ಉಡುಪಿ ಜಿಲ್ಲಾ ಕಾಂಗ್ರೆಸ್ನಿಂದ 71ನೇ ಗಣರಾಜ್ಯೋತ್ಸವ ಆಚರಣೆ
ಉಡುಪಿ, ಜ.27: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಸೇವಾದಳ ಜಂಟಿಯಾಗಿ ಹಮ್ಮಿಕೊಂಡ 71ನೇ ಗಣರಾಜ್ಯೋತ್ಸವ ದಿನಾಚರಣೆ ಉಡುಪಿ ಕ್ಲಾಕ್ಟವರ್ನ ಗಾಂಧಿ ಪ್ರತಿಮೆ ಬಳಿ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು ಗಣರಾಜ್ಯೋತ್ಸವ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡ ರಾದ ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ಸತೀಶ್ ಅಮೀನ್ ಪಡುಕೆರೆ, ಜನಾರ್ದನ ಭಂಡಾರ್ಕಾರ್, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಇಸ್ಮಾಯಿಲ್ ಆತ್ರಾಡಿ, ಸುಕೇಶ್ ಕುಂದರ್, ಗಣೇಶ್ ರಾಜ್ ಸರಳೇಬೆಟ್ಟು, ಜಯ ಶೆಟ್ಟಿ ಬನ್ನಂಜೆ, ಲೂಯಿಸ್ ಲೋಬೊ, ಮಾಧವ ಬನ್ನಂಜೆ ಮುಂತಾದವರು ಉಪಸ್ಥಿತರಿದ್ದರು.
Next Story