Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಪಿಗೆ ಕುಮ್ಮಕ್ಕು ನೀಡಿದವರ್ಯಾರು...

ಆರೋಪಿಗೆ ಕುಮ್ಮಕ್ಕು ನೀಡಿದವರ್ಯಾರು ತನಿಖೆಯಾಗಲಿ: ಯು.ಟಿ.ಖಾದರ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ22 Jan 2020 10:37 PM IST
share
ಆರೋಪಿಗೆ ಕುಮ್ಮಕ್ಕು ನೀಡಿದವರ್ಯಾರು ತನಿಖೆಯಾಗಲಿ: ಯು.ಟಿ.ಖಾದರ್

ಮಂಗಳೂರು, ಜ.22: ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕವನ್ನು ಇರಿಸಿದ ಆರೋಪಿಯಿಂದ ಈ ಕೃತ್ಯ ಮಾಡಿಸಿದವರು ಯಾರು ಎಂಬುದು ತನಿಖೆ ಆಗಬೇಕು. ಇದರ ಹಿಂದೆ ಸಂಚು ಇರುವುದು ಸ್ಪಷ್ಟ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಎಂಬುದು ಗಂಭೀರ ಪ್ರಕರಣ. ಸಮಾಜದ್ರೋಹಿ ಶಕ್ತಿಗಳು ಎಲ್ಲಾ ಧರ್ಮಗಳಲ್ಲೂ ಇದ್ದಾರೆ. ಪ್ರಸ್ತುತ ಆತ ಮಾನಸಿಕ ಖಿನ್ನತೆ ಉಳ್ಳವನು ಎನ್ನಲಾಗುತ್ತಿದೆ. ಆದರೆ, ಆತ ಸ್ಫೋಟಕ ಇರಿಸಿ, ಅಲ್ಲಿಂದ ಸಲೀಸಾಗಿ ತಪ್ಪಿಸಿಕೊಂಡು ಬೆಂಗಳೂರಿಗೆ ತೆರಳಿ ಪೊಲೀಸರೆದುರು ಶರಣಾಗುವವರೆಗೆ ಹೇಗೆ ಸರಿ ಇದ್ದ ಎಂಬ ಅನುಮಾನಗಳನ್ನು ದೂರ ಮಾಡುವುದು ಸರಕಾರದ ಜವಾಬ್ಧಾರಿ ಎಂದರು.

ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವರ ಹೇಳಿಕೆ, ಕೇಂದ್ರ ಸಚಿವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿತ್ತು. ಅವರು ಕ್ಷಮೆಯಾಚಿಸಬೇಕು ಎಂದರು.

ಕೇರಳದಿಂದ ಬಂದವರು, ಇಸ್ಲಾಮಿಕ್ ಉಗ್ರ, ಸಿಎಎ ಕಾಯ್ದೆಗೆ ಪ್ರತೀಕಾರ ಎಂಬಂತೆಲ್ಲಾ ಪ್ರಕರಣವನ್ನು ಬಿಂಬಿಸಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಕರಣದ ಆರೋಪಿ ಸಿಕ್ಕಿಲ್ಲವಾಗಿದ್ದಲ್ಲಿ, ಯಾರ್ಯಾರದೋ ಹೆಸರು ಕೇಳಿ ಬರುತ್ತಿತ್ತು ಎಂದವರು ಹೇಳಿದರು.

ಪ್ರಹಸನ ಅಲ್ಲ ಎಂಬುದನ್ನು ಸರಕಾರ ಸಾಬೀತುಪಡಿಸಲಿ

ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ, ಅವರು ಮಾಜಿ ಮುಖ್ಯಮಂತ್ರಿ, ಗೃಹ ಇಲಾಖೆಯೂ ಅವರ ಅಧೀನದಲ್ಲಿದ್ದು ಕರ್ತವ್ಯ ನಿರ್ವಹಿಸಿದವರು. ಅವರದ್ದೇ ಆದ ಮೂಲದ ಆಧಾರದಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಅವರು ಹೇಳಿರುವಂತೆ ಅದೊಂದು ಪ್ರಹಸನ ಅಲ್ಲ ಎಂಬ ಬಗ್ಗೆ ಸರಕಾರ ಸಾಬೀತು ಪಡಿಸಲಿ ಎಂದು ಯು.ಟಿ.ಖಾದರ್ ಪ್ರತಿಕ್ರಿಯಿಸಿದರು.

ಪ್ರಕರಣದ ಆರೋಪಿ ಆರಾಮವಾಗಿ ವಿಮಾನ ನಿಲ್ದಾಣಕ್ಕೆ ಬಂದು ಸ್ಪೋಟಕ ಇರಿಸಿ, ಅಲ್ಲಿಂದ ಬೆಂಗಳೂರು ತಲುಪುವವರೆಗೂ ಆತನನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂಬುದು ಗುಪ್ತಚರ ಇಲಾಖೆಯ ವೈಫಲ್ಯ. ಭದ್ರತೆಗಾಗಿ ಅಷ್ಟೊಂದು ವ್ಯವಸ್ಥೆಗಳ ಹೊರತಾಗಿಯೂ, ಸಮರ್ಪಕ ಶ್ವಾನದಳದ ಹೊರತಾಗಿಯೂ ಆರೋಪಿ ಪೊಲೀಸರೆದುರು ಶರಣಾಗುವವರೆಗೆ ಆತನನ್ನು ಬಂಧಿಸಲು ಸಾಧ್ಯವಾಗದಿರುವುದು ರಾಜ್ಯ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿರುವುದಕ್ಕೆ ಸಾಕ್ಷಿ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X