Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಲೆಗಳಲ್ಲಿ ಮದುಮಗಳು ರಂಗರೂಪದಲ್ಲಿ...

ಮಲೆಗಳಲ್ಲಿ ಮದುಮಗಳು ರಂಗರೂಪದಲ್ಲಿ ಯಶಸ್ವಿ ಪ್ರದರ್ಶನ: ನೂರು ಪ್ರದರ್ಶನಗಳತ್ತ ದಾಪುಗಾಲು

ವಾರ್ತಾಭಾರತಿವಾರ್ತಾಭಾರತಿ22 Jan 2020 12:21 AM IST
share
ಮಲೆಗಳಲ್ಲಿ ಮದುಮಗಳು ರಂಗರೂಪದಲ್ಲಿ ಯಶಸ್ವಿ ಪ್ರದರ್ಶನ: ನೂರು ಪ್ರದರ್ಶನಗಳತ್ತ ದಾಪುಗಾಲು

ಬೆಂಗಳೂರು, ಜ.21: ರಾಷ್ಟ್ರೀಯ ನಾಟಕ ಶಾಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ರಾಷ್ಟ್ರಕವಿ ಕುವೆಂಪುರವರ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿಯ ರಂಗ ಪ್ರಯೋಗವು ನಗರದ ಕಲಾಗ್ರಾಮದಲ್ಲಿ ಜ.20ರಿಂದ ಫೆ.29ರವರೆಗೆ ನಡೆಯುತ್ತಿದ್ದು, ನಿನ್ನೆ(ಸೋಮವಾರ) ನಡೆದ ಮೊದಲ ಪ್ರದರ್ಶನ ಯಶಸ್ವಿ ಕಂಡಿದೆ.

ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ಹಳೆಯ ವಿದ್ಯಾರ್ಥಿಗಳು ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ 75 ನಟರು ರಾತ್ರಿಯಿಡೀ ನಡೆಯುವ ನಾಟಕದಲ್ಲಿ ಪಾತ್ರ ವಹಿಸಲಿದ್ದಾರೆ. 4 ಬೃಹತ್ ರಂಗ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ನಾಟಕದಲ್ಲಿ ಮಲೆನಾಡಿನ ತದ್ರೂಪು ದರ್ಶನವನ್ನು ಕಾಣಬಹುದಾಗಿದೆ. ಮೈಸೂರಿನಲ್ಲಿ ರಂಗಾಯಣದ ಮೂಲಕ ಮಲೆಗಳಲ್ಲಿ ಮದುಮಗಳು ಕಾದಂಬರಿಯ ರಂಗರೂಪ ಪ್ರದರ್ಶವು ಆರಂಭವಾಗಿ ಬೆಂಗಳೂರಿನ ಕಲಾಗ್ರಾಮದಲ್ಲಿ ಈವರೆಗೂ 85 ಪ್ರದರ್ಶಗಳನ್ನು ಕಂಡಿದೆ. ಮತ್ತೆ ಜ.20ರಿಂದ ಫೆ.29ರವರೆಗೆ 25 ಪ್ರದರ್ಶನ ನಡೆಯುವ ಮೂಲಕ ನೂರು ಪ್ರದರ್ಶನಗಳು ದಾಟಿ ಹೋಗಲಿದೆ.

ಬೃಹತ್ ಕಾದಂಬರಿಯೊಂದು ರಂಗರೂಪದಲ್ಲಿ ನೂರು ಪ್ರದರ್ಶನಗೊಳ್ಳುವುದು ಸುಲಭವಲ್ಲವೆಂದು ನಾಟಕ ನಿರ್ದೇಶಕ ಬಸವಲಿಂಗಯ್ಯ ಅಭಿಪ್ರಾಯಿಸುತ್ತಾರೆ. ರಾಷ್ಟ್ರಕವಿ ಕುವೆಂಪು ರಚಿಸಿದ ಮಲೆಗಳಲ್ಲಿ ಮದುಮಗಳು ಕಾದಂಬರಿ ಕನ್ನಡ ಭಾಷೆಯ ವಿಸ್ಮಯಗಳಲ್ಲಿ ಒಂದು. ಮಲೆನಾಡಿನ ಕತೆಯಾಗಿ, ನಿಸರ್ಗದ ನಿಗೂಢಗಳ ತಾಣವಾದ ಹುಲಿಕಲ್ಲು ಗುಡ್ಡದ ಸುತ್ತಲಿರುವ ಹಳ್ಳಿಗಳ ಜೀವ ಜಾಲದ ಬದುಕಿನ ವಿವರಗಳೇ ಮೂರ್ತಗೊಂಡಿರುವ ಅನನ್ಯ ಕಥನ ಇದಾಗಿದೆ. ಆಧುನಿಕತೆಯ ಪ್ರವೇಶವು ಭಾರತೀಯ ಗ್ರಾಮ ಸಮಾಜದ ಬದುಕಿನಲ್ಲಿ ತಂದ ಸಾಮಾಜಿಕ ತಲ್ಲಣಗಳ ನಿರೂಪಣೆಯೆ ಈ ಬರಹದ ಜೀವಾಳ. ಕಾದಂಬರಿಯಾಗಿ ಓದುಗರ ಮೆಚ್ಚುಗೆ ಪಡೆದ ಮಲೆಗಳಲ್ಲಿ ಮದುಮಗಳು ಈಗ ರಂಗರೂಪದಲ್ಲೂ ಯಶಸ್ವಿಗೊಂಡಿರುವುದು ರಂಗಕ್ಷೇತ್ರದಲ್ಲಿ ಹೊಸ ಬರವಸೆ ಮೂಡಿಸಿದೆ ಎಂದು ನಾಟಕಕಾರ ಕೆ.ವೈ.ನಾರಾಯಣ ಸ್ವಾಮಿ ಅಭಿಪ್ರಾಯಿಸುತ್ತಾರೆ.

ಮಲೆಗಳಲ್ಲಿ ಮದುಮಗಳು ನಾಟಕ ಪ್ರದರ್ಶನವು ಜ.20ರಿಂದ ಫೆ.29ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ ರಾತ್ರಿ 8ರಿಂದ ಬೆಳಗ್ಗೆ 6ರವರೆಗೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X