Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಮೊದಲು ನಮಸ್ಕರಿಸಿ, ಆಮೇಲೆ ಗುಂಡು

ಮೊದಲು ನಮಸ್ಕರಿಸಿ, ಆಮೇಲೆ ಗುಂಡು

ದೇವನೂರ ಮಹಾದೇವದೇವನೂರ ಮಹಾದೇವ27 Jan 2020 11:55 PM IST
share
ಮೊದಲು ನಮಸ್ಕರಿಸಿ, ಆಮೇಲೆ ಗುಂಡು

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ವೋಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ- ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು ಪ್ರೂವ್ ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾ ಗಿದೆ-ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೇ? ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪುಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೇ? ಸರಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೇ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ.’’ ಈ ರೀತಿ ನಡೀತಾ ಇದೆ ಮೋದಿ, ಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ. ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು ಶೇ. 99 V/s ಶೇ. 1 ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

share
ದೇವನೂರ ಮಹಾದೇವ
ದೇವನೂರ ಮಹಾದೇವ
Next Story
X