Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆ.3ರೊಳಗೆ ಸಾಹಿತ್ಯ ಸಮ್ಮೇಳನದ ಎಲ್ಲ...

ಫೆ.3ರೊಳಗೆ ಸಾಹಿತ್ಯ ಸಮ್ಮೇಳನದ ಎಲ್ಲ ಕಾರ್ಯಗಳು ಪೂರ್ಣಗೊಳಿಸಿ: ಕಲಬುರಗಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ28 Jan 2020 11:50 PM IST
share
ಫೆ.3ರೊಳಗೆ ಸಾಹಿತ್ಯ ಸಮ್ಮೇಳನದ ಎಲ್ಲ ಕಾರ್ಯಗಳು ಪೂರ್ಣಗೊಳಿಸಿ: ಕಲಬುರಗಿ ಜಿಲ್ಲಾಧಿಕಾರಿ

ಕಲಬುರಗಿ, ಜ.28: ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7ರ ವರೆಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲ ಪೂರ್ವಸಿದ್ಧತೆ ಕಾರ್ಯಗಳನ್ನು ಫೆ.3 ರೊಳಗೆ ಮುಗಿಸಿಕೊಂಡು ಕಾರ್ಯಾನುಷ್ಠಾನಕ್ಕೆ ಲಭ್ಯವಿರುವ ಬಗ್ಗೆ ಖುದ್ದಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಸಂಚಾಲಕ ಹಾಗೂ ಜಿಲ್ಲಾಧಿಕಾರಿ ಶರತ್, ವಿವಿಧ ಸಮಿತಿಗಳ ಕಾರ್ಯಾಧ್ಯಕ್ಷರಿಗೆ ಸೂಚನೆ ನೀಡಿದರು.

ನಗರದಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಒಂದು ವಾರ ಬಾಕಿಯಿದ್ದು, ಎಲ್ಲ ಸಮಿತಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಸಮ್ಮೇಳನದ ಹಿಂದಿನ ದಿನದ ವರೆಗೆ ಕಾಯದೆ 2 ದಿನಗಳ ಮುಂಚೆಯೆ ಎಲ್ಲ ಕೆಲಸಗಳನ್ನು ಮುಗಿಸಬೇಕು ಎಂದರು.

ಸಮ್ಮೇಳನ ಹಿನ್ನೆಲೆಯಲ್ಲಿ ಸಂಪೂರ್ಣ ಕಲಬುರಗಿ ನಗರ ಮದುವಣಗಿತ್ತಿಯಂತೆ ಸೌಂದರ್ಯೀಕರಣವಾಗಬೇಕು. ರಸ್ತೆ ಬದಿಯ ಗೋಡೆಗಳ ಮತ್ತು ಚಿತ್ರ, ಬರಹಗಳ ಕಾರ್ಯ ಬೇಗ ಮುಗಿಸುವುದಲ್ಲದೆ ಸ್ವಾಗತ ಕಮಾನು ನಿರ್ಮಿಸಿ ಎಲ್ಲೆಡೆ ಕನ್ನಡ ಧ್ವಜಗಳು ರಾರಾಜಿಸಬೇಕು ಎಂದು ಅವರು ಹೇಳಿದರು. ಧೂಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ನಗರ ಸೌಂದರ್ಯೀಕರಣವಾದ ನಂತರ ಯಾವುದೇ ಸಂಘಟನೆಗಳು ಪೋಸ್ಟರ್, ಭಿತ್ತಿ ಪತ್ರಗಳನ್ನು ನಗರದ ಪ್ರಮುಖ ವೃತ್ತ-ರಸ್ತೆ ಬದಿ ಗೋಡೆಗಳ ಮೇಲೆ ಅಂಟಿಸದಂತೆ ನಿಗಾ ವಹಿಸಬೇಕು ಎಂದು ಅಲಂಕಾರ ಸಮಿತಿಯ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಮೂರು ದಿನಗಳ ಸಮ್ಮೇಳನಕ್ಕೆ ಲಕ್ಷಾಂತರ ಜನ ಆಗಮಿಸುವುದರಿಂದ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ, ಕುಡಿಯುವ ನೀರು ಕೊರತೆಯಾಗದಂತೆ ಹೆಚ್ಚಿನ ಗಮನಹರಿಸಬೇಕು. ವಿವಿ ಅವರಣದಲ್ಲಿ ಬಳಕೆಗೆ ನಾಳೆಯೆ ಬೋರ್‌ವೆಲ್ ಕೊರೆಯಿಸಬೇಕು. ಎಲ್ಲಿಯೂ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆಯಾಗದಂತೆ ಎಚ್ಚರ ವಹಿಸಬೇಕು. ಗಣ್ಯರು ಮತ್ತು ನೋಂದಣಿ ಪ್ರತಿನಿಧಿಗಳಿಗೆ ಶಿಷ್ಟಾಚಾರದಂತೆ ಸೂಕ್ತ ವಸತಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಮ್ಮೇಳನದ ವಾಣಿಜ್ಯ ಮಳಿಗೆಯಲ್ಲಿ ಆರೋಗ್ಯ ಸೇವೆ ನೀಡಲು ಮುಂದೆ ಬಂದಿರುವ 6 ಖಾಸಗಿ ಅಸ್ಪತ್ರೆಗಳು ಸ್ಟಾಲ್ ತೆರೆಯಲು ಅವಕಾಶ ಮಾಡಿಕೊಡಬೇಕು. ಇನ್ನು ಆರ್ಟ್ ಗ್ಯಾಲರಿಯಲ್ಲಿ ಲೇಖಕರ ಮತ್ತು ಓದುಗರ ನಡುವೆ ಕುಶಲೋಪರಿ ವಿಚಾರಿಸಲು ಲೇಖಕರ ಲಾಂಜ್ ಮಾಡಬೇಕು ಮತ್ತು ವಿವಿಧ ಇಲಾಖೆಗಳ ಜನಪರ ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆಗೂ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮುಖ್ಯ ಹಾಗೂ ಸಮನಾಂತರ ವೇದಿಕೆಗಳಲ್ಲಿ ಕಾರ್ಯಕ್ರಮಗಳು ಸುಸೂತ್ರವಾಗಿ ಜರುಗಲು ಪ್ರತ್ಯೇಕ ತಂಡಗಳನ್ನು ರಚಿಸಬೇಕು. ಶಾಲು, ಸ್ಮರಣಿಕೆ, ಗಾಲಿ ಕುರ್ಚಿ, ಗಣ್ಯರನ್ನು ವೇದಿಕೆಗೆ ಕರೆದುಕೊಂಡು ಬರುವುದು ಹೀಗೆ ಪ್ರತಿಯೊಂದಕ್ಕೂ ಸಿಬ್ಬಂದಿ ನಿಯೋಜಿಸಿ ಅಗತ್ಯ ಶಿಷ್ಟಾಚಾರ ಪಾಲನೆ ಮಾಡಬೇಕು ಎಂದು ಶರತ್ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X