Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ...

ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ತುಳಸಿ ಗೌಡರಿಗೆ 'ಪದ್ಮಶ್ರೀ'

ಈ ಬಾರಿ ರಾಜ್ಯದ ಇಬ್ಬರಿಗೆ ದೇಶದ 4ನೆ ಅತ್ಯುನ್ನತ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ25 Jan 2020 9:10 PM IST
share
ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ತುಳಸಿ ಗೌಡರಿಗೆ ಪದ್ಮಶ್ರೀ

ಬೆಂಗಳೂರು, ಜ.25: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸಮಾಜ ಸೇವೆ(ಪರಿಸರ) ಯಲ್ಲಿ ತೊಡಗಿರುವ ತುಳಸಿ ಗೌಡ ಅವರನ್ನು ಈ ಬಾರಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರ ಜೊತೆಗೆ ಅಕ್ಷರ ಸಂತ ಹರೇಕಳ ಹಾಜಬ್ಬ ಕೂಡಾ ರಾಜ್ಯದಿಂದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

ತುಳಸಿ ಗೌಡ ಪರಿಚಯ:

ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ 82 ವರ್ಷದ ತುಳಸಿಗೌಡ, ನಿಜ ಅರ್ಥದ ವೃಕ್ಷಮಾತೆ. ಕಳೆದ 57 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರಿ ಮಾಡಿಕೊಂಡಿರುವ ತುಳಸಿಗೌಡ, ಲಕ್ಷಾಂತರ ಗಿಡಗಳನ್ನು ನೆಟ್ಟು ಬೋಳು ಬಿದ್ದ ಗುಡ್ಡಗಳಿಗೆ ಹಸಿರ ಹೊದಿಕೆ ಹೊದಿಸಿದ್ದಾರೆ. ಯಾವುದೇ ಲಾಭವಿಲ್ಲದೆ ಐದು ದಶಕಗಳ ಕಾಲ ಪರಿಸರದ ಪೋಷಣೆಗಾಗಿಯೇ ತಮ್ಮ ಜೀವನ ಮುಡುಪಾಗಿಟ್ಟಿದ್ದಾರೆ.

ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಜನಿಸಿ, ಕಡು ಕಷ್ಟದಲ್ಲಿಯೇ ಬೆಳೆದ ಅವರು ಬಾಲ್ಯದಲ್ಲೇ ಅಪ್ಪನನ್ನು ಕಳೆದುಕೊಂಡರು. ನಂತರ ಮದುವೆಯಾದ ಬಳಿಕ ಗಂಡನನ್ನೂ ಕಳೆದುಕೊಂಡರು. ಕಾಡಿನ ಕಟ್ಟಿಗೆ ಮಾರಿ ಬದುಕು ಕಟ್ಟಿಕೊಂಡರು. ಈ ವೇಳೆ ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯಕ್ಕೆ ಸೇರಿಕೊಂಡರು.

ಬಾಲ್ಯದಿಂದಲೇ ಕಾಡು, ಮರ, ಗಿಡ, ಪ್ರಾಣಿ, ಪಕ್ಷಿಗಳೊಂದಿಗೆ ಬೆಳೆದ ತುಳಸಿ ಗೌಡ, ಅರಣ್ಯದ ವಿಶ್ವಕೋಶ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಯಾವ ಯಾವ ಸಸಿಯನ್ನು ಯಾವ ಸಮಯದಲ್ಲಿ ನೆಡಬೇಕು. ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತವೆ ಈ ಎಲ್ಲ ಮಾಹಿತಿಗಳು ಇವರ ಜ್ಞಾನ ಭಂಡಾರದಲ್ಲಿದೆ.

ಮನೆಯಲ್ಲಿ ಬಡತನ, ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದರೂ ಕಳೆದ 60 ವರ್ಷಗಳಿಂದ ಪರಿಸರ ಪ್ರೇಮ ತೋರಿಸುತ್ತಿದ್ದು, ಇಲ್ಲಿಯವರೆಗೆ ಲಕ್ಷಾಂತರ ಸಸಿಗಳನ್ನು ನೆಟ್ಟಿರುವ, ನೀರು ಎರೆದು ಮರಗಳನ್ನಾಗಿ ಬೆಳೆಸಿರುವ, ನಾಡಿನ ಸಂಪತ್ತನ್ನಾಗಿ ಮಾಡಿರುವ ತುಳಸಿ ತಾಯಿಯನ್ನು ಸ್ಥಳೀಯರು ಮರಗಳ ವಿಜ್ಞಾನಿ ಎಂದೇ ಕರೆಯುತ್ತಾರೆ.

ಕೆಲವೊಮ್ಮೆ ಅರಣ್ಯದಲ್ಲಿ ತಾನು ನೆಟ್ಟ ಮರವನ್ನ ಮರಗಳ್ಳರು ಕಡಿದಾಗ ಕಡಿದ ಮರವನ್ನ ಅಪ್ಪಿ ತುಳಸಿ ಅವರು ಅತ್ತ ಘಟನೆಗಳು ಸಾಕಷ್ಟಿವೆ. ವಯಸ್ಸಾದರೂ ಈಗಲೂ ಲಕ್ಷಾಂತರ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಪ್ರೀತಿಯನ್ನು ತೋರುತ್ತಿದ್ದಾರೆ.

ಕಾಡಿನಿಂದ ತಂದ ಬೀಜಗಳನ್ನು ಸಸಿ ಮಾಡಿ ಶಾಲೆ ಆವರಣ, ರಸ್ತೆ, ಗುಡ್ಡ ಬೆಟ್ಟದಲ್ಲಿ ನೆಟ್ಟು ಪೋಷಿಸತೊಡಗಿದರು. ಒಂದೇ ವರ್ಷದಲ್ಲಿ 30 ಸಾವಿರ ಸಸಿಗಳನ್ನು ನೆಟ್ಟು ಅರಣ್ಯ ಇಲಾಖೆಯಿಂದ ಹಣ ನೀಡದಿದ್ದರೂ, ಅವುಗಳ ರಕ್ಷಣೆಯನ್ನು ಮಾಡಿದ ಕೀರ್ತಿ ಇವರದು. 300ಕ್ಕೂ ಹೆಚ್ಚು ಕಾಡು ಮರಗಳ ಬಗ್ಗೆ ಮಾಹಿತಿ ಇರುವ ಇವರು 'ಸಸ್ಯ ವಿಜ್ಞಾನಿ’ ಎಂದೇ ಪ್ರಸಿದ್ಧಿ ಪಡೆದಿದ್ದಾರೆ.

ಇವರ ಶ್ರಮ ಹಾಗೂ ಉತ್ಸಾಹವನ್ನು ಪರಿಗಣಿಸಿ ಅಂದಿನ ಅರಣ್ಯಾಧಿಕಾರಿ ಅ.ನ.ಯಲ್ಲಪ್ಪ ರೆಡ್ಡಿಯವರು ಮಾಸ್ತಿಕಟ್ಟೆ ಅರಣ್ಯ ವಲಯವನ್ನು ಪೋಷಿಸುವ ಕೆಲಸ ಕೊಡಿಸಿದ್ದರು. ಹೀಗೆ ಇವರ ಜೀವಮಾನದಲ್ಲಿ ಲಕ್ಷಗಟ್ಟಲೆ ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸಿದ್ದಾರೆ. ಇವರ ಸಾಧನೆಗೆ ರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಹುಡುಕಿಕೊಂಡು ಬಂದು ಗೌರವಿಸಿವೆ.

ಪರಿಸರ ಸಂರಕ್ಷಣೆಯಂತಹ ಮಹಾತ್ಕಾರ್ಯಕ್ಕೆ ನಿಂತು, ಜೀವಸಂಕುಲಗಳ ಉಳಿವಿಗೆ ಕಾರಣರಾಗಿರುವ ತುಳಸಿ ಗೌಡ ಈ ನಾಡಿನ ಹೆಮ್ಮೆ. ಅವರ ಪರಿಸರ ಕಾಳಜಿ ಪ್ರತಿಯೊಬ್ಬರಿಗೂ ಮಾದರಿಯಾಗಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X