Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-19 ವಿಶ್ವಕಪ್‌ ನಾಳೆ ಕ್ವಾರ್ಟರ್...

ಅಂಡರ್-19 ವಿಶ್ವಕಪ್‌ ನಾಳೆ ಕ್ವಾರ್ಟರ್ ಫೈನಲ್ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ27 Jan 2020 11:53 PM IST
share
ಅಂಡರ್-19 ವಿಶ್ವಕಪ್‌ ನಾಳೆ ಕ್ವಾರ್ಟರ್ ಫೈನಲ್ ಪಂದ್ಯ

ಪಾಟ್‌ಚೆಫ್‌ಸ್ಟ್ರೂಮ್(ದ.ಆಫ್ರಿಕಾ), ಜ.27: ಭಾರತದ ರವಿ ಬಿಶ್ನೋಯ್ ಹಾಗೂ ಆಸ್ಟ್ರೇಲಿಯದ ತನ್ವೀರ್ ಸಂಘಾ ನಡುವಿನ ಸ್ಪಿನ್ ಹೋರಾಟಕ್ಕೆ ಸಾಕ್ಷಿಯಾಗಲಿರುವ ಐಸಿಸಿ ಅಂಡರ್-19 ವಿಶ್ವಕಪ್‌ನ ಕ್ವಾರ್ಟರ್ ಫೈನಲ್ ಪಂದ್ಯ ಮಂಗಳವಾರ ಇಲ್ಲಿ ನಡೆಯಲಿದೆ.

 ಇತ್ತೀಚೆಗಿನ ದಿನಗಳಲ್ಲಿ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಸ್ಪಿನ್ನರ್‌ಗಳು ಮಹತ್ವದ ಪಾತ್ರ ನಿಭಾಯಿಸುತ್ತಿದ್ದಾರೆ. ಇದಕ್ಕೆ ಜೂನಿಯರ್ ಕ್ರಿಕೆಟ್ ಕೂಡ ಹೊರತಾಗಿಲ್ಲ. ಪ್ರತಿಭಾವಂತ ಸ್ಪಿನ್ನರ್ ರವಿ ಬಿಶ್ನೋಯ್ ಟೂರ್ನಮೆಂಟ್‌ನ ಅತ್ಯಂತ ಪರಿಣಾಮಕಾರಿ ಬೌಲರ್ ಆಗಿ ಹೊರಹೊಮ್ಮಿದ್ದು, ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಮೇಲುಗೈ ಸಾಧಿಸಲು ನೆರವಾಗುವ ಸಾಧ್ಯತೆಯಿದೆ.

ಟೂರ್ನಿಯಲ್ಲಿ ಈ ತನಕ ಆಡಿರುವ 3 ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ಪಡೆದಿರುವ ರವಿ ನ್ಯೂಝಿಲ್ಯಾಂಡ್ ವಿರುದ್ಧ ಪಂದ್ಯದಲ್ಲಿ 30 ರನ್‌ಗೆ 4 ವಿಕೆಟ್‌ಗಳನ್ನು ಉರುಳಿಸಿದ್ದರು. ಇತ್ತೀಚೆಗೆ ನಡೆದಿದ್ದ ಐಪಿಎಲ್ ಆಟಗಾರರ ಹರಾಜಿನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ರವಿ ಬಿಶ್ನೋಯ್ 2 ಕೋ.ರೂ.ಗೆ ಬಿಕರಿಯಾಗಿದ್ದರು. ಮತ್ತೊಂದೆಡೆ, ಆಸ್ಟ್ರೇಲಿಯದ ಸ್ಪಿನ್ನರ್ ತನ್ವೀರ್ ಸಂಘಾ ಕೂಡ ಟೂರ್ನಿಯಲ್ಲಿ ಒಟ್ಟು 10 ವಿಕೆಟ್‌ಗಳನ್ನು ಉರುಳಿಸಿದ್ದು, ಕ್ರಿಕೆಟ್ ಶಿಶು ನೈಜೀರಿಯ ವಿರುದ್ಧ 14 ರನ್‌ಗೆ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ. ತನ್ವೀರ್ ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕು ವಿಕೆಟ್ ಗೊಂಚಲು ಪಡೆದಿದ್ದರು.

ಮಂಗಳವಾರ ಇಲ್ಲಿ ನಡೆಯಲಿರುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯದ ಗೆಲುವಿಗೆ ರವಿ ಹಾಗೂ ತನ್ವೀರ್ ಅವರ ಪಾತ್ರ ಮಹತ್ವದ್ದಾಗಿದೆ. ಆಸ್ಟ್ರೇಲಿಯ ತಂಡ ಜೂನಿಯರ್ ಕ್ರಿಕೆಟ್‌ನಲ್ಲಿ ಭಾರತ ವಿರುದ್ಧದ ತನ್ನ ಕಳಪೆ ದಾಖಲೆಯನ್ನು ಉತ್ತಮಪಡಿಸಿಕೊಳ್ಳುವತ್ತ ಚಿತ್ತವಿರಿಸಿದೆ.

2013ರ ಬಳಿಕ ಕಳೆದ ಐದು ಅಂಡರ್-19 ಪಂದ್ಯಗಳಲ್ಲಿ ವಿವಿಧ ತಂಡಗಳ ವಿರುದ್ಧ ಆಡಿರುವ ಭಾರತ 4ರಲ್ಲಿ ಜಯ ಸಾಧಿಸಿದ್ದರೆ,ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಯಶಸ್ವಿ ಜೈಸ್ವಾಲ್(2 ಅರ್ಧಶತಕ), ಜೈಸ್ವಾಲ್ ಅವರ ಆರಂಭಿಕ ಜೊತೆಗಾರ ದಿವ್ಯಾಂಶ್ ಸಕ್ಸೇನ ಹಾಗೂ ನಾಯಕ ಪ್ರಿಯಂ ಗರ್ಗ್ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಉತ್ತರಪ್ರದೇಶದ ನೀಳಕಾಯದ ವೇಗದ ಬೌಲರ್ ಕಾರ್ತಿಕ್ ತ್ಯಾಗಿ ನಿರಂತರವಾಗಿ ಪ್ರತಿ ಗಂಟೆಗೆ 140 ಕಿ.ಮೀ.ವೇಗದಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾರೆ. ನ್ಯೂಝಿಲ್ಯಾಂಡ್ ವಿರುದ್ಧ ಆರಂಭದಲ್ಲಿ ದುಬಾರಿ ಬೌಲರ್ ಆಗಿದ್ದ ಎಡಗೈ ಸ್ಪಿನ್ನರ್ ಅಥರ್ವ ಅಂಕೋಲೇಕರ್ ಆ ಬಳಿಕ ತಿರುಗೇಟು ನೀಡಿ ಮೂರು ನಿರ್ಣಾಯಕ ವಿಕೆಟ್ ಪಡೆದಿದ್ದರು.

ಜೈಸ್ವಾಲ್, ಗರ್ಗ್, ತಿಲಕ್ ವರ್ಮಾ ಹಾಗೂ ಸಕ್ಸೇನ ಉಪಸ್ಥಿತಿಯಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿರುವಂತೆ ಕಾಣುತ್ತಿದೆ. ಆಸ್ಟ್ರೇಲಿಯದ ನಾಯಕ ಮೆಕೆಂಝಿ ಹಾರ್ವೆ(ಆಸ್ಟ್ರೇಲಿಯದ ಮಾಜಿ ಆಲ್‌ರೌಂಡರ್ ಇಯಾನ್ ಹಾರ್ವೆ ಅಳಿಯ)ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಹಾರ್ವೆ ಇಂಗ್ಲೆಂಡ್ ವಿರುದ್ಧ ಕೊನೆಯ ಲೀಗ್ ಪಂದ್ಯದಲ್ಲಿ 65 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X