Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಜ್ಞೇಶ್ ಗುಣೇಶ್ವರನ್ ಮೊದಲ...

ಪ್ರಜ್ಞೇಶ್ ಗುಣೇಶ್ವರನ್ ಮೊದಲ ಸುತ್ತಿನಲ್ಲಿ ನಿರ್ಗಮನ

ಆಸ್ಟ್ರೇಲಿಯನ್ ಓಪನ್ ಟೆನಿಸ್

ವಾರ್ತಾಭಾರತಿವಾರ್ತಾಭಾರತಿ21 Jan 2020 11:46 PM IST
share
ಪ್ರಜ್ಞೇಶ್ ಗುಣೇಶ್ವರನ್ ಮೊದಲ ಸುತ್ತಿನಲ್ಲಿ ನಿರ್ಗಮನ

ಮೆಲ್ಬೋರ್ನ್, ಜ.21: ಭಾರತದ ಅಗ್ರ ಶ್ರೇಯಾಂಕದ ಟೆನಿಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲಿ ಸೋತು ನಿರ್ಗಮಿಸಿದ್ದಾರೆ.

ಮಂಗಳವಾರ ನಡೆದ ಪಂದ್ಯದಲ್ಲಿ ಗುಣೇಶ್ವರನ್ ಅವರು ಜಪಾನಿನ ತಾತ್ಸುಮಾ ಇಟೊ ವಿರುದ್ಧ 4-6, 2-6, 5-7 ಸೆಟ್‌ಗಳಿಂದ ಸೋತರು.

ಸೋಮವಾರ ನಿಗದಿಯಾಗಿದ್ದ ಪಂದ್ಯ ಮಳೆಯಿಂದಾಗಿ ನಡೆಯಲಿಲ್ಲ. ಈ ಕಾರಣದಿಂದಾಗಿ ಮಂಗಳವಾರಕ್ಕೆ ಮುಂದೂಡಲಾಗಿತ್ತು.

ಯಾವುದೇ ಹೋರಾಟವಿಲ್ಲದೆ ಮೊದಲ ಎರಡು ಸೆಟ್‌ಗಳನ್ನು ಕಳೆದುಕೊಂಡ ಪ್ರಜ್ಞೇಶ್ ಮೂರನೇ ಸೆಟ್‌ನಲ್ಲಿ 2-1 ಮುನ್ನಡೆ ಸಾಧಿಸಿದ್ದರು. ಆದರೆ ಜಪಾನಿನ ಆಟಗಾರ ತಕ್ಷಣವೇ ತಿರುಗೇಟು ನೀಡಿದರು. ಅಂತಿಮವಾಗಿ ಜಪಾನಿನ ವೈಲ್ಡ್ ಕಾರ್ಡ್ ಆಟಗಾರ ಇಟೊ ವಿರುದ್ಧ ಗುಣೇಶ್ವರನ್ ಹೋರಾಟ ಮುಂದುವರಿಸಲಾರದೆ ಸೋಲಿಗೆ ಶರಣಾದರು.  ಸಿಂಗಲ್ಸ್‌ನಲ್ಲಿ ಭಾರತದ ಸವಾಲು ಅಂತ್ಯ : ಪ್ರಜ್ನೇಶ್ ನಿರ್ಗಮಿಸವುದರೊಂದಿಗೆ ಆಸ್ಟ್ರೇಲಿಯನ್ ಓಪನ್‌ನ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಆಟಗಾರರ ಅಭಿಯಾನ ಕೊನೆಗೊಂಡಿತು.

ಪುರುಷರ ಡಬಲ್ಸ್‌ನಲ್ಲಿ ಭಾರತದ ದಿವಿಜ್ ಶರಣ್ ಮತ್ತು ನ್ಯೂಝಿಲ್ಯಾಂಡ್‌ನ ಪಾಲುದಾರ ಆರ್ಟೆಮ್ ಸೀಟಾಕ್ ಮೊದಲ ಸುತ್ತಿನಲ್ಲಿ ಸ್ಪೇನ್ -ಪೋರ್ಚುಗಲ್‌ನ ಜೋಡಿ ಪ್ಯಾಬ್ಲೊ ಕ್ಯಾರೆನೊ ಬುಸ್ಟಾ ಮತ್ತು ಜೊವಾವೊ ಸೂಸಾ ಅವರನ್ನು ಎದುರಿಸಲಿದ್ದಾರೆ. ರೋಹನ್ ಬೋಪಣ್ಣ ಮತ್ತು ಜಪಾನಿನ ಯಸುಟಾಕಾ ಉಚಿಯಾಮಾ ಅವರು ಅಮೆರಿಕದ 13ನೇ ಶ್ರೇಯಾಂಕದ ಬಾಬ್ ಮತ್ತು ಮೈಕ್ ಬ್ರಿಯಾನ್ ಸಹೋದರರನ್ನು ಎದುರಿಸಲಿದ್ದಾರೆ.

ಮಹಿಳಾ ಡಬಲ್ಸ್‌ನಲ್ಲಿ ಭಾರತದ ಸಾನಿಯಾ ಮಿರ್ಝಾ ಮತ್ತು ಉಕ್ರೇನ್‌ನ ನಾಡಿಯಾ ಕಿಚಿನೊಕ್ ಅವರು ಮೊದಲ ಸುತ್ತಿನಲ್ಲಿ ಚೀನಾದ ಕ್ಸಿನ್ಯುನ್ ಹಾನ್ ಮತ್ತು ಲಿನ್ ಝೂ ಅವರನ್ನು ಎದುರಿಸಲಿದ್ದಾರೆ.

ಎರಡು ವರ್ಷಗಳ ವಿರಾಮದ ಬಳಿಕ ಟೆನಿಸ್‌ಗೆ ವಾಪಸಾದ ಸಾನಿಯಾ ಇತ್ತೀಚೆಗೆ ಕಿಚೆನೋಕ್ ಜೊತೆ ಹೊಬಾರ್ಟ್ ಇಂಟರ್‌ನ್ಯಾಶನಲ್ ಪ್ರಶಸ್ತಿಯನ್ನು ಗೆದ್ದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X