Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬುದ್ಧಿಶಕ್ತಿಯ ಹಲವು ನೆಲೆಗಳು...

ಬುದ್ಧಿಶಕ್ತಿಯ ಹಲವು ನೆಲೆಗಳು...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ26 Jan 2020 6:30 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬುದ್ಧಿಶಕ್ತಿಯ ಹಲವು ನೆಲೆಗಳು...

 ಕನ್ನಡ ಭಾಷೆ, ಶಿಕ್ಷಣಕ್ಕೆ ಸಂಬಂಧಿಸಿ ಹತ್ತು ಹಲವು ಮಹತ್ವ ಪೂರ್ಣ ಕೃತಿಗಳನ್ನು ಬರೆದಿರುವ ಡಾ. ಮಹಾಬಲೇಶ್ವರ ರಾವ್ ಅವರ ಇನ್ನೊಂದು ಸಂಶೋಧನಾ ಕೃತಿ ‘ಬುದ್ಧಿ ಶಕ್ತಿ ಒಂದಲ್ಲ, ಹಲವು’. ಹಲವಾರು ಮನೋವಿಜ್ಞಾನಿಗಳು ಮನುಷ್ಯನ ಬುದ್ಧಿಶಕ್ತಿಯ ಬಗ್ಗೆ ಸಂಶೋಧನೆ ಮಾಡಿದ್ದಾರೆ. ಅವರಲ್ಲಿ ಹೋವರ್ಡ್ ಗಾರ್ಡ್ನರ್ ಬುದ್ಧಿಶಕ್ತಿಯು ಒಂದೇ ಅಲ್ಲ, ಬಹುವಿಧ ಬುದ್ಧಿಶಕ್ತಿಗಳಿವೆ ಎಂದು ಪ್ರತಿಪಾದಿಸಿ ಮನೋವಿಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಚಿಂತನೆಯನ್ನು ಹುಟ್ಟಿ ಹಾಕಿದ್ದಾರೆ. ಈ ಬಗ್ಗೆ ಹಲವು ಗ್ರಂಥಗಳನ್ನು ಬರೆದು ಸುಮಾರು ಒಂಬತ್ತು ರೀತಿಯ ಬುದ್ಧಿಶಕ್ತಿಗಳಿವೆಯೆಂದು ಮನೋವಿಜ್ಞಾನ ಕ್ಷೇತ್ರದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದ್ದಾನೆ. ಅದರ ಸಾರವನ್ನು ಈ ಕಿರುಕೃತಿಯಲ್ಲಿ ರಾವ್ ಅವರು ನೀಡಿದ್ದಾರೆ. ಬುದ್ಧಿ ಶಕ್ತಿಯ ಬಗೆಗಿನ ಸಾಂಪ್ರದಾಯಿಕ ದೃಷ್ಟಿ, ಬುದ್ಧಿ ಸೂಚ್ಯಂಕ ಆಧಾರಿತ ಪರೀಕ್ಷೆಗಳು, ಬಹುವಿಧ ಬುದ್ಧಿ ಶಕ್ತಿಗಳ ಸಿದ್ಧಾಂತ, ಅದರ ಶೈಕ್ಷಣಿಕ ಪ್ರಾಯೋಗಿಕತೆ ಹಾಗೂ ಸಿದ್ಧಾಂತದ ಬಗ್ಗೆ ಉದ್ಭವಿಸಿರುವ ಟೀಕೆ ಟಿಪ್ಪಣಿಗಳನ್ನು ಸಾರ ರೂಪದಲ್ಲಿ ಈ ಕೃತಿ ಹಿಡಿದಿಡುತ್ತದೆ.

ಬುದ್ಧಿ ಶಕ್ತಿ ಎಂದರೇನು?, ಅದರ ನಾನಾ ಸಿದ್ಧಾಂತಗಳು, ಬಹುವಿಧ ಬುದ್ಧಿ ಶಕ್ತಿಗಳ ಜನಕ, ಬುದ್ಧಿಶಕ್ತಿಯ ಕುರಿತಂತೆ ಮೂರು ಅರ್ಥಗಳು, ಬುದ್ಧಿ ಶಕ್ತಿ ಪರೀಕ್ಷೆಗಳು, ಶೈಕ್ಷಣಿಕ ನಿಹಿತಾರ್ಥಗಳು, ವೌಲ್ಯ ಮಾಪನದ ನವೀನ ದೃಷ್ಟಿ, ಲೋಕ ಸಂಚಾರ, ಭವಿಷ್ಯ ಮತ್ತು ಟೀಕೆಗಳು....ಹೀಗೆ ಬೇರೆ ತಲೆಬರಹಗಳಲ್ಲಿ ಬೌದ್ಧಿಕ ಕ್ರಿಯೆಗಳನ್ನು ವಿಶ್ಲೇಷಿಸಿದ್ದಾರೆ. ‘‘ಶಿಕ್ಷಣವೆಂದರೆ ಪ್ರಶ್ನೆಗಳಿಗೆ ಸರಿ ಉತ್ತರ ಪಡೆಯುವ ಕ್ರಿಯೆಯಲ್ಲ. ಭಾರತದಲ್ಲಿ ಅನೇಕ ಶಿಕ್ಷಕರು ಹೀಗೆ ಭಾವಿಸುತ್ತಾರೆ. ಅಮೆರಿಕದಲ್ಲಿ ವಿದ್ಯಾರ್ಥಿಗಳು ತಪ್ಪು ಉತ್ತರಗಳನ್ನು ನೀಡಿದಾಗ ಶಿಕ್ಷಕರು ಆ ಬಗ್ಗೆಯೇ ತುಂಬಾ ಶೋಧನೆ ಮಾಡುತ್ತಾರೆ. ವಿದ್ಯಾರ್ಥಿಗಳು ಯಾಕೆ ಹೀಗೆ ಉತ್ತರ ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿಕೊಳ್ಳುತ್ತಾೆ. ವಿದ್ಯಾರ್ಥಿಗಳು ಕೊಡುವ ತಪ್ಪು ಉತ್ತರಗಳ ಹಿಂದೆ ಅವರದ್ದೇ ಆದ ಒಂದು ತರ್ಕವಿರುತ್ತದೆ. ಕೆಲವೊಮ್ಮೆ ಯಾವುದೇ ಸುಳಿವಿಲ್ಲದೆ ಸರಿ ಉತ್ತರ ಕೊಟ್ಟು ಬಿಡುತ್ತಾರೆ. ಆದುದರಿಂದ ಶಿಕ್ಷಕರು ಮಕ್ಕಳು ಕೊಡುವ ತಪ್ಪು ಉತ್ತರಗಳನ್ನು ಪರಾಮರ್ಶಿಸಬೇಕು. ತಪ್ಪು ಎಂದು ತಿರಸ್ಕರಿಸಬಾರದು’’ ಎನ್ನುವ ಗಾರ್ಡ್ನರ್ ಅಭಿಪ್ರಾಯ ಭಾರತದ ಶಿಕ್ಷಣ ಪದ್ಧತಿಗೆ ಅತ್ಯಗತ್ಯವಾಗಿ ಅನ್ವಯವಾಗಬೇಕು ಎಂಬ ಆಶಯವನ್ನು ಈ ಕೃತಿ ಹೊಂದಿದೆ.

ನವ ಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 80 ಮುಖಬೆಲೆ 80 ರೂ. ಆಸಕ್ತರು 080-22161900 ದೂರವಾಣಿಯನ್ನು ಸಂಪರ್ಕಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X