Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಾಬಲ್ಯ ಮುಂದುವರಿಸುವತ್ತ ಭಾರತದ ಚಿತ್ತ

ಪ್ರಾಬಲ್ಯ ಮುಂದುವರಿಸುವತ್ತ ಭಾರತದ ಚಿತ್ತ

ಕಿವೀಸ್ ವಿರುದ್ಧ ನಾಳೆ 2ನೇ ಟ್ವೆಂಟಿ-20

ವಾರ್ತಾಭಾರತಿವಾರ್ತಾಭಾರತಿ25 Jan 2020 10:43 PM IST
share
ಪ್ರಾಬಲ್ಯ ಮುಂದುವರಿಸುವತ್ತ ಭಾರತದ ಚಿತ್ತ

ಆಕ್ಲೆಂಡ್, ಜ.25: ನ್ಯೂಝಿಲ್ಯಾಂಡ್ ವಿರುದ್ಧ ಇಲ್ಲಿನ ಈಡನ್‌ಪಾರ್ಕ್‌ನಲ್ಲಿ ರವಿವಾರ ನಡೆಯಲಿರುವ ಎರಡನೇ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಭಾರತ ತನ್ನ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದೆ. ಆಡುವ 11ರ ಬಳಗದಲ್ಲಿ ದೊಡ್ಡಮಟ್ಟದ ಬದಲಾವಣೆ ಮಾಡದಿದ್ದರೂ ಬೌಲಿಂಗ್ ವಿಭಾಗದಲ್ಲಿ ಕೆಲವು ಬದಲಾವಣೆಯಾದರೆ ಅಚ್ಚರಿಯಿಲ್ಲ. ಮೊದಲ ಪಂದ್ಯದಲ್ಲಿ 400ಕ್ಕೂ ಅಧಿಕ ಸ್ಕೋರ್‌ಗೆ ಸಾಕ್ಷಿಯಾಗಿದ್ದ ಈಡನ್‌ಪಾರ್ಕ್‌ನಲ್ಲಿ ರವಿವಾರವೂ ರನ್ ಹೊಳೆ ಹರಿಯುವ ಎಲ್ಲ ಸಾಧ್ಯತೆಗಳಿವೆ.

ಗಾತ್ರದಲ್ಲಿ ಕಿರಿದಾಗಿರುವ ಈಡನ್‌ಪಾರ್ಕ್ ಮೈದಾನದಲ್ಲಿ ಶುಕ್ರವಾರ ನಡೆದ ಮೊದಲ ಪಂದ್ಯದಲ್ಲಿ ಜಸ್‌ಪ್ರೀತ್ ಬುಮ್ರಾ ಮಾತ್ರ ಪ್ರತಿ ಓವರ್‌ಗೆ 8ಕ್ಕಿಂತ ಕಡಿಮೆ ರನ್ ನೀಡಿ ಮಿತವ್ಯಯಿ ಎನಿಸಿದ್ದರು. ಮುಹಮ್ಮದ್ ಶಮಿ(4 ಓವರ್‌ಗಳಲ್ಲಿ 53/0)ಹಾಗೂ ಶಾರ್ದುಲ್ ಠಾಕೂರ್(3 ಓವರ್, 1/44)ನ್ಯೂಝಿಲ್ಯಾಂಡ್ ಬ್ಯಾಟ್ಸ್‌ಮನ್‌ಗಳಿಂದ ಚೆನ್ನಾಗಿ ದಂಡಿಸಲ್ಪಟ್ಟಿದ್ದರು.

ಶಮಿ ಆಡುವ 11ರ ಬಳಗದಲ್ಲಿ ತನ್ನ ಸ್ಥಾನ ಉಳಿಸಿಕೊಳ್ಳುವ ನಿರೀಕ್ಷೆಯಿದ್ದು, ಠಾಕೂರ್ ಇನ್ನೋರ್ವ ವೇಗಿ ನವದೀಪ್ ಸೈನಿಗೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ.

ಭಾರತವು ಮೂವರು ಸ್ಪೆಷಲಿಸ್ಟ್ ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವುದೋ ಅಥವಾ ಕುಲದೀಪ್ ಯಾದವ್ ಅವರು ಯಜುವೇಂದ್ರ ಚಹಾಲ್ ಹಾಗೂ ರವೀಂದ್ರ ಜಡೇಜರೊಂದಿಗೆ ಆಡುತ್ತಾರೊ? ಎಂದು ಕಾದು ನೋಡಬೇಕಾಗಿದೆ. ವಾಷಿಂಗ್ಟನ್ ಸುಂದರ್ ಭಾರತ ತಂಡದಲ್ಲಿರುವ ಇನ್ನೋರ್ವ ಸ್ಪಿನ್ ಆಯ್ಕೆಯಾಗಿದ್ದಾರೆ.

ಒಂದು ವೇಳೆ ಭಾರತ ಹೆಚ್ಚುವರಿ ಸ್ಪಿನ್ನರ್‌ನ್ನು ಕಣಕ್ಕಿಳಿಸಿದರೆ, ಆಲ್‌ರೌಂಡರ್ ಶಿವಂ ದುಬೆ ಮೂರನೇ ವೇಗದ ಬೌಲರ್ ಆಗಲಿದ್ದಾರೆ. ಜಡೇಜ ಹಾಗೂ ಚಹಾಲ್ ಶುಕ್ರವಾರ ತಲಾ ಒಂದು ವಿಕೆಟ್ ಪಡೆದು 36 ಎಸೆತಗಳಲ್ಲಿ 50 ರನ್ ಬಿಟ್ಟುಕೊಟ್ಟಿದ್ದರು.

ಚಹಾಲ್ ಹಾಗೂ ಕುಲದೀಪ್ 2019ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ ಬಳಿಕ ಈ ತನಕ ಒಟ್ಟಿಗೆ ಆಡಿಲ್ಲ. ಭಾರತದ ಬ್ಯಾಟಿಂಗ್ ಸ್ಥಿರತೆ ಪಡೆದಂತೆ ಕಂಡುಬಂದರೂ ಟೀಮ್ ಮ್ಯಾನೇಜ್‌ಮೆಂಟ್ ಎಲ್ಲರನ್ನು ಒಟ್ಟಾಗಿಸುವ ನಿರೀಕ್ಷೆಯಲ್ಲಿದೆ.

ಬ್ಯಾಟಿಂಗ್‌ನಲ್ಲ್ಲಿ ಮಧ್ಯಮ ಕ್ರಮಾಂಕದ ಆಟಗಾರರು ಒತ್ತಡದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವುದಕ್ಕೆ ವಿರಾಟ್ ಕೊಹ್ಲಿ ಸಂತಸಗೊಂಡಿದ್ದಾರೆ. ಮೊದಲ ಪಂದ್ಯದಲ್ಲಿ 29 ಎಸೆತಗಳಲ್ಲಿ ಔಟಾಗದೆ 58 ರನ್ ಗಳಿಸಿದ್ದ ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕಕ್ಕೆ ಶಕ್ತಿ ತುಂಬುತ್ತಿದ್ದಾರೆ.

ಮೊದಲ ಪಂದ್ಯದಲ್ಲಿ 204 ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿರುವ ಭಾರತ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿ ಉತ್ತಮ ಆರಂಭ ಪಡೆದಿದೆ.

ಮುಂಬೈ ಬ್ಯಾಟ್ಸ್‌ಮನ್ ಅಯ್ಯರ್ ಶ್ರೇಷ್ಠ ಫಾರ್ಮ್ ನಲ್ಲಿದ್ದಾರೆ. ಕಳೆದ ವರ್ಷದ ಸೆಪ್ಟಂಬರ್‌ನ ಬಳಿಕ 11 ಇನಿಂಗ್ಸ್ ಗಳಲ್ಲಿ 34.14ರ ಸರಾಸರಿಯಲ್ಲಿ ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಮನೀಷ್ ಪಾಂಡೆ ಹಾಗೂ ದುಬೆ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಕೆ.ಎಲ್.ರಾಹುಲ್ ವಿಕೆಟ್‌ಕೀಪಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲೂ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ.

ಮತ್ತೊಂದೆಡೆ, ಕಿವೀಸ್ ಮೊದಲ ಪಂದ್ಯದಲ್ಲಿ 15 ರಿಂದ 20 ರನ್ ಕೊರತೆ ಎದುರಿಸಿದ್ದು, ಫೀಲ್ಡಿಂಗ್‌ನ ವೇಳೆ ಭಾರತಕ್ಕೆ ಎರಡು ಬಾರಿ ಜೀವದಾನ ನೀಡಿತ್ತು. ಅಚ್ಚರಿಯೆಂಬಂತೆ ಭಾರತವು ಈಡನ್ ಪಾರ್ಕ್‌ನ ವಾತಾವರಣಕ್ಕೆ ಬೇಗನೆ ಹೊಂದಿಕೊಂಡಿದೆ.

 ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಹೊರತಾಗಿಯೂ ಎರಡನೇ ಪಂದ್ಯದಲ್ಲ್ಲಿ ನ್ಯೂಝಿಲ್ಯಾಂಡ್ ಫೇವರಿಟ್ ತಂಡವಾಗಿದೆ. ಹಿರಿಯ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ ಹಾಗೂ ರಾಸ್ ಟೇಲರ್ ಆಕ್ರಮಣಕಾರಿ ಅರ್ಧಶತಕ ಗಳಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ನ್ಯೂಝಿಲ್ಯಾಂಡ್ 2ನೇ ಪಂದ್ಯದಲ್ಲಿ ಹೆಚ್ಚಿನ ಬದಲಾವಣೆ ಮಾಡದಿರಲು ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X