Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸರಿಗೆ ಶರಣಾಗಲು ಆದಿತ್ಯ ರಾವ್ ಗೆ...

ಪೊಲೀಸರಿಗೆ ಶರಣಾಗಲು ಆದಿತ್ಯ ರಾವ್ ಗೆ ಕಾರಣವಾಯಿತು ಸಿಸಿಟಿವಿ ದೃಶ್ಯ !

ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ22 Jan 2020 8:10 PM IST
share
ಪೊಲೀಸರಿಗೆ ಶರಣಾಗಲು ಆದಿತ್ಯ ರಾವ್ ಗೆ ಕಾರಣವಾಯಿತು ಸಿಸಿಟಿವಿ ದೃಶ್ಯ !

ಬೆಂಗಳೂರು, ಜ.22: ಮಂಗಳೂರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಮುಖಚಹರೆ ಪತ್ತೆಯಾಗಿದ್ದ ಕಾರಣದಿಂದಲೇ ಹೆದರಿ ಪ್ರಮುಖ ಆರೋಪಿ ಆದಿತ್ಯ ರಾವ್(36) ಪೊಲೀಸರಿಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಪ್ರಾಥಮಿಕ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಬುಧವಾರ ಬೆಳಗ್ಗೆ 8:30 ಸುಮಾರಿಗೆ ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಮಹಾನಿರ್ದೇಶಕ ಕಚೇರಿಗೆ ಆದಿತ್ಯ ರಾವ್ ತೆರಳಿದ್ದು, ಸ್ಥಳೀಯ ಸಿಬ್ಬಂದಿಗೆ ಮಂಗಳೂರು ಪ್ರಕರಣದ ಬಗ್ಗೆ ಬಾಯಿಬಿಟ್ಟಿದ್ದಾನೆ. ತದನಂತರ, ಆರೋಪಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆದಿತ್ಯ ರಾವ್‌ ನನ್ನು ಪ್ರಾಥಮಿಕ ವಿಚಾರಣೆಗೊಳಪಡಿಸಿದಾಗ, ಕೃತ್ಯವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ, ನಗರದ ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋರ್ ನೇತೃತ್ವದ ತಂಡ, ಮಧ್ಯಾಹ್ನದ ಹೊತ್ತಿಗೆ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಿದರು.

ಮಂಗಳೂರಿಗೆ ಆರೋಪಿ: ತದನಂತರ ಹೆಚ್ಚಿನ ವಿಚಾರಣೆಗಾಗಿ ಕೃತ್ಯ ನಡೆದ ಸ್ಥಳಕ್ಕೆ ಆರೋಪಿಯನ್ನು ಒಪ್ಪಿಸಬೇಕೆಂದು ಇಲ್ಲಿನ ಆರನೆ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯನ್ನು ಮಂಗಳೂರಿಗೆ ಕರೆದೊಯ್ಯಲು ಒಪ್ಪಿಗೆ ನೀಡಿದರು. ಬುಧವಾರ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಆದಿತ್ಯರಾವ್ ಅನ್ನು ಮಂಗಳೂರಿಗೆ ಕರೆದೊಯ್ದಲಾಯಿತು.

ಸಾಕ್ಷ್ಯಕ್ಕೆ ಹೆದರಿದ?: ಆರೋಪಿ ಆದಿತ್ಯರಾವ್, ಮಂಗಳೂರಿನಲ್ಲಿ ಕೃತ್ಯ ನಡೆದ ಬಳಿಕ ಬೆಂಗಳೂರಿನಲ್ಲಿ ತಲೆಮರೆಸಿಕೊಳ್ಳಬಹುದು ಎಂದು ಭಾವಿಸಿದ್ದ. ಆದರೆ, ಸಿಸಿಟಿವಿ ದೃಶ್ಯಾವಳಿಯಲ್ಲಿ ಆತನ ಮುಖ ಚಹರೆ ಸ್ಪಷ್ಟವಾಗಿ ಗೊತ್ತಾಗಿತ್ತು. ಇನ್ನು, ಬೆಂಗಳೂರಿನ ಪೊಲೀಸರಿಗೂ ಈತನ ಹಳೆಯ ಪ್ರಕರಣಗಳ ಬಗ್ಗೆ ಮಾಹಿತಿ ಇತ್ತು. ಇದರಿಂದ ಹೆದರಿತ ಆದಿತ್ಯರಾವ್, ಮುಂಜಾನೆಯೇ ಡಿಜಿ ಕಚೇರಿಗೆ ಹಾಜರಾಗಿ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಹೆಚ್ಚಿದ ವಿಚಾರಣೆ: ಇಲ್ಲಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ) ಅಧಿಕಾರಿಗಳ ದಂಡೇ ಹರಿದುಬಂದಿತ್ತು. ಪತ್ರಿಯೊಬ್ಬರು, ಆರೋಪಿಯ ಹಿನ್ನೆಲೆ, ಕೃತ್ಯ ನಡೆಸಲು ಕಾರಣವೇನು ಎನ್ನುವ ಪ್ರಶ್ನೆಗಳು ಕೇಳಿ, ಉತ್ತರಗಳನ್ನು ವಿಡಿಯೊ ರೆಕಾರ್ಡ್ ಮೂಲಕ ದಾಖಲು ಮಾಡಿದರು ಎಂದು ವರದಿಯಾಗಿದೆ.

'ಯೂಟ್ಯೂಬ್' ಗುರು

ಮಂಗಳೂರಿನಲ್ಲಿ ಸ್ಪೋಟಕ ಪತ್ತೆ ಪ್ರಕರಣ ಸಂಬಂಧ ಬಾಂಬ್ ತಯಾರಿಸಲು ಯೂಟ್ಯೂಬ್ ಅನ್ನು ಗುರುವಾಗಿಸಿಕೊಂಡಿದ್ದ ಎನ್ನಲಾಗಿದೆ. ವಿದೇಶದಲ್ಲಿ ತಯಾರಿಸುವ ಸ್ಫೋಟಕ, ಗುಂಡು ಮದ್ದುಗಳ ವಿಡಿಯೊಗಳನ್ನು ಆತ ಸಂಗ್ರಹಿಸಿಟ್ಟಿದ್ದ. ತದನಂತರ, ಅದರಂತೆಯೇ, ಬಾಂಬ್ ಮಾದರಿ ತಯಾರಿಸಲು ಹೋಗಿದ್ದ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X