Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲಿತರನ್ನು ನೋಡುವ ರೀತಿ ಬದಲಾಗಬೇಕು:...

ದಲಿತರನ್ನು ನೋಡುವ ರೀತಿ ಬದಲಾಗಬೇಕು: ತಿಪ್ಪೇರುದ್ರ ಸ್ವಾಮೀಜಿ

ಲಾಯ್ಲ: ಸಮಾನತೆಗಾಗಿ ದಲಿತರೊಂದಿಗೆ ಸಹಪಂಕ್ತಿ ಭೋಜನ

ವಾರ್ತಾಭಾರತಿವಾರ್ತಾಭಾರತಿ26 Jan 2020 11:44 PM IST
share
ದಲಿತರನ್ನು ನೋಡುವ ರೀತಿ ಬದಲಾಗಬೇಕು: ತಿಪ್ಪೇರುದ್ರ ಸ್ವಾಮೀಜಿ

ಬೆಳ್ತಂಗಡಿ, ಜ.26: ಹಿಂದೂ ಧರ್ಮದಲ್ಲಿ ಹುಟ್ಟಿದ ಪ್ರತಿಯೊಬ್ಬ ದೇಶದ ಪ್ರಜೆಗೂ ನಮ್ಮ ಸಂಸ್ಕೃತಿ ಬಗ್ಗೆ ಅಭಿಮಾನವಿದೆ. ಆದರೆ ಸಮಾಜದಲ್ಲಿ ಸಾಕು ಪ್ರಾಣಿಗಳಿಗಿಂತಲೂ ಕಡೆಯಾಗಿ ದಲಿತ ಸಮುದಾಯವನ್ನು ನೋಡಿಕೊಳ್ಳುವ ಕಾರ್ಯ ನಡೆಯುತ್ತಿದೆ. ಇದು ಬದಲಾಗದೆ ದಲಿತರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎಂದು ತುಮಕೂರು ಜಿಲ್ಲೆಯ ತುರ್ವೇಕೆರೆ ಬೀಕಲ್‌ಕೆರೆ ಅಲ್ಲಮಪ್ರಭು ಮಠದ ತಿಪ್ಪೇರುದ್ರ ಸ್ವಾಮೀಜಿ ವಿಷಾಧಿಸಿದರು.

ದಲಿತ ಹಕ್ಕುಗಳ ಸಮಿತಿ ಹಾಗೂ ಶ್ರಮ ಶಕ್ತಿ ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ನೇತೃತ್ವದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ರಕ್ಷಣೆಗಾಗಿ ರವಿವಾರ ಲಾಲ ಅಂಬೇಡ್ಕರ್ ರಸ್ತೆಯ ಪುತ್ರಬೈಲು ಎಂಬಲ್ಲಿ ದಲಿತರೊಂದಿಗೆ ಸಹಪಂಕ್ತಿ ಭೋಜನ ಉದ್ಘಾಟಿಸಿ ಮಾತನಾಡಿದರು.

ಪ್ರಾಣಿಗಳನ್ನು ಪ್ರೀತಿಸಲು ಕಲಿಸುವ ಧರ್ಮ ಮನುಷ್ಯನನ್ನು ಪ್ರೀತಿಸಲು ಕಲಿಸಬೇಕಾಗಿದೆ. ದಲಿತರಿಗೆ ಸರಕಾರಗಳು ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಅವರು ಸ್ವಾಭಿಮಾನದಿಂದ ಬದುಕಲು ಅವಕಾಶ ಕಲ್ಪಿಸುವುದು ಅತಿ ಅಗತ್ಯವಾಗಿದೆ. ಅವರನ್ನೂ ಸಮಾನರಾಗಿ ಕಂಡು ಪ್ರೀತಿಸುವ ಕಾರ್ಯ ನಡೆಯಬೇಕು ಎಂದರು.

ಭಾರತೀಯ ಸಂಸ್ಕೃತಿಯಲ್ಲಿ ಒಂದು ಭಾಗವಾಗಿರುವ ಹಿಂದೂ ಧರ್ಮವನ್ನು ಮನಸಾರೆ ಒಪ್ಪಿಕೊಂಡಿದ್ದರೂ ಅಲ್ಲಿರುವ ನ್ಯೂನ್ಯತೆಗಳು, ಮೂಡನಂಬಿಕೆ, ಅಸಮಾನತೆಗಳಿಂದ ಸಮಾಜ ಒಡೆದಿದೆ. ಸಮಾನತೆಗಾಗಿ ಹೋರಾಟ ಈಗ ಅನಿವಾರ್ಯವಾಗಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾದ ನೀತಿಗಳು ಜಾರಿಯಾಗುತ್ತಿರುವ ಈ ಸಂದರ್ಭದಲ್ಲಿ ಇದನ್ನರಿತು ಜಾತಿ ತಾರತಮ್ಯ ವಿರುದ್ಧ ಮತ್ತು ಸಂವಿಧಾನ ರಕ್ಷಣೆಗಾಗಿ 71ನೇ ಗಣರಾಜ್ಯೋತ್ಸವ ಸಂದರ್ಭ ನಡೆದ ಸಹಪಂಕ್ತಿ ಭೋಜನ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗಿದೆ ಎಂದರು.

ಮುಖ್ಯ ಅತಿಥಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮಾತನಾಡಿ, ಸಮಾಜದ ಮುಖ್ಯವಾಹಿನಿಗೆ ಬರುವ ಅವಕಾಶಗಳನ್ನು ಸರಕಾರ ಪ್ರತಿಯೊಬ್ಬರಿಗೂ ರೂಪಿಸಿದೆ. ನಾವು ಹಿಂದುಳಿದವರು ಎಂಬ ಭಾವನೆ ಬಿಟ್ಟು ಸಮಾಜದಲ್ಲಿ ಅವಕಾಶಗಳನ್ನು ಬಳಸಿಕೊಂಡು ಮುನ್ನೆಲೆಗೆ ಬರಬೇಕು. ಹಿಂದುಳಿದ ಸಮಾಜಕ್ಕೆ ಶಿಕ್ಷಣ ಕಲ್ಪಿಸುವ ಮೂಲಕ ದೌರ್ಜನ್ಯದಿಂದ ಹೊರಬರಬರಲು ಪ್ರಯತ್ನ ನಡೆಸಬೇಕು ಎಂದು ಹೇಳಿದರು.

ಪೂಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಸುಜೀತ್ ಮಾತನಾಡಿ, ಸಂವಿಧಾನ ಅನುಷ್ಠಾನಕ್ಕೆ ಬಂದ ದಿನದಂದು ಆಯೋಜಿಸಿರುವ ಸಹಪಂಕ್ತಿ ಭೋಜನ ಅರ್ಥಪೂರ್ಣ. ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಇಂತಹ ಕಾರ್ಯಕ್ರಮಗಳು ನಡೆಯಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್ ಎಸ್.ಎಂ. ಕಾರ್ಯಕ್ರಮಕ್ಕೆ ಶುಭಕೋರಿದರು. ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಶೇಖರ್ ಎಲ್. ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X