Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕನ್ನಡ ಸಾಹಿತ್ಯ ಸಮ್ಮೇಳನವಲ್ಲ, ಅನ್ಯಗ್ರಹ...

ಕನ್ನಡ ಸಾಹಿತ್ಯ ಸಮ್ಮೇಳನವಲ್ಲ, ಅನ್ಯಗ್ರಹ ಜೀವಿಗಳ ಸಮ್ಮೇಳನ!

ನರಹರಿ ಪ್ರಿಯ, ಬೆಂಗಳೂರುನರಹರಿ ಪ್ರಿಯ, ಬೆಂಗಳೂರು26 Jan 2020 11:46 PM IST
share

ಮಾನ್ಯರೇ,
 
 ಈ ಬಾರಿ ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ನಡೆದಿದೆ. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬಾಂಬ್ ಬೆದರಿಕೆಯೊಡ್ಡಿ ಸಾಹಿತ್ಯ ಸಮ್ಮೇಳನವನ್ನು ತಡೆಯಲಾಗಿದೆ. ಇದರ ವಿರುದ್ಧ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಲಿ, ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲಿ ಒಂದು ಮಾತೂ ಆಡಿಲ್ಲ. ಆತ್ಮಾಭಿಮಾನವಿಲ್ಲದ ಬರಹಗಳನ್ನು ಸಾಹಿತ್ಯವೆಂದು ಕರೆಯಲಾಗುವುದಿಲ್ಲ. ಪ್ರಭುತ್ವದ ಭಟ್ಟಂಗಿತನ ಎಂದು ಕರೆಯಲಾಗುತ್ತದೆ. ಆಳದಲ್ಲಿ ಪ್ರತಿಭಟನಾ ಗುಣವೊಂದು ಕಲೆಯಲ್ಲಿ ಇರುತ್ತದೆ. ಅದು ಇಲ್ಲದೆ ಇದ್ದರೆ ಸಾಹಿತ್ಯ ಬೂಸಾ ಅನ್ನಿಸಿಕೊಳ್ಳುತ್ತದೆ. ಸಾಹಿತ್ಯ ಸಮ್ಮೇಳನದಲ್ಲಿ ನಾನು ಗಮನಿಸಿದ್ದೇನೆ. ಪ್ರತ್ಯೇಕ ಉಪನ್ಯಾಸಗಳಲ್ಲಿ ಆಸಕ್ತಿಯಿಂದ ಕೇಳುವ ಕೇಳುಗರು 10 ಜನರೂ ಇರುವುದಿಲ್ಲ. ಒಟ್ಟು ಜನಸಂದಣಿ, ಪುಸ್ತಕ ಮಾರಾಟ, ಊಟದ ಅಬ್ಬರದಲ್ಲಿ ವೇದಿಕೆಯಲ್ಲಿ ಮಾತನಾಡುವವರು ಏನು ಆಡಿದ್ದಾರೆ ಎನ್ನುವುದೇ ಗೊತ್ತಾಗುವುದಿಲ್ಲ. ಇಡೀ ಸಾಹಿತ್ಯ ಸಮ್ಮೇಳನ ಬೆರಳೆಣಿಕೆಯ ಸಾಹಿತಿಗಳ, ಸಂಘಟಕರ ತುರಿಕೆಯಾಗಿ ಮುಗಿದು ಹೋಗುತ್ತದೆ. ಒಂದೇ ಒಂದು ಪ್ರಯೋಜನವೆಂದರೆ, ಕೆಲವರನ್ನು ಆ ಸಭೆಗಳಲ್ಲಿ ಪರಿಚಯಿಸಿಕೊಳ್ಳಬಹುದು. ಅದಕ್ಕಾಗಿ ಬೇರೆ ವೇದಿಕೆಯನ್ನು ಕೂಡ ಮಾಡಿಕೊಳ್ಳಬಹುದಾಗಿದೆ.

ಜನರ ಜೀವ ಸಂಕಟದಲ್ಲಿರುವಾಗ ನೃತ್ಯ, ಸಂಗೀತ ಯಾರಿಗೆ ಬೇಕು? ಇಡೀ ದೇಶ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಸರಕಾರದ ಆಸ್ಥಾನ ನರ್ತಕಿಯರ ಸಮ್ಮೇಳನವಾಗಿ ಸಾಹಿತ್ಯ ಸಮ್ಮೇಳನವನ್ನು ಭಾವಿಸಬಹುದು. ಸಮ್ಮೇಳನಾಧ್ಯಕ್ಷರು ಪ್ರಧಾನ ನರ್ತಕಿಯಾದರೆ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರು ವಿದೂಷಕರಾಗಿ ಪ್ರಭುತ್ವವನ್ನು ಒಲಿಸಿಕೊಳ್ಳಬಹುದು. ಉಳಿದಂತೆ ವರ್ತಮಾನ ಸಂಗತಿಗಳಿಂದ ಮಾರು ದೂರದಲ್ಲಿದೆ ಈ ಸಾಹಿತ್ಯ ಸಮ್ಮೇಳನ. ಇದೊಂದು ರೀತಿ, ಅನ್ಯಗ್ರಹ ಜೀವಿಗಳ ಸಮ್ಮೇಳನ. ಈ ಭೂಮಿಗೂ ಅವರಿಗೂ ಯಾವ ಸಂಬಂಧವೂ ಇಲ್ಲ.  

share
ನರಹರಿ ಪ್ರಿಯ, ಬೆಂಗಳೂರು
ನರಹರಿ ಪ್ರಿಯ, ಬೆಂಗಳೂರು
Next Story
X