ಸಿಐಟಿಯುನಿಂದ ಜಿಲ್ಲಾ ಮಟ್ಟದ ವಿಚಾರ ಸಂಕಿರಣ
ಕುಂದಾಪುರ, ಜ.20: ಭಾರತ ಕಾರ್ಮಿಕ ಚಳವಳಿಯ ಶತಮಾನೋತ್ಸವ ಮತ್ತು ಸಿಐಟಿಯು ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣವನ್ನು ರವಿವಾರ ಕುಂದಾಪುರ ಕಾಮಿಕರ್ ಭವನದಲ್ಲಿ ಆಯೋಜಿಸ ಲಾಗಿತ್ತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಸಿಐಟಿಯು ರಾಜ್ಯ ಪ್ರಧಾನ ಕಾರ್ಯ ದರ್ಶಿ ಮೀನಾಕ್ಷಿ ಸುಂದರಮ್ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಕಾರ್ಮಿಕ ವರ್ಗ ವಿಷಯದ ಕುರಿತ ವಿಾರ ಮಂಡಿಸಿದರು.
ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾ ಅಧ್ಯಕ್ಷ ಕೆ.ಶಂಕರ್ ವಹಿಸಿದ್ದರು. ವೇದಿಕೆಯಲ್ಲಿ ಸಿಐಟಿಯು ಮುಖಂಡರಾದ ಸುರೇಶ್ ಕಲ್ಲಾಗರ್, ಎಚ್. ನರಸಿಂಹ, ರೊರಾ ಕ್ವಾಡ್ರಸ್ ಬಿಜೂರು ಮೊದಲಾದವರು ಉಪಸ್ಥಿತರಿದ್ದರು.
Next Story