Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಗಪ್ಪ ಶೆಟ್ಟಿಗಾರ್‌ಗೆ ‘ಉತ್ತಮ ನೇಕಾರ’...

ನಾಗಪ್ಪ ಶೆಟ್ಟಿಗಾರ್‌ಗೆ ‘ಉತ್ತಮ ನೇಕಾರ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ25 Jan 2020 8:40 PM IST
share
ನಾಗಪ್ಪ ಶೆಟ್ಟಿಗಾರ್‌ಗೆ ‘ಉತ್ತಮ ನೇಕಾರ’ ಪ್ರಶಸ್ತಿ

ಕಿನ್ನಿಗೋಳಿ, ಜ.25: ಕೈಮಗ್ಗದ ನೇಕಾರಿಕೆಗೆ ಪ್ರೋತ್ಸಾಹ ನೀಡುವ ಹಾಗೂ ಉಡುಪಿ ಸೀರೆ ಉಳಿಸಿ ಅಭಿಯಾನದ ಅಂಗವಾಗಿ ಕಾರ್ಕಳದ ಕದಿಕೆ ಟ್ರಸ್ಟ್, ಕಿನ್ನಿಗೋಳಿಯ ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಯೋಗದಲ್ಲಿ ನೀಡುತ್ತಿರುವ ‘ಉತ್ತಮ ನೇಕಾರ’ ಪ್ರಶಸ್ತಿಯನ್ನು ಈ ಸಾಲಿಗೆ ಕೆಂಚನಕೆರೆಯ ಹಿರಿಯ ನೇಕಾರರಾದ ನಾಗಪ್ಪ ಶೆಟ್ಟಿಗಾರ್ (56) ಅವರಿಗೆ ಪ್ರದಾನ ಮಾಡಲಾಯಿತು.

ಕಿನ್ನಿಗೋಳಿಯ ನೇಕಾರ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಗಪ್ಪ ಶೆಟ್ಟಿಗಾರ್ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ನಾಲ್ಕು ದಶಕಗಳಿಂದ ನೇಕಾರಿಕೆ ಕೆಲಸ ಮಾಡುತ್ತಿರುವ ನಾಗಪ್ಪ ಶೆಟ್ಟಿಗಾರ್ ಇವರು ಇತ್ತೀಚೆಗೆ ಸೀರೆಗಳಿಗೆ ಬುಟ್ಟಾ ಹಾಕುವ ಕೆಲಸವನ್ನು ಕಲಿತು ಅದರಲ್ಲಿಯೂ ಪರಿಣತಿ ಸಾಧಿಸಿದ್ದಾರೆ.

ಇದೇ ಸಂದರ್ಭದಲ್ಲಿ ನೇಕಾರಿಕೆಯ ಪೂರ್ವ ತಯಾರಿಯೂ ಸೇರಿದಂತೆ ಈ ಕ್ಷೇತ್ರದ ಎಲ್ಲಾ ಕೆಲಸಗಳಲ್ಲಿಯೂ ಪರಿಣತಿ ಹೊಂದಿರುವ ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆನಂದ ಶೆಟ್ಟಿಗಾರ್ ಅವರನ್ನು ಸಹ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರಿನ ಆಪ್ತ ಸಮಾಲೋಚಕ ಪ್ರಕಾಶ್, ಲೇಖಕಿ ಮತ್ತು ನಗರ ಕೈತೋಟ ಪ್ರೇರಕಿ ಸರೋಜ, ಬಿಎಸ್ಸೆಎನ್ನೆಲ್‌ನ ಅಭಿಯಂತರ ಭವಾನಿ ಶಂಕರ್ ಕಾಟಿಪಳ್ಳ, ಉದ್ಯಮಿ ಗೋಪಾಲ ಶೆಟ್ಟಿಗಾರ್, ಕೃಷಿಕ ಸಚಿನ್ ಸಾಣೂರ್, ತಾಳಿಪಾಡಿ ಪ್ರಾಥಮಿಕ ನೇಕಾರರ ಸಂಘದ ಆಡಳಿತ ನಿರ್ದೇಶಕ ಮಾಧವ ಶೆಟ್ಟಿಗಾರ್, ಕದಿಕೆ ಟ್ರಸ್ಟಿನ ಅಧ್ಯಕ್ಷೆ ಮಮತಾ ರೈ, ಕಾರ್ಯದರ್ಶಿ ಚಿಕ್ಕಪ್ಪಶೆಟ್ಟಿ, ಕಿನ್ನಿಗೋಳಿಯ ಹಿರಿಯ ನೇಕಾರರು, ನೇಕಾರರ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಪರಿಚಯ: ತಮ್ಮ ಹದಿನಾರನೆಯ ವಯಸ್ಸಿನಲ್ಲಿ ನೇಕಾರಿಕೆ ಆರಂಭಿಸಿದ ನಾಗಪ್ಪಶೆಟ್ಟಿಗಾರ್, ಅಲ್ಲಿಂದ ನಿರಂತರವಾಗಿ ನೇಕಾರಿಕೆ ಮಾಡುತ್ತಾ ಬಂದಿದ್ದಾರೆ. 60 ನಂಬರಿನ ಸುಂದರ ತಿಳಿಬಣ್ಣಗಳ ಸೀರೆಗಳನ್ನು ನೇಯುವ ನಾಗಪ್ಪ, ಇತ್ತೀಚೆಗೆ ಕದಿಕೆ ಟ್ರಸ್ಟಿನ ಪ್ರೋತ್ಸಾಹದ ಮೇರೆಗೆ ಬುಟ್ಟಾ ಇರುವ ಸೀರೆಗಳನ್ನು ನೇಯಲು ಆರಂಭಿಸಿದ್ದಾರೆ.

ತಮ್ಮ ಹದಿನಾರನೆಯ ವಯಸ್ಸಿನಲ್ಲಿ ನೇಕಾರಿಕೆ ಆರಂಭಿಸಿದ ನಾಗಪ್ಪಶೆಟ್ಟಿಗಾರ್, ಅಲ್ಲಿಂದ ನಿರಂತರವಾಗಿ ನೇಕಾರಿಕೆ ಮಾಡುತ್ತಾ ಬಂದಿದ್ದಾರೆ. 60 ನಂಬರಿನ ಸುಂದರ ತಿಳಿಬಣ್ಣಗಳ ಸೀರೆಗಳನ್ನು ನೇಯುವ ನಾಗಪ್ಪ, ಇತ್ತೀಚೆಗೆ ಕದಿಕೆ ಟ್ರಸ್ಟಿನ ಪ್ರೋತ್ಸಾಹದ ಮೇರೆಗೆ ಬುಟ್ಟಾ ಇರುವ ಸೀರೆಗಳನ್ನು ನೇಯಲು ಆರಂಭಿಸಿದ್ದಾರೆ. ಹೊಸ ಪ್ರಯೋಗಗಳಿಗೆ ತೆರೆದ ಮನಸ್ಸು ಇವರದ್ದು. ತಮ್ಮ ಇಬ್ಬರು ಪುತ್ರಿಯವರಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸಿದ್ದಾರೆ. ಎಲ್ಲಾ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಉಡುಪಿ ಸೀರೆ ನೇಕಾರಿಕೆಯನ್ನು ಉಳಿಸ ಬೆಳೆಸಲು ಇವರು ಶ್ರಮಿಸುತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X