾಯಗಳು, ವೈಚಾರಿಕ ಧ್ವನಿಗಳು ಮತ್ತೆ ಮೇಲೇಳಲು ಎಷ್ಟೋ ವರ್ಷಗಳ ವರೆಗೆ ಕಾಯಬೇಕಾಗುತ್ತದೆ. ಅಂತಲೇ ಇದು ಜೀವನ್ಮರಣದ ಹೋರಾಟವಾಗಿದೆ.

share
ಸನತ್ ಕುಮಾರ್ ಬೆಳಗಲಿ
ಸನತ್ ಕುಮಾರ್ ಬೆಳಗಲಿ
Next Story
X