Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ ಕುರ್ಚಿಗಳಿಗೆ ಬೆಂಕಿ ಹಚ್ಚಿದ...

ದೇರಳಕಟ್ಟೆ ಕುರ್ಚಿಗಳಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ಬಂಧನ- ಪರಿಹಾರಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ20 Jan 2020 7:38 PM IST
share

ಮಂಗಳೂರು, ಜ.20: ದೇರಳಕಟ್ಟೆಯಲ್ಲಿ ಇತ್ತೀಚೆಗೆ ನಡೆದ ಸಮಾವೇಶದಲ್ಲಿ ಕುರ್ಚಿಗಳಿದ್ದ ವಾಹನಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಕೊಟ್ಟ ಪರಿಣಾಮ ಶಾಮಿಯಾನದ ಮಾಲಿಕ ಖಾದರ್ ಅವರಿಗೆ 20 ಲಕ್ಷ ರೂ. ನಷ್ಟ ಉಂಟಾಗಿದೆ. ಘಟನೆಗೆ ಕಾರಣರಾದ ಆರೋಪಿಗಳನ್ನು ಪೊಲೀಸ್ ಇಲಾಖೆಯು ತತ್‌ಕ್ಷಣವೇ ಬಂಧಿಸಿ, ನಷ್ಟ ಸಂಭವಿಸಿದವರಿಗೆ ಶೀಘ್ರವೇ ಸರಕಾರ ಸೂಕ್ತ ಪರಿಹಾರ ವನ್ನು ನೀಡಬೇಕು ಎಂದು ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘ ಆಗ್ರಹಿಸಿದೆ.

ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಾಬು ಕೆ.ವಿ ಅವರು, ಜಿಲ್ಲೆಯ ಎಲ್ಲಾ ಭಾಗದಲ್ಲಿ ನಡೆಯುವ ಪ್ರತೀಯೊಂದು ಕಾರ್ಯಕ್ರಮಕ್ಕೆ ಬೇಕಾಗುವ ಶಾಮಿಯಾನ ಸಂಬಂಧಿತ ವ್ಯವಸ್ಥೆಯನ್ನು ನಾವು ನಡೆಸಿಕೊಂಡು ಬಂದಿದ್ದೇವೆ. ದೊಡ್ಡ ಸಮಾರಂಭಗಳು ನಡೆಯುವಾಗ ಸಾಮಗ್ರಿಗಳು ಕಡಿಮೆಯಾದಲ್ಲಿ ಮತ್ತೊಬ್ಬರ ಸಾಮಗ್ರಿಗಳನ್ನು ತಂದು ನಾವು ನಮ್ಮ ಜವಾಬ್ದಾರಿ ನಿಭಾಯಿಸಿದ್ದೇವೆ. ಆದರೆ, ಜ.12ರಂದು ದೇರಳಕಟ್ಟೆಯಲ್ಲಿ ನಡೆದ ಸಮಾರಂಭಕ್ಕೆ ಖಾದರ್ ಅವರು ಬೇರೆ ಶಾಮಿಯಾನದ ಮಾಲಕರ ಸಾಮಗ್ರಿಗಳನ್ನು ತಂದಿದ್ದರು. ಸಮಾರಂಭ ಮುಗಿದ ಬಳಿಕ 2000 ಕುರ್ಚಿಗಳನ್ನು ತಮ್ಮ ವಾಹನದಲ್ಲಿ ತುಂಬಿಸಿ ಇಟ್ಟಿದ್ದರು. ಉಳಿದ 1350 ಕುರ್ಚಿಗಳನ್ನು ವಾಹನದ ಬಳಿ ಪೇರಿಸಿ ಇಟ್ಟಿದ್ದರು. ಆದರೆ ರಾತ್ರಿ ಸುಮಾರು 2 ಗಂಟೆಗೆ ಯಾರೋ ಕಿಡಿಗೇಡಿಗಳು ವಾಹನಕ್ಕೆ ಬೆಂಕಿ ಕೊಟ್ಟು ಕುರ್ಚಿಗಳು ಬೆಂಕಿಗೆ ಆಹುತಿಯಾಗಿದೆ ಎಂದರು.

ಶ್ರಮಜೀವಿಗಳಾದ ನಾವು ಸಮಾಜದ ಎಲ್ಲಾ ಸ್ತರದ ವ್ಯಕ್ತಿಗಳಿಗೆ ಸೇವೆ ನೀಡುತ್ತಾ ಬಂದಿರುವಾಗ ಇಂತಹ ಘಟನೆಗಳು ನಮ್ಮ ಆತ್ಮಸ್ಥೈರ್ಯವನ್ನು ಕುಗ್ಗಿಸಿದೆ. ಮುಂದಿನ ದಿನದಲ್ಲಿ ಯಾವ ರೀತಿಯಲ್ಲಿ ಸೇವೆ ಸಲ್ಲಿಸುವುದು ಎಂಬ ಚಿಂತೆ ನಮಗೆ ಎದುರಾಗಿದೆ ಎಂದರು.

ಪತ್ರಿಕಾಗೊಷ್ಠಿಯಲ್ಲಿ ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಪ್ರಮುಖರಾದ ಶಿವಪ್ರಸಾದ್ ಹೆಗ್ಡೆ, ಉಮಾನಾಥ ಸುವರ್ಣ, ಸುಭಾಶ್ಚಂದ್ರ ಜೈನ್, ಕ್ಲೇವರ್ ಡಿಸೋಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X