Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಎ ನಮ್ಮ ಆಂತರಿಕ ವಿಷಯ: ಐರೋಪ್ಯ...

ಸಿಎಎ ನಮ್ಮ ಆಂತರಿಕ ವಿಷಯ: ಐರೋಪ್ಯ ಒಕ್ಕೂಟದ ಗೊತ್ತುವಳಿಗೆ ಭಾರತದ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ27 Jan 2020 7:15 PM IST
share
ಸಿಎಎ ನಮ್ಮ ಆಂತರಿಕ ವಿಷಯ: ಐರೋಪ್ಯ ಒಕ್ಕೂಟದ ಗೊತ್ತುವಳಿಗೆ ಭಾರತದ ಪ್ರತಿಕ್ರಿಯೆ

ಹೊಸದಿಲ್ಲಿ,ಜ.27: 28 ರಾಷ್ಟ್ರಗಳ ಪ್ರಬಲ ಕೂಟವಾಗಿರುವ ಐರೋಪ್ಯ ಒಕ್ಕೂಟ (ಇಯು)ದ ಸಂಸದರು ಭಾರತದ ನೂತನ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯ ವಿರುದ್ಧ ಮಂಡಿಸಿರುವ ಗೊತ್ತುವಳಿಗಳಿಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರಕಾರದ ಮೂಲಗಳು,ಸಿಎಎ ಸಂಪೂರ್ಣವಾಗಿ ದೇಶದ ಆಂತರಿಕ ವಿಷಯವಾಗಿದೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸರಕಾರಗಳ ಹಕ್ಕುಗಳು ಮತ್ತು ಅಧಿಕಾರಗಳಲ್ಲಿ ಇಯು ಮೂಗು ತೂರಿಸಬೇಕಿಲ್ಲ ಎಂದು ಕಟುವಾದ ಶಬ್ದಗಳಲ್ಲಿ ಹೇಳಿವೆ. ಇಯು ಸಂಸತ್ ಸದ್ಯವೇ ಈ ಗೊತ್ತುವಳಿಗಳನ್ನು ಚರ್ಚೆಗೆತ್ತಿಕೊಳ್ಳಲಿದೆ.

ಗೊತ್ತುವಳಿಗಳ ‘ಪ್ರಾಯೋಜಕರು ಮತ್ತು ಬೆಂಬಲಿಗರು ’ ಮುಂದುವರಿಯುವ ಮುನ್ನ ಸರಕಾರದೊಡನೆ ಮಾತುಕತೆ ನಡೆಸಿ ವಾಸ್ತವಾಂಶಗಳ ಬಗ್ಗೆ ಸಂಪೂರ್ಣ ಮತ್ತು ನಿಖರವಾದ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ ಎಂದು ಭಾರತವು ಆಶಿಸಿದೆ ಎಂದು ಮೂಲಗಳು ತಿಳಿಸಿವೆ.

ಸಿಎಎ ಭಾರತದ ಪೌರತ್ವ ನೀತಿಯಲ್ಲಿ ಅಪಾಯಕಾರಿ ಬದಲಾವಣೆಯನ್ನು ಸೂಚಿಸುತ್ತಿದೆ ಎಂದು ಇಯು ಸಂಸದರು ಮಂಡಿಸಿರುವ ಗೊತ್ತುವಳಿಗಳಲ್ಲಿ ಹೇಳಲಾಗಿದೆ.

ಸರಕಾರದ ಘೋಷಿತ ನಿಲುವನ್ನು ಪುನರುಚ್ಚರಿಸಿದ ಮೂಲಗಳು,ಸಿಎಎ ಸಂಪೂರ್ಣವಾಗಿ ಭಾರತದ ಆಂತರಿಕ ವಿಷಯವಾಗಿದೆ ಮತ್ತು ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಗಳ ನಂತರ ಪ್ರಜಾಸತ್ತಾತ್ಮಕ ರೀತಿಯಲ್ಲಿ ಶಾಸನವನ್ನು ಅಂಗೀಕರಿಸಲಾಗಿದೆ ಎಂದವು.

ಪ್ರತಿಯೊಂದು ದೇಶವೂ ಪೌರತ್ವ ನೀತಿಯನ್ನು ರೂಪಿಸುವಾಗ ಸಂದರ್ಭ ಮತ್ತು ಮಾನದಂಡ,ಇವರೆಡರ ಬಗ್ಗೆಯೂ ಚಿಂತನೆ ನಡೆಸುತ್ತದೆ. ವಾಸ್ತವದಲ್ಲಿ ಐರೋಪ್ಯ ರಾಷ್ಟ್ರಗಳೂ ಇದೇ ಮಾರ್ಗವನ್ನು ಅನುಸರಿಸಿವೆ ಎಂದು ಮೂಲಗಳು ಹೇಳಿದವು.

ಇಯು ಸಂಸದರ ವಿವಿಧ ಗುಂಪುಗಳು ಸಿಎಎ ವಿರುದ್ಧ ಆರು ಗೊತ್ತುವಳಿಗಳನ್ನು ಮಂಡಿಸಿವೆ. ಈ ಎಲ್ಲ ಗೊತ್ತುವಳಿಗಳು ಒಂದೇ ಧಾಟಿಯಲ್ಲಿದ್ದು,ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯ ರದ್ದತಿಯನ್ನೂ ಪ್ರಸ್ತಾಪಿಸಿವೆ. ಬ್ರಸೆಲ್ಸ್‌ನಲ್ಲಿರುವ ಐರೋಪ್ಯ ಒಕ್ಕೂಟದ ಸಂಸತ್ತಿನಲ್ಲಿ ಬುಧವಾರ ಈ ಗೊತ್ತುವಳಿಗಳು ಚರ್ಚೆಯಾಗಲಿದ್ದು,ಗುರುವಾರ ಮತದಾನ ನಡೆಯಲಿದೆ.

ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವವರ ಜೊತೆ ರಚನಾತ್ಮಕ ಮಾತುಕತೆಗಳನ್ನು ನಡೆಸುವಂತೆ ಮತ್ತು ತಾರತಮ್ಯದಿಂದ ಕೂಡಿರುವ ಕಾಯ್ದೆಯನ್ನು ಹಿಂದೆಗೆದುಕೊಳ್ಳಬೇಕು ಎಂಬ ಅವರ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಈ ಗೊತ್ತುವಳಿಗಳಲ್ಲಿ ಭಾರತ ಸರಕಾರವನ್ನು ಆಗ್ರಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X