Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಲೆ ಬೆದರಿಕೆಯಿಂದ ಮತ್ತಷ್ಟು ಉತ್ಸುಕ:...

ಕೊಲೆ ಬೆದರಿಕೆಯಿಂದ ಮತ್ತಷ್ಟು ಉತ್ಸುಕ: ಪ್ರೊ.ಮಹೇಶ್ ಚಂದ್ರಗುರು

ವಾರ್ತಾಭಾರತಿವಾರ್ತಾಭಾರತಿ25 Jan 2020 11:02 PM IST
share
ಕೊಲೆ ಬೆದರಿಕೆಯಿಂದ ಮತ್ತಷ್ಟು ಉತ್ಸುಕ: ಪ್ರೊ.ಮಹೇಶ್ ಚಂದ್ರಗುರು

ಮೈಸೂರು,ಜ.25: ದೇಶದ ಸರ್ವಜನಾಂಗಗಳ ಅಭ್ಯುದಯಕ್ಕೆ ಬದ್ಧರಾಗಿರುವ ಪ್ರಗತಿಪರರನ್ನು ಪ್ರೋತ್ಸಾಹಿಸುವ ಬದಲಿಗೆ ಕೊಲ್ಲುವ ಮಾತುಗಳನ್ನಾಡುವುದು ಯಾವುದೇ ರೀತಿಯಲ್ಲೂ ಸೂಕ್ತವಲ್ಲ. ಇಂತಹ ಕೊಲೆ ಬೆದರಿಕೆಗಳು ಸುಧಾರಣಾವಾಧಿಗಳ ವಿರುದ್ಧ ಅನಾದಿಕಾಲದಿಂದಲೂ ಬರುತ್ತಲೇ ಇವೆ. ಬೊಗಳುವ ನಾಯಿ ಕಚ್ಚುವುದಿಲ್ಲ, ಕಚ್ಚುವ ನಾಯಿ ಬೊಗಳುವುದಿಲ್ಲ, ನಾವು ಈ ದೇಶದ ಕಾವಲು ನಾಯಿಗಳಂತೆ ಪ್ರೀತಿಯಿಂದ ಇನ್ನೂ ಹೆಚ್ಚು ಕಾರ್ಯನಿರ್ವಹಿಸಲು ಸದಾ ಬದ್ಧರಾಗಿದ್ದೇವೆ ಎಂದು ಪ್ರಗತಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಅಭಿಪ್ರಾಯಿಸಿದರು.

ಅನಾಮದೇಯ ಕೊಲೆ ಬೆದರಿಕೆ ಪತ್ರ ಬಂದಿರುವ ಹಿನ್ನಲೆಯಲ್ಲಿ ಶನಿವಾರ 'ವಾರ್ತಾಭಾರತಿ'ಯೊಂದಿಗೆ ಮಾತನಾಡಿದ ಅವರು, ಬೊಗಳುವ ನಾಯಿ ಕಚ್ಚುವುದಿಲ್ಲ, ಕಚ್ಚುವ ನಾಯಿ ಬೊಗಳುವುದಿಲ್ಲ, ಇಂತಹ ಕೊಲೆ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇಂತಹ ಬೆದರಿಕೆಗಳಿಗೆ ಬಗ್ಗದೆ ಮತ್ತಷ್ಟು ಹೆಚ್ಚಿನ ಪ್ರೀತಿ ಜವಾಬ್ದಾರಿ ಮತ್ತು ಕಾಳಜಿಯಿಂದ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಸಿದ್ದರಿದ್ದೇವೆ. ವಿವೇಕಾನಂದರು ಹೇಳಿದಂತೆ ಜೀವಂತ ಶವಗಳಾಗಿ ಬದುಕುವುದಕ್ಕಿಂತ ಮಾನವೀಯ ಮೌಲ್ಯಗಳಿಗೆ ಪ್ರಾಣವನ್ನು ತ್ಯಾಗ ಮಾಡಿ ಹುತಾತ್ಮರಾಗಿ ಸತ್ತ ಮೇಲೆಯೂ ಬದುಕಬೇಕೆಂಬ ಹಂಬಲ ನಮ್ಮದಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಜ್ಜನರು ಸುಸಂಸ್ಕೃತರು ಅಭಿಪ್ರಾಯ ಭೆದಗಳನ್ನು ಗೌರವಿಸಬೇಕು. ಯಾವುದೇ ಒಂದು ವಿಷಯ ಮತ್ತು ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಪರ ಅಥವಾ ವಿರೋಧ ಅಭಿಪ್ರಾಯಗಳು ಬರುವುದು ಸಹಜ. ಪ್ರಗತಿಪರರು ಸಂವಿಧಾನಕ್ಕೆ ನಿಷ್ಠರಾಗಿ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ತಮಗೆ ಲಭಿಸಿರುವಂತಹ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ತಮ್ಮ ಅನಿಸಿಕೆಗಳು ಮತ್ತು ಅಭಿಪ್ರಾಯಗಳನ್ನು ಮಂಡಿಸುವ ಮೂಲಭೂತ ಸ್ವಾತಂತ್ರಯವನ್ನು ಹೊಂದಿದ್ದಾರೆ ಎಂದು ಹೇಳಿದರು.

ಹಿಂದೂ ಧರ್ಮವು ಅಸಮಾನತೆಯ ತವರೂರಾಗಿದ್ದು, ಈ ನೆಲದ ಮೂಲ ನಿವಾಸಿಗಳು ಮತ್ತು ಹಿಂದುಳಿದ ಸಮುದಾಯಗಳಿಗೆ ಸಮಾನ ಪ್ರೀತಿ ಗೌರವ ಮತ್ತು ಅವಕಾಶಗಳನ್ನು ಕಲ್ಪಿಸಿಕೊಡಲು ಪೂರಕವಾಗಿಲ್ಲ. ಪ್ರಕೃತಿ ಧರ್ಮಕ್ಕಿಂತ ಮತ್ತು ಸಂವಿಧಾನ ಧರ್ಮಕ್ಕಿಂತ ಹಿಂದೂ ಧರ್ಮವನ್ನು ಒಳಗೊಂಡಂತೆ ಯಾವುದೇ ಧರ್ಮ ಶ್ರೇಷ್ಠವಲ್ಲ, ಅನೇಕ ಮಹನೀಯರು ವಿವಿಧ ಕಾಲಘಟ್ಟಗಳಲ್ಲಿ ಸಮಾಜದ ಶುದ್ಧೀಕರಣ ಮತ್ತು ಧಾರ್ಮಿಕ ಸುಧಾರಣೆಗಾಗಿ ಅಹಿಂಸಾತ್ಮಕ ಹೋರಾಟಗಳನ್ನು ನಡೆಸಿದ್ದಾರೆ. ಅವರನ್ನು ಯಾರೂ ದೇಶದ್ರೋಹಿಗಳೆಂದು ಬಣ್ಣಿಸಲಿಲ್ಲ ಮತ್ತು ಅವರಿಗೆ ಯಾವುದೇ ರೀತಿಯ ಕೊಲೆ ಬೆದರಿಕೆಗಳನ್ನು ಹಾಕಲಿಲ್ಲ. ಇಂದು ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ ಅಸಹಿಷ್ಣುತೆ ನಿರಂತರವಾಗಿ ಹೆಚ್ಚುತ್ತಿದೆ. ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಪ್ರಜಾಸತ್ತಾತ್ಮಕ ಆಶಯಗಳಿಗೆ ಬದ್ಧರಾಗಿರುವ ಪ್ರಗತಿಪರರು ಮತ್ತು ವಿಚಾರವಾದಿಗಳು ಹಿಂದೂ ಧರ್ಮ ಸುಧಾರಣೆಯಾಗಬೆಕು ಮತ್ತು ಭಾರತ ದೇಶ ಪ್ರಭುದ್ಧ ಭಾರತವಾಗಿ ರೂಪುಗೊಳ್ಳಬೇಕು ಎಂಬ ಕಾಳಜಿಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಇಂದಿನ ಮನುವಾದಿಗಳು ಸಮಾನತೆ, ವೈಚಾರಿಕತೆ, ವೈಜ್ಞಾನಿಕತೆ ಮತ್ತು ಮಾನವೀಯತೆಗಳಿಗೆ ಅಪಚಾರ ಉಂಟಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ದೇಶದ ಘನತೆಯನ್ನು ಕುಗ್ಗಿಸುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X