Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರದಲ್ಲಿ ‘ಔಟ್‌ರೀಚ್’...

ಜಮ್ಮು-ಕಾಶ್ಮೀರದಲ್ಲಿ ‘ಔಟ್‌ರೀಚ್’ ಕಾರ್ಯಕ್ರಮ : ಕಾಶ್ಮೀರಕ್ಕೆ ಭೇಟಿ ನೀಡಲಿರುವ ಕೇವಲ ಐವರು ಕೇಂದ್ರ ಸಚಿವರು

ವಾರ್ತಾಭಾರತಿವಾರ್ತಾಭಾರತಿ20 Jan 2020 10:28 PM IST
share
ಜಮ್ಮು-ಕಾಶ್ಮೀರದಲ್ಲಿ ‘ಔಟ್‌ರೀಚ್’ ಕಾರ್ಯಕ್ರಮ : ಕಾಶ್ಮೀರಕ್ಕೆ ಭೇಟಿ ನೀಡಲಿರುವ ಕೇವಲ ಐವರು ಕೇಂದ್ರ ಸಚಿವರು

ಶ್ರೀನಗರ,ಜ.20: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಜನರಲ್ಲಿ ವಿಧಿ 370ರ ರದ್ದತಿಯ ಧನಾತ್ಮಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಸರಕಾರವು ಆರಂಭಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ಹಮ್ಮಿಕೊಂಡಿರುವ ‘ಔಟ್ ರೀಚ್’ ಕಾರ್ಯಕ್ರಮದ ಅಂಗವಾಗಿ 36 ಕೇಂದ್ರ ಸಚಿವರ ಪೈಕಿ ಕೇವಲ ಐವರು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.

ದೂರಸಂಪರ್ಕ ಸಚಿವ ರವಿಶಂಕರ ಪ್ರಸಾದ್,ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ ಪೋಖ್ರಿಯಾಲ್, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ,ಸಹಾಯಕ ರಕ್ಷಣಾ ಸಚಿವ ಶ್ರೀಪಾದ ನಾಯ್ಕ್ ಮತ್ತು ಸಹಾಯಕ ಗೃಹಸಚಿವ ಜಿ.ಕಿಶನ ರೆಡ್ಡಿ ಅವರು ಮುಂದಿನ ನಾಲ್ಕು ದಿನಗಳಲ್ಲಿ ಕಾಶ್ಮೀರ ಕಣಿವೆಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಇಲ್ಲಿ ತಿಳಿಸಿದರು.

ನಖ್ವಿ ಅವರು ಮಂಗಳವಾರ ಶ್ರೀನಗರದ ಹೊರವಲಯದ ದಾರಾ ಪ್ರದೇಶದಲ್ಲಿ ಪ್ರೌಢಶಾಲೆಯೊಂದಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಔಟ್‌ರೀಚ್ ಕಾರ್ಯಕ್ರಮದ ಕಾಶ್ಮೀರ ಸುತ್ತಿಗೆ ಚಾಲನೆ ನೀಡಲಿದ್ದಾರೆ. ರೆಡ್ಡಿ ಬುಧವಾರದಿಂದ ಎರಡು ದಿನಗಳ ಕಾಲ ಗಂಡೇರಬಾಲ್ ಜಿಲ್ಲೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಲಿದ್ದರೆ,ಪ್ರಸಾದ ಅವರು ಗುರುವಾರದಿಂದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಲಿದ್ದಾರೆ. ನಾಯ್ಕ್ ಅವರು ಗುರುವಾರ ಮತ್ತು ಪೋಖ್ರಿಯಾಲ್ ಅವರು ಶುಕ್ರವಾರ ಶ್ರೀನಗರದಲ್ಲಿರಲಿದ್ದಾರೆ.

ಮುಂದಿನ ನಾಲ್ಕು ದಿನಗಳಲ್ಲಿ ಕಾಶ್ಮೀರದಲ್ಲಿ ಕೇವಲ ಎಂಟು ಸಭೆಗಳನ್ನು ನಿಗದಿಗೊಳಿಸಿದ್ದು, ಇಂತಹ 50ಕ್ಕೂ ಅಧಿಕ ಸಭೆಗಳು ಮತ್ತು ಕಾರ್ಯಕ್ರಮಗಳು ಜಮ್ಮು ವಿಭಾಗದಲ್ಲಿ ನಡೆಯಲಿವೆ ಎಂದು ಅಧಿಕಾರಿಗಳು ತಿಳಿಸಿದರು.

ಉಗ್ರರ ಹಾವಳಿ ಹೆಚ್ಚಾಗಿರುವ ದ.ಕಾಶ್ಮೀರದ ಪುಲ್ವಾಮಾ,ಶೋಪಿಯಾನ್,ಅನಂತನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಿಗೆ ಯಾವುದೇ ಸಚಿವರು ಭೇಟಿ ನೀಡುತ್ತಿಲ್ಲ. ಬಡ್ಗಾಮ್,ಕುಪ್ವಾರಾ ಮತ್ತು ಬಂಡಿಪೋರಾ ಜಿಲ್ಲೆಗಳೂ ಸಚಿವರ ಭೇಟಿ ಪಟ್ಟಿಯಲ್ಲಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X