Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಸಿಎಎ...

ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಸಿಎಎ ಜಾರಿ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ28 Jan 2020 8:15 PM IST
share
ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಸಿಎಎ  ಜಾರಿ: ಪ್ರಧಾನಿ ಮೋದಿ

ಹೊಸದಿಲ್ಲಿ,ಜ.28: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯನ್ನು ಮಂಗಳವಾರ ಇಲ್ಲಿ ಬಲವಾಗಿ ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ ಕಾಂಗ್ರೆಸ್ ನೇತೃತ್ವದ ಸರಕಾರಗಳ ವಿರುದ್ಧ ತೀವ್ರ ದಾಳಿ ನಡೆಸಿದರು. ಧಾರ್ಮಿಕ ಕಿರುಕುಳದಿಂದ ಪಾರಾಗಲು ತಮ್ಮ ತವರು ರಾಷ್ಟ್ರಗಳಿಂದ ತಪ್ಪಿಸಿಕೊಂಡು ಬಂದಿರುವ ಜನರಿಗೆ ಆಗಿರುವ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಸಿಎಎ ಅನ್ನು ಸರಕಾರವು ಜಾರಿಗೆ ತಂದಿದೆ ಎಂದು ಅವರು ಹೇಳಿದರು.

ವಾರ್ಷಿಕ ಎನ್‌ಸಿಸಿ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಮೋದಿ,‘ಸಿಎಎ ಕುರಿತು ಭೀತಿಯನ್ನು ಸೃಷ್ಟಿಸುತ್ತಿರುವವರು ಪಾಕಿಸ್ತಾನದಲ್ಲಿಯ ಧಾರ್ಮಿಕ ಅಲ್ಪಸಂಖ್ಯಾತರು ಅನುಭವಿಸುತ್ತಿರುವ ಕಿರುಕುಳಗನ್ನ್ನು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ. ತಮ್ಮ ಧರ್ಮದ ಕಾರಣದಿಂದ ಕಿರುಕುಳಕ್ಕೊಳಗಾದವರಿಗೆ ನಾವು ನೆರವಾಗಬಾರದೇ? ಕೆಲ ಸಮಯದ ಹಿಂದೆ ಪಾಕಿಸ್ತಾನದ ಸೇನೆಯು ಹೊರಡಿಸಿದ್ದ ಜಾಹೀರಾತೊಂದರಲ್ಲಿ ಸ್ವಚ್ಛತಾ ಕಾರ್ಮಿಕರ ಹುದ್ದೆಗಳಿಗೆ ಮುಸ್ಲಿಮೇತರರು ಮಾತ್ರ ಅರ್ಜಿ ಸಲ್ಲಿಸಬೇಕೆಂದು ಸ್ವಷ್ಟವಾಗಿ ತಿಳಿಸಲಾಗಿತ್ತು ’ಎಂದರು.

ಸಿಎಎ ಬಿಜೆಪಿಯ ಚುನಾವಣಾ ಭರವಸೆಯ ಭಾಗವಾಗಿದೆ ಎಂದು ಒತ್ತಿ ಹೇಳಿದ ಅವರು,ನೆರೆಯ ರಾಷ್ಟ್ರಗಳಲ್ಲಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಆಗಿರುವ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಸರಕಾರವು ಸಿಎಎ ಅನ್ನು ತಂದಿದೆ ಎಂದರು.

ಜಮ್ಮು-ಕಾಶ್ಮೀರದಲ್ಲಿಯ ಪ್ರಚಲಿತ ವಿದ್ಯಮಾನಗಳಿಗೆ ಅಬ್ದುಲ್ಲಾ ಮತ್ತು ಮುಫ್ತಿ ಕುಟುಂಬಗಳೇ ಕಾರಣವೆಂದು ದೂರಿದ ಮೋದಿ,ದೇಶಕ್ಕೆ ಸ್ವಾತಂತ್ರ ದೊರೆತಾಗಿನಿಂದಲೂ ಅಲ್ಲಿ ಸಮಸ್ಯೆಗಳು ಉಳಿದುಕೊಂಡು ಬಂದಿದ್ದವು ಮತ್ತು ಕೆಲವು ಕುಟುಂಬಗಳು ಹಾಗೂ ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭಗಳಿಗಾಗಿ ಅವುಗಳನ್ನು ಜೀವಂತವಾಗಿಟ್ಟಿದ್ದವು. ಇದರ ಫಲವಾಗಿಯೇ ಅಲ್ಲಿ ಭಯೋತ್ಪಾದನೆ ಹುಲುಸಾಗಿ ಬೆಳೆದಿತ್ತು ಎಂದರು. ಹಾಲಿ ಸರಕಾರವು ದಶಕಗಳಿಂದಲೂ ದೇಶವನ್ನು ಕಾಡುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದೆ ಎಂದರು.

ಪಾಕಿಸ್ತಾನವನ್ನು ತರಾಟೆಗೆತ್ತಿಕೊಂಡ ಅವರು,‘ಅದು ಮೂರು ಯುದ್ಧಗಳನ್ನು ಸೋತಿದೆ,ಆದರೂ ಭಾರತದ ವಿರುದ್ಧ ಛಾಯಾ ಸಮರಗಳನ್ನು ಮುಂದುವರಿಸಿದೆ. ಕೇಂದ್ರದಲ್ಲಿಯ ಹಿಂದಿನ ಸರಕಾರಗಳು ಈ ಸಮಸ್ಯೆಯನ್ನು ಕಾನೂನು ಮತ್ತು ಸುವ್ಯವಸ್ಥೆ ವಿಷಯವನ್ನಾಗಿ ಪರಿಗಣಿಸಿದ್ದವು. ಆದರೆ ಪಾಕ್ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸಶಸ್ತ್ರ ಪಡೆಗಳು ಅನುಮತಿ ಕೋರಿದ್ದರೂ ಈ ಸರಕಾರಗಳು ಮುಂದುವರಿದಿರಲಿಲ್ಲ. ಅವು ನಿಷ್ಕ್ರಿಯವಾಗಿದ್ದವು ’ಎಂದು ಆರೋಪಿಸಿದರು.

ಇಂದು ಜಮ್ಮು-ಕಾಶ್ಮೀರ ಮಾತ್ರವಲ್ಲ,ದೇಶದ ಇತರ ಭಾಗಗಳಲ್ಲಿಯೂ ಶಾಂತಿ ನೆಲೆಸಿದೆ. ದಶಕಗಳಿಂದಲೂ ಕಡೆಗಣಿಸಲ್ಪಟ್ಟಿದ್ದ ಈಶಾನ್ಯ ಭಾರತದ ಆಕಾಂಕ್ಷೆಗಳನ್ನು ಸರಕಾರವು ಪೂರೈಸುತ್ತಿದೆ ಎಂದರು.

ತನ್ನ ಸರಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಮೋದಿ,ಬೋಡೊ ಒಪ್ಪಂದ,ತ್ರಿವಳಿ ತಲಾಖ್ ಕಾನೂನು ಮತ್ತು ಜಮ್ಮು-ಕಾಶ್ಮೀರದಲ್ಲಿ ವಿಧಿ 370ರ ರದ್ದತಿಯನ್ನು ಪ್ರಸ್ತಾಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X