Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಮ್ಮ ನಿಷ್ಕ್ರಿಯತೆ ಪ್ರತಿ ಗಂಟೆಯೂ...

ನಿಮ್ಮ ನಿಷ್ಕ್ರಿಯತೆ ಪ್ರತಿ ಗಂಟೆಯೂ ಬೆಂಕಿಗೆ ತುಪ್ಪ ಎರೆಯುತ್ತಿದೆ

ಡಾವೋಸ್ ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಗ್ರೆಟಾ ತನ್ ಬರ್ಗ್

ವಾರ್ತಾಭಾರತಿವಾರ್ತಾಭಾರತಿ22 Jan 2020 9:55 PM IST
share
ನಿಮ್ಮ ನಿಷ್ಕ್ರಿಯತೆ ಪ್ರತಿ ಗಂಟೆಯೂ ಬೆಂಕಿಗೆ ತುಪ್ಪ ಎರೆಯುತ್ತಿದೆ

ಡಾವೋಸ್ (ಸ್ವಿಟ್ಸರ್‌ಲ್ಯಾಂಡ್), ಜ. 22: ನಮ್ಮ ಮನೆ ಈಗಲೂ ಹೊತ್ತಿ ಉರಿಯುತ್ತಿದೆ ಎಂದು ಸ್ವೀಡನ್ ‌ನ ಹದಿಹರಯದ ಪರಿಸರ ಹೋರಾಟಗಾರ್ತಿ ಗ್ರೆಟಾ ತನ್ ‌ಬರ್ಗ್ ಮಂಗಳವಾರ ಜಗತ್ತನ್ನು ಎಚ್ಚರಿಸಿದ್ದಾರೆ.

 ಸ್ವಿಟ್ಸರ್‌ ಲ್ಯಾಂಡ್‌ ನ ಡಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಭಾವಿ ಭಾಷಣ ಮಾಡಿದ 17 ವರ್ಷದ ಗ್ರೆಟಾ, ‘‘ನಿಮ್ಮ ನಿಷ್ಕ್ರಿಯತೆಯು ಗಂಟೆ ಗಂಟೆಗೂ ಜ್ವಾಲೆಗಳಿಗೆ ತುಪ್ಪ ಸುರಿಯುತ್ತಿದೆ. ನಿಮ್ಮ ಮಕ್ಕಳನ್ನು ನೀವು ಬೇರೆ ಎಲ್ಲದಕ್ಕಿಂತಲೂ ಹೆಚ್ಚಾಗಿ ಪ್ರೀತಿಸುತ್ತೀರಿ ಎಂದು ನಾವು ಭಾವಿಸುತ್ತೇವೆ. ಹಾಗಾಗಿ, ಬೆಂಕಿಯನ್ನು ನಂದಿಸಲು ಕ್ರಮ ತೆಗೆದುಕೊಳ್ಳಿ ಎಂದು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ’’ ಎಂದು ಹೇಳಿದರು.

‘‘ಜಾಗತಿಕ ತಾಪಮಾನವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ಹಾಗೂ ಗೊತ್ತಿದ್ದೇ ನಿಮ್ಮ ಮಕ್ಕಳು ಈ ಪರಿಸರ ವಿಪ್ಲವವನ್ನು ಎದುರಿಸುವಂತೆ ಮಾಡಿರುವುದಕ್ಕಾಗಿ ನಾಳೆ ನೀವು ನಿಮ್ಮ ಮಕ್ಕಳಿಗೆ ಏನು ಕಾರಣ ಕೊಡುತ್ತೀರಿ’’ ಎಂದು ಅವರು ಸಭಿಕರನ್ನು ಪ್ರಶ್ನಿಸಿದರು.

‘‘ಒಂದು ವರ್ಷದ ಹಿಂದೆ ನಾನು ಡಾವೋಸ್‌ಗೆ ಬಂದು, ನಮ್ಮ ಮನೆಗೆ ಬೆಂಕಿ ಬಿದ್ದಿದೆ ಎಂದು ನಿಮಗೆ ಹೇಳಿದೆ. ನೀವು ಗಾಬರಿಗೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ನಾನು ನಿಮಗೆ ಹೇಳಿದೆ. ಆದರೆ ಪರಿಸರ ಬಿಕ್ಕಟ್ಟಿನ ಬಗ್ಗೆ ಗಾಬರಿಗೊಳ್ಳುವಂತೆ ಜನರಿಗೆ ಹೇಳುವುದು ಅತ್ಯಂತ ಅಪಾಯಕಾರಿ ಎಂಬುದಾಗಿ ನನಗೆ ಎಚ್ಚರಿಕೆ ನೀಡಲಾಗಿದೆ’’ ಎನ್ನುತ್ತಾ ಅವರು ತನ್ನ 8 ನಿಮಿಷಗಳ ಭಾಷಣವನ್ನು ಆರಂಭಿಸಿದರು.

 ‘‘2050 ಅಥವಾ 2060 ಅಥವಾ 2021ರಲ್ಲಿ ನಮಗೆ ಬದಲಾವಣೆ ಬೇಕಿಲ್ಲ. ಆ ಬದಲಾವಣೆಯು ಈಗ ಆಗಬೇಕೆಂದು ನಾವು ಬಯಸುತ್ತೇವೆ. ಹಾಗಾಗಿ, ಒಂದೋ ನೀವು ಇದನ್ನು ಮಾಡಬೇಕು ಅಥವಾ ಪರಿಸರದ ಉಷ್ಣತೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ನಷ್ಟು ತಗ್ಗಿಸುವ ಗುರಿಯನ್ನು ನೀವು ಯಾಕೇ ತ್ಯಜಿಸಿದಿರಿ ಎನ್ನುವುದಕ್ಕೆ ನಿಮ್ಮ ಮಕ್ಕಳಿಗೆ ವಿವರಣೆ ನೀಡಬೇಕಾಗುತ್ತದೆ’’ ಎಂದು ‘ಟೈಮ್’ ವರ್ಷದ ವ್ಯಕ್ತಿ ಗ್ರೆಟಾ ತನ್ನ ಭಾಷಣದಲ್ಲಿ ಹೇಳಿದರು.

ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ನಡೆದ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಶೃಂಗ ಸಮ್ಮೇಳನದಲ್ಲಿ, ‘‘ಮಕ್ಕಳ ಭವಿಷ್ಯವನ್ನು ಹಾಳುಗೆಡವಲು ನಿಮಗೆಷ್ಟು ಧೈರ್ಯ?’’ ಎಂದು ಭಾವನಾತ್ಮಕವಾಗಿ ಜಾಗತಿಕ ನಾಯಕರನ್ನು ಪ್ರಶ್ನಿಸುವ ಮೂಲಕ ಗ್ರೆಟಾ ತನ್‌ಬರ್ಗ್ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿಗೆ ಬಂದಿದ್ದಾರೆ.

ಮರ ನೆಟ್ಟರೆ ಸಾಕಾಗುವುದಿಲ್ಲ

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ಮರ ನೆಟ್ಟರೆ ಸಾಕಾಗುವುದಿಲ್ಲ ಎಂದು ಪರಿಸರ ಹೋರಾಟಗಾರ್ತಿ ಗ್ರೆಟಾ ತನ್‌ಬರ್ಗ್ ಮಂಗಳವಾರ ಹೇಳಿದ್ದಾರೆ. ಒಂದು ಲಕ್ಷ ಕೋಟಿ ಮರಗಳನ್ನು ನೆಡುವ ಕಾರ್ಯಕ್ರಮಕ್ಕೆ ಅಮೆರಿಕ ಸೇರ್ಪಡೆಗೊಳ್ಳುವುದು ಎಂಬುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ವೇದಿಕೆಯಲ್ಲಿ ಮಾಡಿರುವ ಘೋಷಣೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

‘‘ಮರಗಳನ್ನು ನೆಡುವುದು ನಿಜವಾಗಿಯೂ ಒಳ್ಳೆಯದು. ಆದರೆ, ಅದು ನಮ್ಮ ಈಗಿನ ಅಗತ್ಯದ ಸಮೀಪವೂ ಬರುವುದಿಲ್ಲ ಹಾಗೂ ಮೂಲ ಪರಿಸರ ವ್ಯವಸ್ಥೆಗೆ ಅದು ಪರ್ಯಾಯವಲ್ಲ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X