Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ತರಬೇತಿ...

ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ತರಬೇತಿ ನೀಡಿದ್ದ ‘ಬಾಂಬ್ ತಜ್ಞ’ನ ಬಂಧನ

ಕೇಸರಿ ಉಗ್ರರಿಗೆ ಬಾಂಬ್ ತಯಾರಿ ತರಬೇತಿ ನೀಡುತ್ತಿದ್ದ ಪ್ರತಾಪ್: ವರದಿ

ವಾರ್ತಾಭಾರತಿವಾರ್ತಾಭಾರತಿ25 Jan 2020 9:40 PM IST
share
ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ತರಬೇತಿ ನೀಡಿದ್ದ ‘ಬಾಂಬ್ ತಜ್ಞ’ನ ಬಂಧನ

ಹೊಸದಿಲ್ಲಿ, ಜ.26: ಸ್ಫೋಟಕಗಳ ತಯಾರಿಯಲ್ಲಿ ಕೇಸರಿ ಉಗ್ರರಿಗೆ ತರಬೇತಿ ನೀಡಿದ್ದನೆನ್ನಲಾದ ಪಶ್ಚಿಮ ಬಂಗಾಳದ ನಿವಾಸಿ ಪ್ರತಾಪ್ ಹಾಝ್ರನನ್ನು ಮಹಾರಾಷ್ಟ್ರದ ಭಯೋತ್ಪಾದನ ನಿಗ್ರಹ ದಳ (ಎಟಿಎಸ್) ಗುರುವಾರ ಬಂಧಿಸಿದೆ ಎಂದು thewire.in ವರದಿ ಮಾಡಿದೆ. ಆತನಿಂದ ತರಬೇತಿ ಪಡೆದವರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಗಳೂ ಕೂಡಾ ಸೇರಿದ್ದಾರೆಂದು ವರದಿ ತಿಳಿಸಿದೆ.

2018ರ ನಲಸಪೋರಾದಲ್ಲಿ ಶಸ್ತ್ರಾಸ್ತ್ರ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಪ್ರತಾಪ್ ಹಾಝ್ರ ವಿರುದ್ಧ 2018ರ ಆಗಸ್ಟ್ 10ರಂದು ಪ್ರಕರಣ ದಾಖಲಾಗಿತ್ತು. ಆ ಬಳಿಕ ಆತ ತಲೆಮರೆಸಿಕೊಂಡಿದ್ದ. ಆತನನ್ನು ಪಶ್ಚಿಮಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಷ್ಟಿ ಎಂಬಲ್ಲಿಂದ ಬಂಧಿಸಲಾಗಿದೆ.

ನಲಸೋಪಾರದ ಅಕ್ರಮ ಶಸ್ತ್ರಾಸ್ತ್ರ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಎಟಿಎಸ್ ಪೊಲೀಸರು ನಲಸೋಪಾರದ ವೈಭವ ರಾವತ್, ಪುಣೆಯ ಸುಧನ್ವ ಗೊಂದಲೆಕರ್ ಹಾಗೂ ಔರಂಗಾಬಾದ್‌ ನ ಶರದ್ ಕಾಲಸ್ಕರ್ ಸೇರಿದಂತೆ 12 ಮಂದಿಯನ್ನು 2018ರ ಆಗಸ್ಟ್‌ನಲ್ಲಿ ಬಂಧಿಸಿದ್ದರು. ಮುಂಬೈ ಸಮೀಪದ ನಾಲಸ್‌ ಪೋರಾದಲ್ಲಿರುವ ವೈಭವ್ ರಾವತ್‌ ನ ನಿವಾಸ ಹಾಗೂ ಗೋದಾಮಿನಿಂದ ಕಚ್ಚಾಬಾಂಬ್‌ ಗಳು, ಸ್ಫೋಟಕಗಳು, ನಾಡಪಿಸ್ತೂಲ್‌ ಗಳು ಹಾಗೂ ಚಾಕುಗಳನ್ನು ಎಟಿಎಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವೈಭವರಾವತ್ ಹಿಂದೂ ಗೋವಂಶ ರಕ್ಷಾ ಸಮಿತಿಯ ಕಾರ್ಯಕರ್ತನಾಗಿದ್ದನೆಂದು ಎಟಿಎಸ್ ಪೊಲೀಸರು ತಿಳಿಸಿದ್ದಾರೆ.

ಬಂಧಿತರೆಲ್ಲರೂ ಸನಾತನ ಸಂಸ್ಥಾ ಹಾಗೂ ಹಿಂದೂಜಾಗರಣಾ ಸಂಸ್ಥೆಯ ಜೊತೆ ನೇರವಾದ ಸಂಬಂಧವನ್ನು ಹೊಂದಿದ್ದಾರೆಂದು ಎಟಿಎಸ್ ಅಧಿಕಾರಿಗಳು newindianexpress.comಗೆ ತಿಳಿಸಿದ್ದಾರೆಂದು Thewire.in ವರದಿ ಮಾಡಿದೆ. ಆರೋಪಿಗಳಿಗೆ ಸ್ಫೋಟಕಗಳನ್ನು ತಯಾರಿಸಲು ತರಬೇತಿ ನೀಡಿದವರಲ್ಲಿ ಹಝ್ರಾ ಕೂಡಾ ಒಬ್ಬನೆಂದು ಅವರು ಹೇಳಿದ್ದಾರೆ.

ಈ ಗುಂಪು ಕೆಲವು ಚಿಂತಕರನ್ನು ಹತ್ಯೆಗೈಯಲು ಹಾಗೂ ಮಹಾರಾಷ್ಟ್ರದಾದ್ಯಂತ  ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಲು ಮತ್ತು ವಿಶೇಷವಾಗಿ ಹಿಂದೂಧರ್ಮದ ವಿರುದ್ಧ ಮಾತನಾಡುವ, ಬರೆಯುವ ಹಾಗೂ ಕಾರ್ಯನಿರ್ವಹಿಸುವ ವ್ಯಕ್ತಿಗಳನ್ನು ಗುರಿಯಿರಿಸಲು ಸಂಚು ಹೂಡಿತ್ತೆನ್ನಲಾಗಿದೆ.

ಉಗ್ರಗಾಮಿ ಗುಂಪು ಭವಾನಿಸೇನಾದ ಜೊತೆ ಹಝ್ರಾ ನಂಟು ಹೊಂದಿದ್ದನೆನ್ನಲಾಗಿದೆ ಎಂದು thewire.in ವರದಿ ತಿಳಿಸಿದೆ. ಆತ 2017ರಲ್ಲಿ ಪುಣೆಯಲ್ಲಿ ನಡೆದ ಸನ್‌ ಬರ್ನ್ ಸಂಗೀತೋತ್ಸವ ಕಾರ್ಯಕ್ರಮದ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ನಡೆಸಿದ್ದನೆಂದು ಆರೋಪಿಸಲಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಶಂಕಿತ ಆರೋಪಿ ಕೂಡಾ ಹಝ್ರಾ 2015ರಲ್ಲಿ ಮಂಗಳೂರಿನಲ್ಲಿ ನಡೆಸಿದ ಶಿಬಿರವೊಂದರಲ್ಲಿ ಬಾಂಬ್ ತಯಾರಿಗೆ ಅತಿಥಿ ತರಬೇತುದಾರನಾಗಿ ಭಾಗವಹಿಸಿದ್ದನೆಂದು ಪೊಲೀಸರಿಗೆ ತಿಳಿಸಿದ್ದ.

ಬಾಂಬ್ ತಯಾರಿ ತರಬೇತಿ ಶಿಬಿರದಲ್ಲಿ ಅತಿಥಿ ತರಬೇತುದಾರರಾಗಿ ಬಂದಿದ್ದವರಲ್ಲಿ ಹಝ್ರಾ ಕೂಡಾ ಇದ್ದನೆಂದು ಗೌರಿ ಲಂಕೇಶ್ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳು ಹಾಗೂ ಸಾಕ್ಷಿಗಳು ಮಾಹಿತಿ ನೀಡಿದ್ದರಿಂದ ಆತನ ಹೆಸರು ಬೆಳಕಿಗೆ ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X