Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಕ್ಷಶಿಲೆಯು ಭಾಷೆಗಳ ತಾಯಿಯೇ ಹೊರತು ವಿವಿ...

ತಕ್ಷಶಿಲೆಯು ಭಾಷೆಗಳ ತಾಯಿಯೇ ಹೊರತು ವಿವಿ ಅಲ್ಲ: ಕೆ.ಪಿ.ರಾವ್

ವಾರ್ತಾಭಾರತಿವಾರ್ತಾಭಾರತಿ28 Jan 2020 10:04 PM IST
share
ತಕ್ಷಶಿಲೆಯು ಭಾಷೆಗಳ ತಾಯಿಯೇ ಹೊರತು ವಿವಿ ಅಲ್ಲ: ಕೆ.ಪಿ.ರಾವ್

ಉಡುಪಿ, ಜ.28: ತಕ್ಷಶಿಲೆ ವಿಶ್ವವಿದ್ಯಾನಿಲಯ ಆಗಿರಲೇ ಇಲ್ಲ. ಅಲ್ಲಿ ಋಷಿ ಅಥವಾ ಅಧ್ಯಾಪಕರ ಪರಂಪರೆ ಎಂಬುದು ಇರಲಿಲ್ಲ. ಅಲ್ಲಿ ಒಬ್ಬರು ಮುಖ್ಯಸ್ಥ ಮತ್ತು ಒಂದು ಕಾಲಘಟ್ಟ ಎಂಬುದು ಇರಲಿಲ್ಲ. ಅದು ವಿದ್ಯಾಕೇಂದ್ರ ಆಗಿತ್ತೆ ಹೊರತು ವಿಶ್ವವಿದ್ಯಾನಿಲಯ ಎಂದು ಹೇಳುವಂತಹ ಯೋಗ್ಯತೆ ಅದಕ್ಕೆ ಇರಲಿಲ್ಲ ಎಂದು ಹಿರಿಯ ವಿದ್ವಾಂಸ ನಾಡೋಜ ಪ್ರೊ. ಕೆ.ಪಿ.ರಾ್ ಹೇಳಿದ್ದಾರೆ.

ಉಡುಪಿ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಹಯೋಗದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ಆಯೋಜಿಸಲಾದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸಿ್ವೀಕರಿಸಿ ಅವರು ಮಾತನಾಡುತಿದ್ದರು.

ತಕ್ಷಶಿಲೆ ಒಂದು ರೀತಿಯ ಪಂಡಿತರ ಸಮ್ಮಿಲನ ಅಥವಾ ಪರಸ್ಪರರು ಮಾತ ನಾಡಲು ಅನುಕೂಲಗಳು ಇದ್ದ ಕಾಲ ಆಗಿತ್ತು. ಇದರಿಂದ ಅಲ್ಲಿ ಸಾಹಿತ್ಯ ಮತ್ತು ಭಾಷೆ ಒಂದು ರೂಪ ಪಡೆಯಲು ಸಾಧ್ಯವಾಯಿತು. ಆದುದರಿಂದ ತಕ್ಷಶಿಲೆ ವಿಶ್ವವಿದ್ಯಾನಿಲಯ ಅಲ್ಲ. ವಿಶ್ವವಿದ್ಯಾನಿಲಯಗಳ ಹಾಗೂ ಭಾಷೆಗಳ ತಾಯಿಯಾಗಿತ್ತು ಎಂದು ಅವರು ತಿಳಿಸಿದರು.

ಯಾವುದೇ ಭಾಷೆ ಸಣ್ಣದ್ದು ಅಲ್ಲ, ದೊಡ್ಡದು ಕೂಡ ಅಲ್ಲ. ಎಲ್ಲದಕ್ಕೂ ಅದರದ್ದೇ ಆದ ಸ್ಥಾನಮಾನ ಇದೆ. ಮಾತೃ ಭಾಷೆ ಎಂಬುದು ಪ್ರತಿ ಮನುಷ್ಯ ಕಲಿಯುವ ಮೊದಲ ಭಾಷೆಯಾಗಿದೆ. ಇದರ ನಂತರ ಕಲಿಯುವ ಭಾಷೆಯು ನಮ್ಮ ಮಾತೃ ಭಾಷೆಯ ಬುನಾದಿಯ ಮೇಲೆ ಕಟ್ಟಿರುತ್ತದೆ. ಒಂದು ಭಾಷೆಯ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗದಿದ್ದರೆ, ಎಂದಿಗೂ ಬೇರೆ ಯಾವುದೇ ಭಾಷೆಯನ್ನು ಕಲಿಯಲು ಸಾಧ್ಯ ಇಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಹಿತಿ ಡಾ.ವೈದೇಹಿ ಮಾತನಾಡಿ, ಕೆ.ಪಿ. ರಾವ್ ಹಿಮಾಲಯದಂತೆ ಬೆಳೆದು ನಿಂತವರು. ಇವರು ನಮ್ಮ ನಡುವೆ ಇರುವ ವಿಸ್ಮಯ. ಕನ್ನಡ ಮಾಧ್ಯಮದಲ್ಲಿ ಕಲಿತ ಇವರನ್ನು, ಕನ್ನಡವೇ ದೊಡ್ಡ ವ್ಯಕ್ತಿಯನ್ನಾಗಿ ರೂಪಿಸಿದೆ. ದುಡ್ಡಿಗೆ ಮಾರಿ ಹೋಗುವ ಇಂದಿನ ಜಗತ್ತಿನಲ್ಲಿ ಇವರು ಅದನ್ನು ಮೀರಿ ನಿಂತಿದ್ದಾರೆ ಎಂದರು.

ಕೆಪಿ ರಾವ್ ನೀಡಿದ ಕನ್ನಡ ಶಬ್ದ ತಂತ್ರಾಂಶ ಇಡೀ ಕನ್ನಡ ಸಹಸ್ರ ಲೋಕಕ್ಕೆ ನೀಡಿದ ದೊಡ್ಡ ಕೊಡುಗೆ. ಕನ್ನಡ ಭಾಷಾ ಪ್ರೀತಿಯಿಂದ ಅವರು ಇಷ್ಟು ದೊಡ್ಡ ಸಾಧನೆ ಮಾಡಿದರು. ಇಂದು ಸಾಹಿತ್ಯದ ಹಸಿವು ಕಡಿಮೆ ಆಗಿದೆ. ಸಂಗೀತ, ಓದು, ಸಾಹಿತ್ಯದ ಹಸಿವೇ ಇಲ್ಲವಾಗಿದೆ. ಓದುವ, ತಿಳಿಯುವ ಕೇಳುವ ಹಸಿವು ಇದ್ದಾಗ ಮಾತ್ರ ದೊಡ್ಡ ಸಾಧನೆ ಮಾಡಲು ಸಾಧ್ಯ ಎಂದು ಅವರು ತಿಳಿಸಿದರು.

ಮಣಿಪಾಲ ಮಾಹೆಯ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ವರದೇಶಿ ಹಿರೇಗಂಗೆ ಅಭಿನಂದನಾ ಭಾಷಣ ಮಾಡಿದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ, ಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭ ಸಾಧಕ ಕೆ.ಪಿ.ರಾವ್ ಜೊತೆ ಸಂವಾದ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಶಿಲ್ಪಾಜೋಶಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅಧ್ಯಕ್ಷತೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸುರೇಂದ್ರ ಅಡಿಗ ಉಪಸ್ಥಿತಿಯಲ್ಲಿ ಜಿಲ್ಲಾ ಕವಿಗೋಷ್ಠಿ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X