Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕಲಿ ಖೋಟಾ ಚಲಾವಣೆ ದಂಧೆ: 3.66 ಲಕ್ಷ...

ನಕಲಿ ಖೋಟಾ ಚಲಾವಣೆ ದಂಧೆ: 3.66 ಲಕ್ಷ ರೂ. ಮೌಲ್ಯದ ನೋಟುಗಳು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ28 Jan 2020 11:32 PM IST
share
ನಕಲಿ ಖೋಟಾ ಚಲಾವಣೆ ದಂಧೆ: 3.66 ಲಕ್ಷ ರೂ. ಮೌಲ್ಯದ ನೋಟುಗಳು ಜಪ್ತಿ

ದಾವಣಗೆರೆ, ಜ.28: ಸಂತೆ, ಜಾತ್ರೆಗಳಲ್ಲಿ ಗ್ರಾಮೀಣ ಜನರಿಗೆ ನಕಲಿ ಖೋಟಾ ನೀಡಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಜಾಲವೊಂದನ್ನು ಜಿಲ್ಲೆಯ ಪೊಲೀಸರು ಪತ್ತೆ ಹಚ್ಚಿದ್ದು, ಅವರಿಂದ 500, 2000 ಸಾವಿರ ಮುಖ ಬೆಲೆಯ 3,66,200 ರೂ. ನಕಲಿ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.  

ಹರಪನಹಳ್ಳಿಯ ಹಲುವಾಗಲು ಗ್ರಾಮದ ಹನುಮಂತ, ಅರಸನಾಳು ಹಾಲೇಶ್, ಮಡಿವಾಳ ಮಂಜಪ್ಪ, ಸಂತೋಷ, ಚಂದ್ರಪ್ಪ, ಅರಸನಾಳು ಗ್ರಾಮದ ಉದಯ, ಸಂತೋಷ, ನೀಲುಗಂದ ಗ್ರಾಮದ ನಿಂಗಪ್ಪ, ಕೃಷ್ಣಪ್ಪ, ವೆಂಕಟೇಶ್, ಪುಟ್ಟಪ್ಪ ಬಂಧಿತರು. ಮತ್ತೂರು ಗ್ರಾಮದ ನಾಗನಗೌಡ ತಲೆ ಮರೆಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ತಂದೆ ಪುಟ್ಟಪ್ಪ, ಮಗ ವೆಂಕಟೇಶ್ ರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈ ಹಿಂದೆ ಬೆಂಗಳೂರನಲ್ಲಿ 2013 ರಲ್ಲಿ ಖೋಟಾ ನೋಟು ಚಲಾವಣೆಯಲ್ಲಿ ಪ್ರಕರಣದಲ್ಲಿದ್ದ ಪುಟ್ಟಪ್ಪ (75) ಆರೋಪಿಯಾಗಿರುವ ಮಾಹಿತಿಯಿದೆ. ಪ್ರಕರಣ ತನಿಖೆ ಕೈಗೊಳ್ಳಲಾಗಿದೆ. ಬಂಧಿತರಿಂದ ಎರಡು ಕಲರ್ ಪ್ರಿಂಟರ್ ಯಂತ್ರ, ಜೆಲ್ ಪೆನ್ನು, ಟೇಪ್, ಸ್ಕೇಲ್ ಕಟ್ಟರ್ ಹಾಗೂ ಕೃತ್ಯಕ್ಕೆ ಬಳಸಿದ ಗೂಡ್ಸ್ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.  

ಕಲರ್ ಪ್ರಿಂಟರ್ ಸಹಾಯದೊಂದಿಗೆ 100, 500, 2000 ರೂ. ಮುಖಬೆಲೆಯ ನೋಟುಗಳನ್ನು ಎಕ್ಸ್ಎಲ್ ಬಾಂಡ್ ಪೇಪರನಲ್ಲಿ ಉಪಯೋಗಿಸಿ ಕಲರ್ ಜೆರಾಕ್ಸ್ ಮಾಡಿ ಜನರಿಗೆ ಚಲಾವಣೆ ಮಾಡುತ್ತಿದ್ದರು. ಜ.26 ರಂದು ಲೋಲೇಶ್ವರ ಗ್ರಾಮದಲ್ಲಿ ಚಲಾವಣೆ ಮಾಡಲು ಪ್ರಯತ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಮುಂದಿನ ತನಿಖೆಗೆ ಸಿಇಎನ್ ಠಾಣೆಗೆ ಈ ಪ್ರಕರಣ ವಹಿಸಲಿದ್ದೇವೆ ಎಂದರು. 

ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಲೋಲೇಶ್ವರ ಗ್ರಾಮದ ಸಾರ್ವಜನಿಕರಿಗೆ ಹಾಗೂ ಇಡೀ ಪ್ರಕರಣವನ್ನು ಪತ್ತೆ ಹಚ್ಚಿದ ಸಿಬ್ಬಂದಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು. 

ಈ ವೇಳೆ ಎಎಸ್ಪಿ ರಾಜೀವ್, ಡಿವೈಎಸ್‍ಪಿ ಮಲ್ಲೇಶ್ ದೊಡ್ಡಮನಿ, ವೃತ್ತ ನಿರೀಕ್ಷಕ ಕುಮಾರ್ ಕೆ, ಪಿಎಸ್‍ಐ ಪ್ರಕಾಶ್ ಸೇರಿದಂತೆ ಇತರರು ಇದ್ದರು. 

ಸುಪ್ರೀಕೋರ್ಟ್ ಆದೇಶ ಪ್ರಕಾರ ಪ್ರತಿಯೊಂದು ಠಾಣೆಯಲ್ಲೂ ಕಾಣಿಯಾದ ವ್ಯಕ್ತಿಗಳ ಪ್ರಕರಣಗಳಿಗೆ ಹೆಚ್ಚಿನ ಆದ್ಯತೆಯಲ್ಲಿ ತನಿಖೆ ನಡೆಸಬೇಕಿದೆ. ಮಹಿಳೆಯರು, ಹುಡುಗಿಯರು ಕಾಣಿಯಾದ ಪ್ರಕರಣಗಳಿಗೆ ಒತ್ತು ನೀಡಬೇಕೆಂದು ಸೂಚನೆ ನೀಡಿದೆ. ಅದರಂತೆ ಇತ್ತೀಚೆಗೆ ಕಾಣೆಯಾದ ತಾಯಿ -ಮಗಳು ಗೋವಾದಲ್ಲಿ ದೊರೆತಿದ್ದಾರೆ ಎಂದು ಮಾಹಿತಿ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X