Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧಿಯನ್ನು ಹತ್ಯೆ ಮಾಡಿದವರಿಗೆ ನಾನ್ಯಾವ...

ಗಾಂಧಿಯನ್ನು ಹತ್ಯೆ ಮಾಡಿದವರಿಗೆ ನಾನ್ಯಾವ ಲೆಕ್ಕ ?: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Jan 2020 8:03 PM IST
share
ಗಾಂಧಿಯನ್ನು ಹತ್ಯೆ ಮಾಡಿದವರಿಗೆ ನಾನ್ಯಾವ ಲೆಕ್ಕ ?: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜ.25: ಮಹಾತ್ಮ ಗಾಂಧೀಜಿಯನ್ನೆ ಹತ್ಯೆ ಮಾಡಿದವರಿಗೆ ನಾನು ಯಾವ ಲೆಕ್ಕ. ಇಂತಹ ಗೊಡ್ಡು ಬೆದರಿಕೆಗಳಿಗೆಲ್ಲ ನಾನು ಬೆದರುವುದಿಲ್ಲ. ನನ್ನ ದೇಹಕ್ಕೆ ಸಣ್ಣ ದೌರ್ಜನ್ಯವಾದರೂ ಅವರು ಸುಟ್ಟು ಭಸ್ಮವಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ಹಿಡನ್ ಅಜೆಂಡಾ ಹಾಗೂ ಅದರ ಅಂಗ ಪಕ್ಷಗಳ ನಡವಳಿಕೆಯನ್ನು ಬಹಿರಂಗಪಡಿಸುವಲ್ಲಿ ನಾನು ಮುಂಚೂಣಿಯಲ್ಲಿದ್ದೇನೆ. ಇವರು ಒಡ್ಡುವಂತಹ ಬೆದರಿಕೆಗಳಿಗೆಲ್ಲ ಹೆದರಿ ನಾನು ವೌನಕ್ಕೆ ಶರಣಾಗುವುದಿಲ್ಲ ಎಂದರು.

ಇದರ ಹಿಂದೆ ಯಾರಿದ್ದಾರೆ ಅನ್ನೋದು ನನಗೆ ಗೊತ್ತು. ಬಿಜೆಪಿ ಪಕ್ಷದ ಅಂಗ ಪಕ್ಷಗಳಲ್ಲಿ ಇರುವ ಭಯೋತ್ಪಾದಕರ ನಡವಳಿಕೆಗಳು ನನಗೆ ಗೊತ್ತಿದೆ. ಅತ್ಯಂತ ಜಾಗರೂಕತೆಯಿಂದ ಅವರು ನಡೆಸುವ ಚಟುವಟಿಕೆಗಳನ್ನು ನಾನು ಲಘುವಾಗಿ ಪರಿಗಣಿಸುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಜರ್ಮನಿಯಲ್ಲಿ ನಾಝಿ ಚಟುವಟಿಕೆ ಆರಂಭವಾಗದಲೇ ಇಲ್ಲಿ ಆರೆಸೆಸ್ಸ್ ಸಂಘಟನೆ ಹುಟ್ಟಿಕೊಂಡಿತು. ಆರೆಸೆಸ್ಸ್ ಹಾಗೂ ನಾಝಿ ಸಂಘಟನೆಗಳಿಗೆ ಯಾವುದೇ ವ್ಯತ್ಯಾಸವಿಲ್ಲ. ಮಂಗಳೂರಿನಲ್ಲಿ ನಡೆದ ಘಟನೆ ಬಗ್ಗೆ ನಾನು ಸತ್ಯಾಂಶವನ್ನು ಜನತೆಯ ಮುಂದೆ ಇಡಲು ಪ್ರಯತ್ನಿಸಿದಾಗ ಬಿಜೆಪಿಯ ಕೆಲವು ನಾಯಕರು, ನನ್ನನ್ನು ಪಾಕಿಸ್ತಾನದ ಪರವಾಗಿ ಮಾತನಾಡುವವನು, ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.

ನನ್ನ ಕರ್ಮಭೂಮಿ ಈ ನೆಲದ ಮಣ್ಣು. ನಾನೇಕೆ ಪಾಕಿಸ್ತಾನಕ್ಕೆ ಹೋಗಲಿ, ಪಾಕಿಸ್ತಾನದ ಬಗ್ಗೆ ಪ್ರತಿದಿನ ಭಜನೆ ಮಾಡುವವರು ಇವರು. ಪಾಕಿಸ್ತಾನದ ಹೆಸರು ಹೇಳಿಕೊಂಡೆ ಇವರು ಮತಗಳನ್ನು ಪಡೆಯಬೇಕು. ಕಳೆದ ಆರು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ. ಜನತೆಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಕುಮಾರಸ್ವಾಮಿ ದೂರಿದರು.

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ನಮ್ಮ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಬರಬೇಕಿರುವ ನಮ್ಮ ಪಾಲಿನಲ್ಲಿ ಸುಮಾರು 17 ಸಾವಿರ ಕೋಟಿ ರೂ. ಕಡಿತವಾಗಲಿದೆ. ಕೇಂದ್ರ ಸರಕಾರದ ಆದಾಯ ಸಂಗ್ರಹ 3-4 ಲಕ್ಷ ಕೋಟಿ ರೂ.ಕಡಿಮೆಯಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರಕ್ಕೆ ಈಗಲೂ ಸಲಹೆ ನೀಡುತ್ತೇನೆ, ನಿಮ್ಮ ಹಿಡೆನ್ ಅಜೆಂಡಾವನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನ ನೀಡಿ. ಕೇಂದ್ರ ಗೃಹ ಸಚಿವರು ತುಕಡೇ ತುಕಡೇ ಪಕ್ಷಗಳನ್ನೆಲ್ಲ ಮುಗಿಸಿಬಿಡುತ್ತೇವೆ ಎಂದಿದ್ದಾರೆ. ಒಂದು ಕಾಲದಲ್ಲಿ ಇವರದ್ದು ತುಕಡೇ ಪಕ್ಷವೇ ಆಗಿತ್ತು. ಹಿಂದೂ, ಹಿಂದೂ ರಾಷ್ಟ್ರ, ರಾಮನ ಹೆಸರು ಹೇಳಿಕೊಂಡು ವಾಜಪೇಯಿ, ಅಡ್ವಾಣಿ ಹಂತ ಹಂತವಾಗಿ ಪಕ್ಷ ಕಟ್ಟಿದ್ದಾರೆ. ಈಗ ಅಡ್ವಾಣಿಯನ್ನು ಮನೆಗೆ ಕಳುಹಿಸಿದ್ದಾರೆ ಎಂದು ಅವರು ದೂರಿದರು. 

ಆರೆಸೆಸ್ಸ್ ಹಾಗೂ ವಿಶ್ವ ಹಿಂದೂ ಪರಿಷತ್‌ಗೆ ನೇರವಾಗಿ ಹೇಳುತ್ತಿದ್ದೇನೆ. ದೇಶ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಂದಿದ್ದಾರೆ. ಬಡತನ ಹೆಚ್ಚಾಗುತ್ತಿದೆ. ಇದನ್ನು ಸರಿಪಡಿಸಲು ನಿಮ್ಮ ಬುದ್ಧಿ ಬಳಸಿ, ಯಾರೋ ವ್ಯಕ್ತಿಗಳನ್ನು ಹತ್ಯೆ ಮಾಡಲು ಬಳಕೆ ಮಾಡಬೇಡಿ ಎಂದು ಅವರು ಹೇಳಿದರು.

‘ಮಂಗಳೂರು ಘಟನೆ’ ವಿಧಾನಸಭೆಯಲ್ಲಿ ಚರ್ಚೆ

ಮಂಗಳೂರಿನಲ್ಲಿ ನಡೆದ ಘಟನೆಗಳು ಹಾಗೂ ಬಾಂಬ್ ಪ್ರಕರಣವನ್ನು ವಿಧಾನಸಭೆ ಕಲಾಪ ಆರಂಭವಾದಾಗ ಅಲ್ಲಿ ಚರ್ಚೆ ಮಾಡುತ್ತೇನೆ. ಆನಂತರ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸುವಂತಹ ಠರಾವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಿ. ಈ ವಿಚಾರದಲ್ಲಿ ನಾನು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೇ ಮುಖ್ಯಮಂತ್ರಿ ಪಲಾಯನ ಮಾಡುತ್ತಿದ್ದಾರೆ.

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X